Monday, February 17, 2025

ಒಡಿಯೂರು: ವಿಕ ಜಿಲ್ಲಾ ಮಟ್ಟದ ಸುಪರ್ ಸ್ಟಾರ್ ರೈತ ಪ್ರಶಸ್ತಿ ಪ್ರದಾನ 

ವಿಟ್ಲ: ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ವಿಕ ಜಿಲ್ಲಾ ಮಟ್ಟದ ಸುಪರ್ ಸ್ಟಾರ್ ರೈತ -2023 ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.

ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಸಮಾರಂಭ ಉದ್ಘಾಟಿಸಿ ಆಶೀರ್ವಚನ ನೀಡಿ ಈ ದೇಶದಲ್ಲಿ ರೈತ ಎಲ್ಲರಿಗಿಂತ ನೆಮ್ಮದಿಯಲ್ಲಿ ಬದುಕುತ್ತಾನೆ. ತಿನ್ನುವ ಆಹಾರ ಉತ್ಪಾದಿಸುವ ರೈತರು ರಕ್ಷಣೆಯ ಹೊಣೆ ನಮ್ಮೆಲ್ಲರಿಗಿದೆ. ಕೃಷಿ-ಋಷಿ ಸಂಸ್ಕೃತಿ ಮರೆತರೆ ಅಪಾಯ. ಮನೆಯಲ್ಲಿರುವ ತಾಯಿಯೇ ಮಕ್ಕಳಿಗೆ ಮೊದಲ ಗುರುವಾಗಬೇಕು. ಆ ಮೂಲಕ ದೇಶದ ಪರಿವರ್ತನೆಯಾಗಬೇಕು. ಮಾಧ್ಯಮಗಳು ಕೊಳದಲ್ಲಿ ಇದ್ದ ಮೀನುಗಳಂತೆ ಕಾರ್ಯವೆಸಗಬೇಕು ಎಂದು ತಿಳಿಸಿದರು.

ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಹೆಚ್. ಕೆಂಪೇಗೌಡ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಒಡಿಯೂರು ಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ಸಿಬ್ಬಂದಿ ಶ್ರದ್ಧಾ ಪ್ರಾರ್ಥನೆ ಹಾಡಿದರು.

ದ.ಕ, ಉಡುಪಿ ಜಿಲ್ಲೆಯನ್ನು ಸಂಪೂರ್ಣ ಸಾವಯವ ಜಿಲ್ಲೆಯಾಗಿ ಪರಿವರ್ತನೆ ಮಾಡಲು ಸಾಧ್ಯತೆಗಳಿವೆ. ಇಲ್ಲಿನ ರೈತರು ರಾಸಾಯನಿಕ ಗೊಬ್ಬರ ಬಳಸುವ ಪದ್ಧತಿಯ ಮೇಲೆ ಹಠಕ್ಕೆ ಬೀಳದೆ ನಿಯಂತ್ರಣದಲ್ಲಿದ್ದಾರೆ ಎಂದು ತಿಳಿಸಿದರು.

ಯೂನಿಯನ್ ಬ್ಯಾಂಕ್ ನ ಡೆಪ್ಯುಟಿ ರೀಜನಲ್ ಹೆಡ್ ವಿಶುಕುಮಾರ್ ಮಾತನಾಡಿದರು. ಒಡಿಯೂರು ಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎ.ಸುರೇಶ್ ರೈ ಸಾವಯವ ಕೃಷಿ ಪದ್ಧತಿಯ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ರೈತ ಪ್ರಶಸ್ತಿ ಪುರಸ್ಕೃತರಾದ ದೇವಿಪ್ರಸಾದ್ ಕಡಮ್ಮಜೆ, ಕೃಷಿ ಸಂಶೋಧಕ ಶಂಕರ್ ಭಟ್ ಬದನಾಜೆ, ಮಹಿಳಾ ಸಾಧಕಿ ಕಿರಣ ದೇರೆಬೈಲ್, ಅಶೋಕ್ ಶೇಣವ, ಜನಾರ್ದನ ಗೌಡ ನೆಲ್ಲಿ ಗುಡ್ಡೆ, ನವೀನ್ ಚಾತುಬಾಯಿ, ಸಂಜೀವ ಪೂಜಾರಿ ಗುಡ್ಡೆ ಕೊಪ್ಲ, ರಾಜೇಶ್ ಪಣಪಿಲ ರೈತ ಪ್ರಶಸ್ತಿ ಸ್ವೀಕರಿಸಿದರು.

ವಿಜಯ ಕರ್ನಾಟಕ ಪತ್ರಿಕೆಯ ಸ್ಥಾನೀಯ ಸಂಪಾದಕ ಬಿ.ರವೀಂದ್ರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಒಡಿಯೂರು ಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ಸಿಬ್ಬಂದಿ ಶ್ರದ್ಧಾ ಪ್ರಾರ್ಥನೆ ಹಾಡಿದರು.

ಪತ್ರಕರ್ತ ಸುಧಾಕರ ಸುವರ್ಣ ಕಾರ್ಯಕ್ರಮ ನಿರೂಪಿಸಿದರು. ಮಹಮ್ಮದ್ ಆರೀಫ್ ಪಡುಬಿದ್ರಿ ವಂದಿಸಿದರು.

ಪತ್ರಕರ್ತರಾದ ಹರೀಶ್ ಮಾಂಬಾಡಿ, ಆರ್.ಸಿ ಭಟ್, ವಿಜಯ ಕೋಟ್ಯಾನ್ ಪ್ರಶಸ್ತಿ ಪತ್ರ ವಾಚಿಸಿದರು.

More from the blog

ಬಲ್ಲು ಕೊರಗ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯ ಹಾಗೂ ಜೇನು‌ಕುರುಬರ ಸಮಗ್ರ ಅಭಿವೃದ್ಧಿಗೆ ಪ್ರಧಾನಮಂತ್ರಿ ಜನ್ ಮನ್ ಯೋಜನೆಯ ಮೂಲಕ 20 ಕೋಟಿ ರೂ ಮಂಜೂರಾಗಿದೆ, ಸಮಾಜದ ಎಲ್ಲಾ ವರ್ಗದವರನ್ನು ಮುಖ್ಯವಾಹಿನಿಗೆ ತರುವುದು...

ವಿಟ್ಲದ ಭಗವಾನ್‌ ಶ್ರೀ 1008 ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣ ಮಹೋತ್ಸವ

ವಿಟ್ಲ: ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಪರಿಸರದಲ್ಲಿ ಜೈನ ಧರ್ಮದವರು ಪುರಾತನ ಕಾಲದಲ್ಲಿ ನಿರ್ಮಿಸಿದ ಭಗವಾನ್‌ ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿಯು ಪಂಚಕಲ್ಯಾಣ ಮಹೋತ್ಸವ ಆರಂಭಗೊಂಡಿತು. ಫೆ. 13 ರಿಂದ ಫೆ....

ಕೆ.ಎನ್.ಆರ್.ಸಿ.ಕಂಪೆನಿ ಅಧಿಕಾರಿಗಳ ವಿರುದ್ದ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲು..

ಬಂಟ್ವಾಳ: ಖಾಸಗಿ ಜಮೀನಿಗೆ ಅಕ್ರಮ ಪ್ರವೇಶ ಮಾಡಿ ಮಣ್ಣು ಅಗೆದು ನಷ್ಟ ಮಾಡಿದ್ದಾರೆ ಎಂದು ಖಾಸಗಿ ಕಂಪೆನಿ ಮೇಲೆ ಬಂಟ್ವಾಳ ‌ನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ‌ರಾಷ್ಟ್ರೀಯ ಹೆದ್ದಾರಿ ಬಿಸಿರೋಡು- ಅಡ್ಡಹೊಳೆ ಚತುಷ್ಪತ...

ಡೆತ್ ನೋಟ್ ನೀಡಿದ ಮಹತ್ವದ ಸುಳಿವು: ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್

ಡೆತ್ ನೊಟ್ ನೀಡಿದ ಸುಳಿವು ಸ್ನೇಹಿತರ ಪಾಲಿಗೆ ಯಮಸ್ವರೂಪಿಯಾದರೆ , ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬಹುದಾ? ..... ಕಳೆದ ಮೂರು ದಿನಗಳ ಹಿಂದೆ ನಡೆದ ಅವಿವಾಹಿತ ಯುವಕನ ಆತ್ಮಹತ್ಯೆ ಹಿಂದೆ ಲಕ್ಷಾಂತರ ರೂ ಹಣದ ವಹಿವಾಟಿನ...