Thursday, February 13, 2025

’ಶಿಬಿರಗಳು ಆತ್ಮವಿಶ್ವಾಸವನ್ನು ವೃದ್ಧಿ’- ಒಡಿಯೂರು ಶ್ರೀ

ವಿಟ್ಲ: ಪ್ರಕೃತಿಯನ್ನು ನೋಡುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು. ಪ್ರಕೃತಿ ಮತ್ತು ಮನುಷ್ಯನಿಗೆ ಅವಿನಾಭಾವ ಸಂಬಂಧವಿದೆ. ಶಿಬಿರಗಳು ಪ್ರತಿಭೆಗಳನ್ನು ಅರಳಿಸುವುದರೊಂದಿಗೆ ಆತ್ಮವಿಶ್ವಾಸವನ್ನು ವೃದ್ಧಿಸುತ್ತದೆ. ಆತ್ಮವಿಶ್ವಾಸ ಅತಿಯಾದಲ್ಲಿ ನಮ್ಮನ್ನು ಕುಗ್ಗಿಸುತ್ತದೆ. ಶಿಕ್ಷಣದ ಬೇರುಗಳು ಕಹಿಯಾಗಿದ್ದರೂ ಭವಿಷ್ಯದಲ್ಲಿ ಅದರ ಫಲ ಸಿಹಿಯಾಗಿರುತ್ತದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ನುಡಿದರು.
ಅವರು ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠ ಮತ್ತು ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಆಯೋಜಿಸಿದ್ದ ಎರಡು ದಿನಗಳ ವಸಂತ ಶಿಬಿರವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.
ವೇದಿಕೆಯಲ್ಲಿ ಶ್ರೀ ಸಂಸ್ಥಾನದ ಸಾಧ್ವಿ ಶ್ರೀ ಮಾತಾನಂದಮಯೀ ಉಪಸ್ಥಿತರಿದ್ದರು. ಹಿರಿಯ ಪತ್ರಕರ್ತ ಯಶವಂತ್ ವಿಟ್ಲ, ಸಂಪನ್ಮೂಲ ವ್ಯಕ್ತಿಗಳಾದ ಲೋಹಿತ್ ಭಂಡಾರಿ, ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಪ್ರಧಾನ ನಿರ್ದೇಶಕ ಕಿರಣ್ ಉಡುಪಿ, ಶಾಲಾ ಸಂಚಾಲಕರಾದ ಗಣಪತಿ ಭಟ್ ಸೇರಾಜೆ, ಮುಖ್ಯೋಪಾಧ್ಯಾಯರಾದ ಜಯಪ್ರಕಾಶ್ ಶೆಟ್ಟಿ, ಶಿಬಿರಾರ್ಥಿಗಳಾ ಕನ್ಯಾನ ಬಾಲವಿಕಾಸ ಕೇಂದ್ರದ ರಿತೇಶ್, ಪೆರುವಾಯಿ ಬಾಲವಿಕಾಸ ಕೇಂದ್ರದ ದೀಕ್ಷಿತಾ ಉಪಸ್ಥಿತರಿದ್ದರು.
ಸುಮಾರು 200ಕ್ಕೂ ಮಿಕ್ಕಿ ವಿದ್ಯಾರ್ಥಿಗಳು, ಬಾಲವಿಕಾಸ ಕೇಂದ್ರದ ಮಾತಾಜಿಯವರು, ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಶಿಕ್ಷಕ ವೃಂದದವರು ಶಿಬಿರದಲ್ಲಿ ಪಾಲ್ಗೊಂಡಿದ್ದರು. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ರೇಣುಕಾ ಎಸ್. ರೈ ವಂದಿಸಿದರು. ಶಿಕ್ಷಕಿ ವೇದಾವತಿ ಕಾರ್‍ಯಕ್ರಮ ನಿರೂಪಿಸಿದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...