Thursday, July 10, 2025

ಬಿಗಿ ಬಂದೋಬಸ್ತ್ : N R C ವಿರೋಧಿ ಹೋರಾಟ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ

ಬಂಟ್ವಾಳ: ಕೇಂದ್ರ ಸರಕಾರ ಜಾರಿಗೆ ತರುವ ದೇಶ ವಿಭಜಿಸುವ ಕಾಯ್ದೆ ವಿರುದ್ದ ಬಂಟ್ವಾಳ ತಾಲೂಕು ಮಟ್ಟದಲ್ಲಿ N R C ವಿರೋಧಿ ಹೋರಾಟ ಸಮಿತಿ ಬಂಟ್ವಾಳ ತಾಲೂಕು ಹಾಗೂ ಸರ್ವ ಸಂಘ ಸಂಸ್ಥೆಗಳು ಒಂದಾಗಿ ನಡೆಸುವ ಬೃಹತ್ ಪ್ರತಿಭಟನಾ ಸಮಾವೇಶವು ಡಿಸೆಂಬರ್ 30 (ಇಂದು) ಮಧ್ಯಾಹ್ನ 2:30ಕ್ಕೆ ಬಿ ಸಿ ರೋಡ್ ಬಂಟ್ವಾಳ ಸರ್ಕಲ್ (ರೈಲ್ವೆ ಬ್ರಿಜ್ ಬಳಿ) ನಿಂದ ಮೆರವಣಿಗೆ ನಡೆದು ಬಳಿಕ ಗೂಡಿನ ಬಳಿ ಮಾರ್ಗದಲ್ಲಿ ನಡೆಯಲಿದೆ.
ಬೃಹತ್ ಪ್ರತಿಭಟನೆಗೆ ಮುಂಜಾಗ್ರತಾ ಕ್ರಮವಾಗಿ ಬಂಟ್ವಾಳ ಪೊಲೀಸರು ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡುವುದರ ಜೊತೆಗೆ ವಿಶೇಷ ಕಣ್ಗಾವಲು ವ್ಯವಸ್ಥೆ ಕಲ್ಪಿಸಿದ್ದಾರೆ.
ಬಂಟ್ವಾಳ ಪೊಲೀಸರ ಜೊತೆಗೆ ಹೆಚ್ಚುವರಿ ಯಾಗಿ ಬೇರೆ ಬೇರೆ ಕಡೆಗಳಿಂದ 1 ಎ.ಎಸ್.ಪಿ. 6 ವೃತ್ತನಿರೀಕ್ಷಕರುಗಳು, 19 ಸಬ್ ಇನ್ಸ್ ಪೆಕ್ಟರ್ ಗಳು, 6 ಕೆ.ಎಸ್.ಆರ್.ಪಿ.1 ಡಿ.ಎ.ಆರ್ ಮತ್ತು 300 ಅಧಿಕ ಪೊಲೀಸರು ನಿಯೋಜನೆ ಮಾಡಲಾಗಿದೆ. ಪಾಣೆಮಂಗಳೂರು, ಬಿಸಿರೋಡು ಹಾಗೂ ಮೆಲ್ಕಾರ್ ಮೂರು ಕಡೆಗಳಲ್ಲಿ ಡಿಯರ್ ಗ್ಯಾಸ್ ಗಳನ್ನು ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಪ್ರತ್ಯೇಕ ವಿಡಿಯೋ ಕ್ಯಾಮರಾಗಳನ್ನು ಒಳಗೊಂಡು ಪ್ರತಿಚಲನಲಗಳನ್ನು ಗಮನಿಸಲಾಗುತ್ತಿದೆ ಎಂದು ಎಸ್.ಪಿ.ಲಕ್ಮೀಪ್ರಸಾದ್ ತಿಳಿಸಿದ್ದಾರೆ.

More from the blog

ಬಂಟ್ವಾಳದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಮತ್ತು ಅರಿವು ಕಾರ್ಯಕ್ರಮ.. 

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಛೇರಿ, ಬಂಟ್ವಾಳ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ಬಂಟ್ವಾಳ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ...

ಗುರುಪೂರ್ಣಿಮಾ ಪ್ರಯುಕ್ತ ಅಮ್ಟೂರಿನಲ್ಲಿ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾದ ದಿನೇಶ್ ಆಮ್ಟೂರು ಇವರ ನೇತೃತ್ವದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಥಮಿಕ ಶಿಕ್ಷಣವನ್ನು ಮಾಡಲು ಪ್ರೇರಣೆ ಕೊಟ್ಟಂತಹ ಗುರುಗಳಾದ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ ಮುಖ್ಯೋಪಾಧ್ಯಾಯರಾದ...

ಗುರುಪೂರ್ಣಿಮಾ ಪ್ರಯುಕ್ತ ಪ್ರಸೂತಿ ತಜ್ಞೆ ವೆಂಕಮ್ಮರಿಗೆ ಬಿಜೆಪಿ ವತಿಯಿಂದ ಗೌರವರ್ಪಣೆ..

ಬಂಟ್ವಾಳ : ತಾಲೂಕಿನ ಕೊಡಂಬೆಟ್ಟು ಪರಿಸರದಲ್ಲಿ ನೂರಾರು ಮಂದಿಗಳ ಬಾಳಿನಲ್ಲಿ ಬೆಳಕು ಪ್ರಜ್ವಲಿಸಿದ ಪ್ರಸೂತಿ ತಜ್ಞೆ ವೆಂಕಮ್ಮ ಎಂಬವರಿಗೆ ಗುರು ಪೂರ್ಣಿಮಾ ದಿನಾಚರಣೆಯ ಪ್ರಯುಕ್ತ. ಬಿಜೆಪಿ ವತಿಯಿಂದ ಪಕ್ಷದ ನಾಯಕಿ ಸುಲೋಚನ ಜಿ....

ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ, ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಸಾಮೂಹಿಕ ವಿವಾಹ..

ಬಂಟ್ವಾಳ : ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ (ಅಬುದಾಬಿ), ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಜುಲೈ 13 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಹಾಲ್ ನಲ್ಲಿ ನಡೆಯಲಿರುವ ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ...