ವಿಟ್ಲ: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಚಟುವಟಿಕೆಗಳು ಎನ್ನೆಸ್ಸೆಸ್ನಲ್ಲಿ ಇದ್ದು ಇವು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಮಾತ್ರವಲ್ಲದೇ ಮೌಲ್ಯ ಶಿಕ್ಷಣವನ್ನು ನೀಡುವ ಒಂದು ದೊಡ್ಡ ಸಂಸ್ಥೆಯಾಗಿದೆ. ವಿದ್ಯಾರ್ಥಿಗಳು ಸದ್ವಿನಿಯೋಗಿಸಿಕೊಳ್ಳಬೇಕೆಂದು ಎಂದು ವಿಟ್ಲ ರೋಟರಿ ಕ್ಲಬ್ ಜಯರಾಮ ರೈ ಪಿ. ಹೇಳಿದರು.
ಅವರು ವಿಠಲ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2019-20ನೇ ಸಾಲಿನ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಲಯನ್ಸ್ ಕ್ಲಬ್ ಇದರ ಅಧ್ಯಕ್ಷ ಲ| ಸಂತೋಷ್ ಶೆಟ್ಟಿ ಮಾತನಾಡಿ ವಿದ್ಯಾರ್ಥಿ ಬದುಕಿನಲ್ಲಿ ಇಂತಹ ಚಟುವಟಿಕೆಗಳು ತುಂಬಾ ಅರ್ಥಪೂರ್ಣವಾದುದು ಎಂದರು. ಜೆಸಿಐ ವಿಟ್ಲದ ಅಧ್ಯಕ್ಷ ಬಾಲಕೃಷ್ಣ ಮಾತನಾಡಿ ಜೆಸಿಐ ಸಂಸ್ಥೆಯಂತೆ ಎನ್ನೆಸ್ಸೆಸ್ ಕೂಡ ವ್ಯಕ್ತಿತ್ವ ವಿಕಸನ ಮಾಡುವ ಸಂಸ್ಥೆ ಎಂದರು.
ಸಭಾಧ್ಯಕ್ಷತೆಯನ್ನು ವಿಠಲ ವಿದ್ಯಾ ಸಂಘದ ಸಂಚಾಲಕರಾದ ಎಲ್.ಎನ್.ಕೂಡೂರು ವಹಿಸಿದ್ದರು. ರೋಟರಿ ಕ್ಲಬ್ನ ನಿಕಟಪೂರ್ವ ಅಧ್ಯಕ್ಷ ಡಾ. ಚರಣ್ ಕಜೆ, ವಿಠಲ ವಿದ್ಯಾ ಸಂಘದ ಕೋಶಾಧಿಕಾರಿ ನಿತ್ಯಾನಂದ್ ನಾಯಕ್, ಸದಸ್ಯರಾದ ಪದ್ಮಯ್ಯ ಗೌಡ, ಬಾಬು ಕೆ.ವಿ., ಆಡಳಿತಾಧಿಕಾರಿ ಪ್ರಶಾಂತ್ ಚೊಕ್ಕಾಡಿ ಉಪಸ್ಥಿತರಿದ್ದರು.
ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಅಣ್ಣಪ್ಪ ಸಾಸ್ತಾನ ಸ್ವಾಗತಿಸಿದರು. ಸ್ವಪ್ನ ಮತ್ತು ಬಳಗ ಪ್ರಾರ್ಥಿಸಿದರು. ಎನ್ನೆಸ್ಸೆಸ್ ನಾಯಕ ಶಿವಪ್ರಸಾದ್ ವಂದಿಸಿದರು. ವಿದ್ಯಾರ್ಥಿನಿ ಜಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.

