Tuesday, July 1, 2025

’ಅಧ್ಯಾತ್ಮದ ಆನಂದ ಅನುಭಾವದ ಮೂಲಕ ಅನುಭವ’-ಒಡಿಯೂರುಶ್ರೀ

ವಿಟ್ಲ: ತ್ರಿಕರಣಪೂರ್ವಕವಾಗಿ ಭಗವಂತನಲ್ಲಿ ಪರಿಶುದ್ಧ ಭಕ್ತಿಯಿಟ್ಟು ಮಾಡಿದ ಪ್ರಾರ್ಥನೆಯಲ್ಲಿ ಎಲ್ಲಾ ಸಮಸ್ಯೆಗಳಿಗೂ ಪರಿಹಾರವಿದೆ. ಅಧ್ಯಾತ್ಮದ ಆನಂದವನ್ನು ಅನುಭಾವದ ಮೂಲಕ ಅನುಭವಿಸಬಹುದು. ಭಗವತ್ ಪ್ರೇಮದೊಂದಿಗೆ ಪ್ರತಿಯೊಬ್ಬರೂ ದೇಶಪ್ರೇಮವನ್ನು ಬೆಳೆಸಿಕೊಂಡಾಗ ಸಮೃದ್ಧಿಪೂರ್ಣ ದೇಶ ನಿರ್ಮಾಣವಾಗಲು ಸಾಧ್ಯವಿದೆ. ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.
ಅವರು ಭಾನುವಾರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಜುಲೈ 29ರಂದು ನಡೆಯುವ ಒಡಿಯೂರು ಶ್ರಿಗಳವರ ಜನ್ಮದಿನೋತ್ಸವ-ಶ್ರೀ ಒಡಿಯೂರು ಗ್ರಾಮೋತ್ಸವ 2019ರ ಅಂಗವಾಗಿ ನಡೆದ ಒಳಾಂಗಣ ಸ್ಪರ್ಧೆಗಳನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ದೇಹವೆಂಬ ದೇವಾಲಯದಲ್ಲಿ ಜೀವನು ಪರಿಶುದ್ಧನಾದಾಗ ದೇವನೊಂದಿಗೆ ಸಖ್ಯ ಬೆಳೆಸಬಹುದು. ನಮ್ಮ ಒಳಾಂಗಣದಲ್ಲಿರುವ ಸಾಮಾರ್ಥ್ಯವನ್ನು ಸಕಾಲಿಕವಾಗಿ ಪ್ರಕಟಗೊಳಿಸಬೇಕು ಎಂದರು.
ಸಾಧ್ವೀ ಮಾತಾನಂದಮಯೀ ಅವರು ದಿವ್ಯ ಸಾನಿಧ್ಯ ಕರುಣಿಸಿದ್ದರು. ಮಾಜಿ ಯೋಧ ಹಿರಿಯರಾದ ವಿಠಲ ಶೆಟ್ಟಿ ಸಾಲೆತ್ತೂರು, ಒಡಿಯೂರು ಶ್ರೀಗಳ ಜನ್ಮದಿನೋತ್ಸವ ಸಮಿತಿ ಅಧ್ಯಕ್ಷ ಲೋಕನಾಥ ಶೆಟ್ಟಿ, ಗ್ರಾಮೋತ್ಸವ ಸಮಿತಿ ಸಂಚಾಲಕ ಅಜಿತ್‌ನಾಥ ಶೆಟ್ಟಿ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ರೈ, ನಿರ್ದೇಶಕರಾದ ಲಿಂಗಪ್ಪ ಗೌಡ ಪನೆಯಡ್ಕ, ವೇಣುಗೋಪಾಲ ಮಾರ್ಲ, ಒಡಿಯೂರು ಕ್ಷೇತ್ರದ ಕಾರ್‍ಯನಿರ್ವಾಹಕ ಪದ್ಮನಾಭ ಒಡಿಯೂರು, ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಅಧ್ಯಕ್ಷೆ ಸರ್ವಾಣಿ ಪಿ. ಶೆಟ್ಟಿ, ಯಶವಂತ ವಿಟ್ಲ ಉಪಸ್ಥಿತರಿದ್ದರು.
ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಯೋಜನಾ ನಿರ್ದೇಶಕ ಕಿರಣ್ ಉರ್ವ ಸ್ವಾಗತಿಸಿದರು. ಒಡಿಯೂರುಶ್ರೀ ಗುರುದೇವ ವಿದ್ಯಾಪೀಠದ ಸಂಚಾಲಕ ಗಣಪತಿ ಭಟ್ ಸೇರಾಜೆ ವಂದಿಸಿದರು. ಒಡಿಯೂರುಶ್ರೀ ಗ್ರಾಮವಿಕಾಸ ಯೋಜನೆಯ ಸಂಯೋಜಕಿ ಲೀಲಾ ಕೆ. ಕಾರ್‍ಯಕ್ರಮ ನಿರೂಪಿಸಿದರು.
ಶ್ರೀ ಸಂಸ್ಥಾನದ ಜ್ಞಾನಮಂದಿರದಲ್ಲಿ ಬಾಲಕಬಾಲಕಿಯರಿಗೆ, ಮಹಿಳೆಯರಿಗೆ, ಪುರುಷರಿಗೆ ಹಾಗೂ ಮುಕ್ತ ವಿಭಾಗಗಳಲ್ಲಿ ನಾನಾ ಒಳಾಂಗಣ ಸ್ಪರ್ಧೆಗಳು ನಡೆದವು.

 

More from the blog

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...

‘ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು’- ಒಡಿಯೂರು ಶ್ರೀ

ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು. ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ,...