Thursday, June 26, 2025

’ಆದಿ-ವ್ಯಾಧಿಗಳ ನಿವಾರಣೆಗೆ ಧನ್ವಂತರಿಯ ಉಪಾಸನೆ’-ಒಡಿಯೂರು ಶ್ರೀ

ವಿಟ್ಲ: ಧನ್ವಂತರೀ ಸಾಕ್ಷಾತ್ ವಿಷ್ಣುವಿನ ಅವತಾರ. ದೇವತೆಗಳ ವೈದ್ಯರೆ ಧನ್ವಂತರೀ. ಆದಿ-ವ್ಯಾಧಿಗಳ ನಿವಾರಣೆಗೆ ಧನ್ವಂತರಿಯ ಉಪಾಸನೆ ಅತೀ ಅಗತ್ಯ ಎಂದು ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ ನುಡಿದರು.
ಅವರು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಧನ್ವಂತರೀ ಜಯಂತಿಯ ಪ್ರಯುಕ್ತ ಜರಗಿದ ಶ್ರೀ ಧನ್ವಂತರಿ ಹವನದ ಪೂರ್ಣಾಹುತಿಯ ಸಂದರ್ಭದಲ್ಲಿ ಆಶೀರ್ವಚನ ನೀಡಿದರು. ಶಾರೀರಿಕ ಖಾಯಿಲೆಗಳ ನಿವಾರಣೆಯೊಂದಿಗೆ ಮಾನಸಿಕ ಖಾಯಿಲೆಯು ದೂರವಾಗುತ್ತದೆ. ಹಿತ-ಮಿತವಾಗಿ ಆಹಾರ ಸೇವನೆಯಿಂದ ಆರೋಗ್ಯವನ್ನು ಕಾಪಿಡಲು ಸಾಧ್ಯ. ಪಂಚತತ್ತ್ವಗಳ ಆರಾಧನೆಯು ನಮ್ಮ ಸಂಸ್ಕೃತಿಯಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಾಧ್ವಿ ಶ್ರೀ ಮಾತಾನಂದಮಯೀ ಉಪಸ್ಥಿತರಿದ್ದರು. ವೇ|ಮೂ ಚಂದ್ರಶೇಖರ ಉಪಾಧ್ಯಾಯರ ನೇತೃತ್ವದಲ್ಲಿ ಶ್ರೀ ಧನ್ವಂತರೀ ಹವನ ಸಂಪನ್ನಗೊಂಡಿತು.

More from the blog

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...