Friday, June 27, 2025

ಒಡ್ಡೋರಿನಲ್ಲಿ ಧರ್ಮನೇಮಕ್ಕೆ ತೋರಣ ಮುಹೂರ್ತ

ಬಂಟ್ವಾಳ: ಗಂಜಿಮಠದ ಒಡ್ಡೂರು ಫಾಮ್೯ಹೌಸ್ ಸ್ಥಳದಲ್ಲಿ ನೂತನವಾಗಿ ನಿರ್ಮಿಸಲಾದ ಒಡ್ಡೂರು ಧರ್ಮಚಾವಡಿಯಲ್ಲಿ ಫೆ.29ರಂದು ನಡೆಯುವ ಶತಚಂಡಿಕಾಯಾಗ ಮತ್ತು ಶ್ರೀಕೊಡಮಣಿತ್ತಾಯ ಧರ್ಮದೈವದ ಧರ್ಮ-ನೇಮೋತ್ಸವದ ಪ್ರಯುಕ್ತ ಪೂರ್ವಭಾವಿಯಾಗಿ ಸಂಪ್ರದಾಯದಂತೆ ವಿವಿಧ ವೈಧಿಕ ವಿಧಿವಿಧಾನಗಳು ಗುರುವಾರ ನೆರವೇರಿತು. ಈ ಸಂದರ್ಭದಲ್ಲಿ ವೇ.ಮೂ.ಎಡಪದವು ವೆಂಕಟೇಶ್ ತಮನತ್ರಿಯವರ ಮಾರ್ಗದರ್ಶದಲ್ಲಿ ವೇ.ಮೂ.ರತೀಶ್ ಭಟ್ ಅವರ ಪೌರೋಹಿತ್ವದಲ್ಲಿ ವಿವಿಧ ಹೋಮಾದಿಗಳ ಸಹಿತ ಮಣ್ಣ,ತೋರಣ, ಬಾಳೆಗೊನೆ ಮುಹೂರ್ತ,ಮರ ಮುಹೂರ್ತದ ಕಟ್ಲೆ ಸಂಪ್ರದಾಯಗಳು ವಿಧಿವತ್ತಾಗಿ ನೆರವೇರಿತು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ದಂಪತಿ ಮತ್ತವರ ಕುಟುಂಬಸ್ಥರು, ಬಿಜೆಪಿ ಮುಖಂಡ ದೇವದಾಸ ಶೆಟ್ಟಿ ಬಂಟ್ವಾಳ, ಚಂದ್ರಹಾಸ ಶೆಟ್ಟಿ ರಂಗೋಲಿ ಬಿ.ಸಿ.ರೋಡ್ ಹಾಗೂ ಅವರ ಹಿತೈಷಿ,ಮಿತ್ರರು, ದೈವದ ಚಾಕರಿದಾರರು ಉಪಸ್ಥಿತರಿದ್ದರು.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...