Wednesday, July 9, 2025

ಯಶಸ್ಸಿನ ಗುಟ್ಟು ಪ್ರಯತ್ನಶೀಲತೆಯಲ್ಲಿ ಅಡಗಿದೆ: ಒಡಿಯೂರು ಶ್ರೀ ಸಂಸ್ಥಾನದಲ್ಲಿ ಜರಗಿದ ಶ್ರೀ ವರಮಹಾಲಕ್ಷ್ಮೀ ವ್ರತಪೂಜೆಯ ಸಂದರ್ಭ ಒಡಿಯೂರು ಶ್ರೀ ಆಶೀರ್ವಚನ

“ಜಗತ್ತು ನಿಯಮವನ್ನು ಅದೇ ರೂಪಿಸುತ್ತಿದೆ. ಅದಕ್ಕೆ ನಾವು ಒಗ್ಗಿಕೊಳ್ಳಬೇಕು. ನಮ್ಮಲ್ಲಿ ಇಚ್ಛಾ ಶಕ್ತಿ, ಕ್ರಿಯಾ ಶಕ್ತಿ ಇದ್ದರೆ ಸಾಲದು ಜ್ಞಾನ ಶಕ್ತಿಯೂ ಬೇಕು. ನಮ್ಮ ನಾಲಿಗೆಯ ತುದಿಯಂತೆ ಲಕ್ಷ್ಮೀಯು ಚಲನಶೀಲವಾಗಿರುವಳು. ಸಂಪತ್ತು ಮತ್ತು ಆಪತ್ತು ನಮ್ಮ ನಾಲಿಗೆಯಲ್ಲಿದೆ. ಅದಕ್ಕಾಗಿ ವಾಕ್ ಸರಿಯಾಗಿದ್ದರೆ ಲಕ್ಷ್ಮೀ ಒಲಿಯುತ್ತಾಳೆ. ಸತ್ಯವನ್ನು ಅನುಸರಿಸಿ ಬಂದ ಸಂಪತ್ತಿನಿಂದ ಆಪತ್ತಿಲ್ಲ. ತೃಪ್ತಿಯ ಮೂಲದಲ್ಲಿ ಲಕ್ಷ್ಮೀ ಇರುವಳು. ಸಂತೃಪ್ತಿಯೇ ಸಂಪತ್ತು. ಇದ್ದುದರಲ್ಲಿ ಸುಖ ಪಟ್ಟರೆ ನಾವು ಜೀವನದಲ್ಲಿ ಸಂತಸದಲ್ಲಿರುತ್ತೇವೆ. ಹಾಗಂತ ನಮ್ಮ ಪ್ರಯತ್ನ, ಪರಿಶ್ರಮವನ್ನು ಬಿಡಬಾರದು. ಯಶಸ್ಸಿನ ಗುಟ್ಟು ಪ್ರಯತ್ನಶೀಲತೆಯಲ್ಲಿ ಅಡಗಿದೆ. ಧರ್ಮಶ್ರದ್ಧೆಯಿಂದ ಸಂಪಾದಿಸಿದ ಸಂಪತ್ತು ಶ್ರೇಷ್ಠ. ಭವಿಷ್ಯಪುರಾಣದಲ್ಲಿ ಉದ್ಧೃತವಾದ ಶ್ರೀವರಮಹಾಲಕ್ಷ್ಮೀ ವ್ರತಪೂಜೆಯನ್ನು ಹುಣ್ಣಿಮೆಯ ಪೂರ್ವದಲ್ಲಿ ಬರುವ ಶ್ರಾವಣದ ಮೊದಲ ಶುಕ್ರವಾರ ಆಚರಿಸುವುದು ವಿಶೇಷ. ಇದರಿಂದ ಉತ್ತಮ ಫಲವು ಲಭಿಸುತ್ತದೆ. ಇಂತಹ ದೇವತಾಚರಣೆಗಳ ಹಿಂದೆ ಸಂಸ್ಕೃತಿ ಅಡಗಿದೆ. ನಮ್ಮ ಭಾರತೀಯ ಸಂಸ್ಕೃತಿಗೆ ಪೂರಕವಾದವುಗಳೇ ಆಗಿದೆ” ಎಂದು ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮಿಗಳವರು ಒಡಿಯೂರು ಶ್ರೀ ಗುರುದೇವದದತ್ತ ಸಂಸ್ಥಾನದಲ್ಲಿ ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರದ ವತಿಯಿಂದ ಜರಗಿದ ಶ್ರೀ ವರಮಹಾಲಕ್ಷ್ಮೀವ್ರತ ಪೂಜೆಯ ಸಂದರ್ಭ ಆಶೀರ್ವಚನ ನೀಡಿದರು.
ಸಾಧ್ವಿ ಶ್ರೀ ಮಾತಾನಂದಮಯೀಯವರು ಉಪಸ್ಥಿತರಿದ್ದರು. ಮಹಿಳಾವಿಕಾಸ ಕೇಂದ್ರದ ಅಧ್ಯಕ್ಷೆ ಸರ್ವಾಣಿ ಪಿ. ಶೆಟ್ಟಿ ಹಾಗೂ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿ ಸಹಕರಿಸಿದ್ದು, ಶ್ರೀ ಸಂಸ್ಥಾನದ ಸಹಸಂಸ್ಥೆಗಳ ಸದಸ್ಯರು ಹಾಗೂ ಗುರುಬಂಧುಗಳು ಪಾಲ್ಗೊಂಡಿದ್ದರು.

 

More from the blog

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...