Saturday, January 31, 2026

’ಸಂತೃಪ್ತಿಯೇ ನಿಜವಾದ ಸಂಪತ್ತು’ -ಒಡಿಯೂರು ಶ್ರೀ

ಒಡಿಯೂರು: ಜ್ಞಾನ ಇಲ್ಲದ ಬದುಕು ಬದುಕಲ್ಲ. ಸಮಸ್ಯೆ ಬಂದರೆ ಅನುಭವ ಬರುತ್ತದೆ. ಅನುಭವದಿಂದ ನಮಗೆ ಜ್ಞಾನ ಲಭಿಸುತ್ತದೆ. ಲೌಕಿಕ ಜ್ಞಾನದ ಜೊತೆಗೆ ಅಲೌಕಿಕ ಜ್ಞಾನವೂ ನಮಗೆ ಅವಶ್ಯಕವಾಗಿದೆ. ಅಧ್ಯಾತ್ಮ ವಿದ್ಯೆಯ ಮೂಲಕ ನಾವು ಬದುಕಿನಲ್ಲಿ ಯಶಸ್ಸನ್ನು ಸಾಧಿಸಲು ಸಾಧ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮಿಗಳವರು ನುಡಿದರು.
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ನವರಾತ್ರಿಯ ಪ್ರಯುಕ್ತ ಜರಗಿದ ಶ್ರೀ ಶಾರದಾ ಪೂಜೆಯೊಂದಿಗೆ ನಡೆದ ಶ್ರೀ ಸರಸ್ವತಿ ಹವನದ ಪೂರ್ಣಾಹುತಿಯ ಸಂದರ್ಭ ಆಶೀರ್ವಚನಗೈದ ಪೂಜ್ಯ ಶ್ರೀಗಳವರು ಜ್ಞಾನವನ್ನು ಕರುಣಿಸುವ ದೇವತೆ ಶಾರದೆಯ ಪೂಜೆಯನ್ನು ಶರದೃತುವಿನಲ್ಲಿ ಮಾಡುತ್ತೇವೆ. ನಾವು ಸಹ ಪರಿಶುದ್ಧ ಮನಸ್ಸಿನಿಂದ ದೇವಿಯ ಆರಾಧನೆ ಮಾಡುವುದರಿಂದ ಸತ್ಫಲ ಪ್ರಾಪ್ತಿಯಾಗುತ್ತದೆ. ಸಂತೃಪ್ತಿಯೇ ಸಂಪತ್ತು. ಓಂಕಾರ ಸ್ವರೂಪಿಣಿಯಾದ ದೇವಿಯ ಅನುಗ್ರಹದ ಮೂಲಕ ಕೋವಿಡ್ ೧೯ ಕೊರೋನಾ ಮಹಾಮಾರಿಯಿಂದ ವಿಶ್ವವೇ ಮುಕ್ತವಾಗಲಿ ಎಂದರು.
ಈ ಸಂದರ್ಭದಲ್ಲಿ ಸಾಧ್ವಿ ಶ್ರೀ ಮಾತಾನಂದಮಯೀ ಉಪಸ್ಥಿತರಿದ್ದರು. ವೇ.ಮೂ. ಚಂದ್ರಶೇಖರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಶ್ರೀ ಸರಸ್ವತಿ ಹವನ ನಡೆಯಿತು.

 

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...