Wednesday, February 12, 2025

ಬಸ್ ಮಾಲಕ ನೊರ್ಬಟ್ (ಮುನ್ನ ) ಬ್ರೈನ್ ಎಮರೇಜ್ ನಿಂದ ನಿಧನ

ಬಂಟ್ವಾಳ: ಖಾಸಗಿ‌ಬಸ್ ಮಾಲಕ, ಕಾಂಗ್ರೇಸ್ ಕಾರ್ಯಕರ್ತ, ಪರಸಭಾ ಮಾಜಿ ನಾಮನಿರ್ದೇಶನ ಸದಸ್ಯ ಮೆದುಳಿನ ಕಾಯಿಲೆಯಿಂದ ಇಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಬಂಟ್ವಾಳ ತಾಲೂಕಿನ ಪುರಸಭಾ ವ್ಯಾಪ್ತಿಯ ಲೊರೆಟ್ಟೋಪದವು ಮಂಡಾಡಿ ನಿವಾಸಿ ಪಿಯೂಸ್ ರೊಡ್ರಿಗಸ್ ಅವರ ಪುತ್ರ
ನೊರ್ಬಟ್ ಡಿ.ಸೋಜ. (50) ಬ್ರೈನ್ ಎಮರೇಜ್ ನಿಂದ ಅಸುನೀಗಿದ್ದಾರೆ.
ನೊರ್ಬಟ್ ಅವರು ನಿನ್ನೆ ಬುಧವಾರ ಸಂಜೆಯ ವೇಳೆ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿದೆ ಎಂದು‌ ತುಂಬೆ ಆಸ್ಪತ್ರೆ ದಾಖಲು ಮಾಡಲಾಗಿತ್ತು. ‌
ಆದರೆ ಅವರಿಗೆ ರಕ್ತದ ಒತ್ತಡ ಜೊತೆ ಮೆದುಳಿನ ಸಮಸ್ಯೆ ಯಿರುವುದರಿಂದ ಹೆಚ್ಚಿನ ಚಿಕಿತ್ಸೆಯ ಉದ್ದೇಶದಿಂದ ಮಂಗಳೂರು ಯುನಿಟಿ ಆಸ್ಪತ್ರೆಗೆ ದಾಖಲು ಮಾಡಲಾಯಿತು.
ಆದರೆ ಇಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಗುರುವಾರ ಮಧ್ಯಾಹ್ನ 3.50 ಗಂಟೆಯ ವೇಳೆ ಇವರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಬಂಟ್ವಾಳ ಖಾಸಗಿ ಬಸ್ ಏಜೆಂಟ್ ಮೂಲಕ ಚಿರಪರಿಚಿತ ರಾಗಿರುವ ಇವರು ಪ್ರಸ್ತುತ ನಿತ್ಯಾಧರ ಎಂಬ ಹೆಸರಿನ ಐದು ಬಸ್ ಗಳ ಮಾಲಕರಾಗಿದ್ದಾರೆ.
ಕಾಂಗ್ರೇಸ್ ಸಕ್ರೀಯ ಕಾರ್ಯಕರ್ತರಾಗಿದ್ದ ಇವರು ಕಳೆದ ಅವಧಿಯಲ್ಲಿ ಪುರಸಭೆಯ ನಾಮನಿರ್ದೇಶನ ಸದಸ್ಯ ರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಪುರಸಭಾ ಸದಸ್ಯ ಸ್ಥಾನಕ್ಕೆ ಸ್ಪರ್ಧೆ ನಡೆಸಿ ಪರಾಜಯಗೊಂಡಿದ್ದರು. ಆದರೆ ಸಾಮಾಜಿಕ, ರಾಜಕೀಯವಾಗಿ ತೊಡಗಿಸಿಕೊಂಡ ಇವರು ಬಸ್ ಮುನ್ನ ಎಂದೇ ಪರಿಚಿತರಾಗಿದ್ದರು.
ಇವರು ಪತ್ನಿ ಬಬಿತಾ ಹಾಗೂ ಒರ್ವ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಇವರ ಸಂಬಂಧಿಕರು ವಿದೇಶದಲ್ಲಿದ್ದು , ಅವರ ಬರುವಿಕೆಗಾಗಿ
ನೊರ್ಬಟ್ ಅವರ ಮೃತದೇಹ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆ ಯ ಶೀಥಲೀಕರಣದಲ್ಲಿ ಇಡಲಾಗಿದ್ದು ಶನಿವಾರ ಅಂತ್ಯಕ್ರಿಯೆ ನಡೆಯಲಿದೆ.‌
ಬಂಟ್ವಾಳ ಮಾಜಿ ಸಚಿವ ಬಿ.ರಮಾನಾಥ ರೈ, ಬಂಟ್ವಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಬೇಬಿಕುಂದರ್, ಜಿ.ಪಂ.ಸದಸ್ಯ ಪದ್ಮಶೇಖರ್ ಜೈನ್, ಮಾಜಿ ಬ್ಲಾಕ್ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್ ಮತ್ತಿತರರು ಆಸ್ಪತ್ರೆ ಗೆ ಬೇಟಿ ನೀಡಿ ಅಂತಿಮ ದರ್ಶನ ಪಡೆದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...