Tuesday, February 3, 2026

ಯಶಸ್ಸಿನ ಗುಟ್ಟು ಪ್ರಯತ್ನಶೀಲತೆಯಲ್ಲಿ ಅಡಗಿದೆ: ಒಡಿಯೂರು ಶ್ರೀ ಸಂಸ್ಥಾನದಲ್ಲಿ ಜರಗಿದ ಶ್ರೀ ವರಮಹಾಲಕ್ಷ್ಮೀ ವ್ರತಪೂಜೆಯ ಸಂದರ್ಭ ಒಡಿಯೂರು ಶ್ರೀ ಆಶೀರ್ವಚನ

“ಜಗತ್ತು ನಿಯಮವನ್ನು ಅದೇ ರೂಪಿಸುತ್ತಿದೆ. ಅದಕ್ಕೆ ನಾವು ಒಗ್ಗಿಕೊಳ್ಳಬೇಕು. ನಮ್ಮಲ್ಲಿ ಇಚ್ಛಾ ಶಕ್ತಿ, ಕ್ರಿಯಾ ಶಕ್ತಿ ಇದ್ದರೆ ಸಾಲದು ಜ್ಞಾನ ಶಕ್ತಿಯೂ ಬೇಕು. ನಮ್ಮ ನಾಲಿಗೆಯ ತುದಿಯಂತೆ ಲಕ್ಷ್ಮೀಯು ಚಲನಶೀಲವಾಗಿರುವಳು. ಸಂಪತ್ತು ಮತ್ತು ಆಪತ್ತು ನಮ್ಮ ನಾಲಿಗೆಯಲ್ಲಿದೆ. ಅದಕ್ಕಾಗಿ ವಾಕ್ ಸರಿಯಾಗಿದ್ದರೆ ಲಕ್ಷ್ಮೀ ಒಲಿಯುತ್ತಾಳೆ. ಸತ್ಯವನ್ನು ಅನುಸರಿಸಿ ಬಂದ ಸಂಪತ್ತಿನಿಂದ ಆಪತ್ತಿಲ್ಲ. ತೃಪ್ತಿಯ ಮೂಲದಲ್ಲಿ ಲಕ್ಷ್ಮೀ ಇರುವಳು. ಸಂತೃಪ್ತಿಯೇ ಸಂಪತ್ತು. ಇದ್ದುದರಲ್ಲಿ ಸುಖ ಪಟ್ಟರೆ ನಾವು ಜೀವನದಲ್ಲಿ ಸಂತಸದಲ್ಲಿರುತ್ತೇವೆ. ಹಾಗಂತ ನಮ್ಮ ಪ್ರಯತ್ನ, ಪರಿಶ್ರಮವನ್ನು ಬಿಡಬಾರದು. ಯಶಸ್ಸಿನ ಗುಟ್ಟು ಪ್ರಯತ್ನಶೀಲತೆಯಲ್ಲಿ ಅಡಗಿದೆ. ಧರ್ಮಶ್ರದ್ಧೆಯಿಂದ ಸಂಪಾದಿಸಿದ ಸಂಪತ್ತು ಶ್ರೇಷ್ಠ. ಭವಿಷ್ಯಪುರಾಣದಲ್ಲಿ ಉದ್ಧೃತವಾದ ಶ್ರೀವರಮಹಾಲಕ್ಷ್ಮೀ ವ್ರತಪೂಜೆಯನ್ನು ಹುಣ್ಣಿಮೆಯ ಪೂರ್ವದಲ್ಲಿ ಬರುವ ಶ್ರಾವಣದ ಮೊದಲ ಶುಕ್ರವಾರ ಆಚರಿಸುವುದು ವಿಶೇಷ. ಇದರಿಂದ ಉತ್ತಮ ಫಲವು ಲಭಿಸುತ್ತದೆ. ಇಂತಹ ದೇವತಾಚರಣೆಗಳ ಹಿಂದೆ ಸಂಸ್ಕೃತಿ ಅಡಗಿದೆ. ನಮ್ಮ ಭಾರತೀಯ ಸಂಸ್ಕೃತಿಗೆ ಪೂರಕವಾದವುಗಳೇ ಆಗಿದೆ” ಎಂದು ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮಿಗಳವರು ಒಡಿಯೂರು ಶ್ರೀ ಗುರುದೇವದದತ್ತ ಸಂಸ್ಥಾನದಲ್ಲಿ ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರದ ವತಿಯಿಂದ ಜರಗಿದ ಶ್ರೀ ವರಮಹಾಲಕ್ಷ್ಮೀವ್ರತ ಪೂಜೆಯ ಸಂದರ್ಭ ಆಶೀರ್ವಚನ ನೀಡಿದರು.
ಸಾಧ್ವಿ ಶ್ರೀ ಮಾತಾನಂದಮಯೀಯವರು ಉಪಸ್ಥಿತರಿದ್ದರು. ಮಹಿಳಾವಿಕಾಸ ಕೇಂದ್ರದ ಅಧ್ಯಕ್ಷೆ ಸರ್ವಾಣಿ ಪಿ. ಶೆಟ್ಟಿ ಹಾಗೂ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿ ಸಹಕರಿಸಿದ್ದು, ಶ್ರೀ ಸಂಸ್ಥಾನದ ಸಹಸಂಸ್ಥೆಗಳ ಸದಸ್ಯರು ಹಾಗೂ ಗುರುಬಂಧುಗಳು ಪಾಲ್ಗೊಂಡಿದ್ದರು.

 

More from the blog

ಐಸಿವೈಎಂ ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ

ಬಂಟ್ವಾಳ: ಇಂಡಿಯನ್ ಕ್ಯಾಥೊಲಿಕ್ ಯೂತ್ ಮೂವ್ ಮೆಂಟ್ (ಐಸಿವೈಎಂ) ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ ನಡೆಯಿತು. ಪವಿತ್ರ ಬಲಿಪೂಜೆಯನ್ನು ರೆ.ಫಾ. ಅಶ್ವಿನ್ ಲೋಹಿತ್ ಕಾರ್ಡೋಜಾ, ರೆವರೆಂಡ್ ಫ್ರಾನ್ಸಿಸ್ ಕ್ರಾಸ್ತಾ ಮತ್ತು ಲೊರೆಟ್ಟೊ ಸೆಂಟ್ರಲ್...

ಮಂಗಳೂರು ಕರಾವಳಿಯನ್ನು ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಸಂಸದ ಕ್ಯಾ. ಚೌಟ ಮನವಿ

ನವದೆಹಲಿ: ಭಾರತದ ಗ್ರೀನ್‌ ಎನರ್ಜಿ ಸ್ವಾವಲಂಬನೆ ಮತ್ತು ಬಂದರು ಆಧಾರಿತ ಅಭಿವೃದ್ಧಿ ಕಾರ್ಯತಂತ್ರವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಂಗಳೂರು ಕಡಲ ತೀರದಲ್ಲಿ ‘ಕಡಲ ಪವನ ಶಕ್ತಿ’ ('ಸಮುದ್ರ ತೀರದ ಪವನ ಶಕ್ತಿ' Offshore Wind Energy)...

ಅಂಗಡಿ, ಹೋಟೆಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ದರ್ಶನ್ ಎಚ್. ವಿ

ಮಂಗಳೂರು : ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು ಹೋಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್. ವಿ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ...

Panemangaluru : ಸ್ಕೂಟರ್ ಗೆ ಕಾರು ಡಿಕ್ಕಿ – ಸವಾರನಿಗೆ ಗಾಯ

ಬಂಟ್ವಾಳ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಣೆಮಂಗಳೂರು ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಸ್ಕೂಟರ್ ಸವಾರ ನರಿಕೊಂಬು ನಿವಾಸಿ ಮುಸ್ತಫಾ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಸ್ಕೂಟರ್ ಸವಾರ ಮುಸ್ತಫಾ ಅವರು ನರಿಕೊಂಬು ರಸ್ತೆಯಿಂದ...