Wednesday, June 25, 2025

’ದೇವಸ್ಥಾನ, ದೈವಸ್ಥಾನಗಳು ಭಕ್ತರಿಗಾಗಿ’-ಒಡಿಯೂರುಶ್ರೀ

ವಿಟ್ಲ: ಸುಖಭೋಗದ ಬದುಕು ಬದುಕಲ್ಲ, ತ್ಯಾಗ ಬದುಕೇ ಉತ್ತಮ. ಮಾನವಧರ್ಮ ಉದ್ಧಾರಕ್ಕೆ ಭಗವಂತನ ಅವತಾರವಾಗುತ್ತದೆ. ದೇವಸ್ಥಾನ, ದೈವಸ್ಥಾನ ದೈವ ದೇವರುಗಳಿಗಾಗಿ ಇರುವುದಿಲ್ಲ, ಬದಲಾಗಿ ಭಕ್ತರಿಗಾಗಿ ಎಲ್ಲವೂ ಇರುವುದು ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ನುಡಿದರು.
ಅವರು ಪೆರುವಾಯಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಪ್ರಯುಕ್ತ ಶನಿವಾರ ಸಂಜೆ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.
ಕರ್ನಾಟಕ ದಕ್ಷಿಣ ಪ್ರಾಂತ ಹಿಂದೂ ಜಾಗರಣ ವೇದಿಕೆ ಕಾರ್ಯದರ್ಶಿ ರಾಧಾಕೃಷ್ಣ ಅಡ್ಯಂತಾಯ ದಿಕ್ಸೂಚಿ ಭಾಷಣ ಮಾಡಿ, ದುಷ್ಟ ಶಕ್ತಿಯನ್ನು ನಾಶ ಮಾಡಬೇಕು. ಗೋ ಸಂರಕ್ಷಣೆಯನ್ನು ಮಾಡಬೇಕು. ಮಹಿಳೆಯರ ಮೇಲೆ ಗೌರವವಿರಬೇಕು. ಮಹಿಳೆಯರು ಮಕ್ಕಳಿಗೆ ಯೋಗ್ಯ ರೀತಿಯಲ್ಲಿ ಸಂಸ್ಕಾರ, ಶಿಕ್ಷಣ, ಸಂಸ್ಕೃತಿಯ ಅರಿವನ್ನು ಮೂಡಿಸಬೇಕು ಎಂದು ತಿಳಿಸಿದರು.
ನಾರಾಯಣ ರೈ ಅಡ್ವಾಯಿ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ಮೊಕ್ತೇಸರ ವೆಂಕಪ್ಪ ಮಾರ್ಲ ಕಲಾತ್ತಿಮಾರು ಉಪಸ್ಥಿತರಿದ್ದರು. ಭೋಜನ ಸೇವಾಕರ್ತ ಶಿವಾಂಶ್ ಅವರನ್ನು ಗೌರವಿಸಲಾಯಿತು.
ಪ್ರಭಾಕರ ಶೆಟ್ಟಿ ಕಲಾತ್ತಿಮಾರು ಸ್ವಾಗತಿಸಿದರು. ಮನೋಹರ ಶೆಟ್ಟಿ ಪೇರಡ್ಕ ವಂದಿಸಿದರು. ಸವಿತಾ ಎಸ್.ಭಟ್ ಅಡ್ವಾಯಿ ಆಶಯಗೀತೆ ಹಾಡಿದರು. ಅಶ್ವಿನಿ ಪೆರುವಾಯಿ ಕಾರ್ಯಕ್ರಮ ನಿರೂಪಿಸಿದರು.
ಬೆಳಗ್ಗೆ ಕುಂಟುಕುಡೇಲು ಬ್ರಹ್ಮಶ್ರೀ ರಘುರಾಮ ತಂತ್ರಿ ಅವರ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ, ಗಣಪತಿ ಹೋಮ, ನಾಗದೇವರಿಗೆ ತಂಬಿಲ, ದೇವರಿಗೆ ಕಲಶ ಪೂಜೆ, ಅಭಿಷೇಕ, ಮಧ್ಯಾಹ್ನ ಮಹಾಪೂಜೆ ಹಾಗೂ ವರ್ಷಾವಧಿ ರಂಗ ಪೂಜೆ ಉತ್ಸವ ನಡೆಯಿತು.

More from the blog

ವೀರಕಂಭ ಗ್ರಾಮದ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ತಾಲೂಕು 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ...

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...

Rain Alert : ರಾಜ್ಯದಲ್ಲಿ ಮುಂಗಾರು ಚುರುಕು – ಕರಾವಳಿ ಸೇರಿ ಹಲವೆಡೆ 3 ದಿನ ಭಾರೀ ಮಳೆ ಸಾಧ್ಯತೆ..

ಮಂಗಳೂರು : ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮುಂಗಾರು ಚುರುಕುಗೊಂಡಿದೆ. ಕರಾವಳಿ ಸೇರಿ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಆರಂಭವಾಗಿ 15 ದಿನಗಳು ಕಳೆದರೂ...

ರಾಜ್ಯ ಮಟ್ಟದ ಸಾಹಿತ್ಯ ಸ್ಪರ್ಧೆಯ ಬಹುಮಾನ ವಿತರಣೆ

ಬಂಟ್ವಾಳ : ಕವಿ‌, ಸಾಹಿತಿ, ಸಂಘಟಕ ಯುವವಾಹಿನಿಯ ಸಲಹೆಗಾರ ಬಿ ತಮ್ಮಯ ನೆನಪಿನ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆ ಆಯೋಜಿಸಲಾತ್ತು. ಈ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಹೊಸಪೇಟೆ , ವಿಜಯನಗರ, ಬೆಂಗಳೂರು, ಚಿತ್ರದುರ್ಗ,...