Thursday, February 13, 2025

ರಾಷ್ಟ್ರೀಯ ಸೇವಾ ಯೋಜನೆಯ ಹಳೆ ವಿದ್ಯಾರ್ಥಿ ಗಳ ಸ್ವಯಂ ಸೇವಕರ ತಂಡದಿಂದ ವಾರ್ಷಿಕ ವಿಶೇಷ ಶಿಬಿರ

ಸ್ನೇಹ ಸಮ್ಮಿಲನ ತಂಡ ಮಂಗಳೂರು ಎನ್ನುವ ರಾಷ್ಟ್ರೀಯ ಸೇವಾ ಯೋಜನೆಯ ಹಳೆ ವಿದ್ಯಾರ್ಥಿ ಗಳ ಸ್ವಯಂ ಸೇವಕರ ತಂಡದಿಂದ ಎರಡು ದಿನದ ವಾರ್ಷಿಕ ವಿಶೇಷ ಶಿಬಿರ- 2024 ಬಂಟ್ವಾಳ ತಾಲೂಕಿನ ಕುದ್ರಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು.

ಈ ಸಂದರ್ಭದಲ್ಲಿ ಸ್ವಯಂಸೇವಕರಿಂದ ಶಾಲೆಗೆ ವಿಶೇಷ ತರಕಾರಿ ಕೈತೋಟವನ್ನು ರಚಿಸಿಕೊಡಲಾಯಿತು. ಹಾಗೂ ಮಕ್ಕಳಿಗೆ ಶುದ್ಧ ನೀರಿನ ಘಟಕವನ್ನು ಕೊಡುಗೆಯಾಗಿ ನೀಡಿ ಶಾಲೆಗೆ ಹಸ್ತಾಂತರಿಸಲಾಯಿತು

ಉದ್ಘಾಟನಾ ಕಾರ್ಯಕ್ರಮದ ಲ್ಲಿ ಸಮಾಜ ಸೇವೆಗಾಗಿ ಚಿಂತು ಸುಳ್ಯ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕುದ್ರೆಬೆಟ್ಟು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ವಿಠಲ, ಮಾಜಿ ಪಂಚಾಯತ್ ಸದಸ್ಯ ಸುಂದರ ಸಾಲಿಯಾನ್, ಮಣಿಕಂಠ ಭಜನಾ ಮಂದಿರದ ಅಧ್ಯಕ್ಷ ಲೋಕನಂದ ಏಳ್ತೀಮಾರ್, ಶಾಲಾ ಮುಖ್ಯ ಶಿಕ್ಷಕಿ ದೇವಿಕಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವರಾಜ್, ಅಂಗನವಾಡಿ ಶಿಕ್ಷಕಿ ಸುರೇಖ, ಏನೇಪೋಯ ಮಂಗಳೂರಿನ ಗಾರ್ಡನ್ ಪರಿವೀಕ್ಷಕರಾದ ಹಂಸ, ಮೊದಲಾದವರು ಉಪಸ್ಥಿತರಿದ್ದರು.

ಸಮೃದ್ಧ ಪ್ರಾರ್ಥಿಸಿ, ಪ್ರಥಮ್ ಸ್ವಾಗತಿಸಿ, ಸ್ನೇಹ ಸಮ್ಮೇಳನದ ಮುಖ್ಯಸ್ಥರಾದ ನಾಗರಾಜ್ ಕಾರ್ಯಕ್ರಮದ ಬಗ್ಗೆ ಪ್ರಾಸ್ತವಿಕ ಮಾತನಾಡಿ, ನಿತಿನ್ ವಂದಿಸಿ, ಸುಶ್ಮಿತಾ ಕೆ ಕಾರ್ಯಕ್ರಮ ನಿರೂಪಿಸಿದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...