Tuesday, July 15, 2025

’ಆತ್ಮವಿಶ್ವಾಸದಿಂದ ಎಲ್ಲವೂ ಸಾಧ್ಯ’-ಒಡಿಯೂರುಶ್ರೀ

ಒಡಿಯೂರು : ಆತ್ಮವಿಶ್ವಾಸದಿಂದ ಅಸಾಧ್ಯವೂ ಸಾಧ್ಯವಾಗುತ್ತದೆ. ಯಶಸ್ವಿಯಾಗುತ್ತದೆ. ವ್ಯಕ್ತಿಗಿಂತ ಸಂಘ-ಸಂಸ್ಥೆ ಶ್ರೇಷ್ಠವಾದುದು. ಈ ಬಾರಿಯೂ ಶ್ರೀಒಡಿಯೂರು ರಥೋತ್ಸವ-ತುಳುನಾಡ್ದ ಜಾತ್ರೆ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ನುಡಿದರು.
ಅವರು ಶ್ರೀ ಒಡಿಯೂರು ರಥೋತ್ಸವ-ತುಳುನಾಡ್ದ ಜಾತ್ರೆಯಲ್ಲಿ ಅವಿರತವಾಗಿ ಶ್ರಮಿಸಿದ ಕಾರ್‍ಯಕರ್ತರ ಅಭಿನಂದನೆ ಸಭೆಯಲ್ಲಿ ಆಶೀರ್ವಚನ ನೀಡಿದರು. ಅಭಿನಂದನ್ ಅವರ ದೇಶಸೇವೆಗೆ ಅಭಿನಂದನೆ ಸಲ್ಲಿಸಬೇಕು. ಸೈನಿಕರ ಸೇವೆಯನ್ನು ರಾಜಕೀಯವಾಗಿ ಬಳಸಕೂಡದು. ರಾಷ್ಟ್ರಕ್ಕೆ ಅನ್ಯಾಯವಾಗುತ್ತಿರುವಾಗ ರಾಜಕೀಯ ತೊರೆದು ಎಲ್ಲ ಮನಸ್ಸುಗಳು ಸಂಘಟಿತರಾಗಬೇಕು. ಅಪಾಯ ಸನ್ನಿವೇಶವನ್ನು ಎದುರಿಸಲು ಸದಾ ಸನ್ನದ್ಧರಾಗಿರಬೇಕು ಎಂದು ಸ್ವಾಮೀಜಿ ಹೇಳಿದರು.
ವಿಶೇಷ ಆಹ್ವಾನಿತರಾಗಿ ತುಳುನಾಡ್ದ ಜಾತ್ರೆ ಸಂಚಾಲಕ ಡಾ.ವಸಂತ ಕುಮಾರ್ ಪೆರ್ಲ, ಒಡಿಯೂರು ತುಳುಕೂಟದ ಸ್ಥಾಪಕ ಅಧ್ಯಕ್ಷ ಮಲಾರು ಜಯರಾಮ ರೈ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಅಧ್ಯಕ್ಷ ಎ.ಸುರೇಶ್ ರೈ, ಸಂಸ್ಥೆಯ ಕಾರ್ಯನಿರ್ವಾಹಕ ಪದ್ಮನಾಭ ಒಡಿಯೂರು, ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಅಧ್ಯಕ್ಷೆ ಸರ್ವಾಣಿ ಪಿ.ಶೆಟ್ಟಿ, ವಿವಿಧ ಸಮಿತಿ ಪದಾಧಿಕಾರಿಗಳಾದ ದೇವಿಪ್ರಸಾದ್ ಶೆಟ್ಟಿ, ಕೆ.ಪಿ.ರಘುರಾಮ ಶೆಟ್ಟಿ, ಲಿಂಗಪ್ಪ ಗೌಡ ಪನೆಯಡ್ಕ ಮತ್ತಿತರರು ಉಪಸ್ಥಿತರಿದ್ದರು.
ಗ್ರಾಮವಿಕಾಸ ಯೋಜನೆ ಬಂಟ್ವಾಳ ತಾ.ವಿಸ್ತರಣಾಧಿಕಾರಿ ಸದಾಶಿವ ಅಳಿಕೆ, ಪ್ರಚಾರ ಸಮಿತಿಯ ಅಜಿತ್‌ನಾಥ್ ಶೆಟ್ಟಿ ಒಡಿಯೂರು, ನಾರಾಯಣ ಶೆಟ್ಟಿ ಸಂಕೊಳಿಗೆ ಮತ್ತಿತರರು ಅನಿಸಿಕೆ ವ್ಯಕ್ತಪಡಿಸಿದರು. ಯಶವಂತ ವಿಟ್ಲ ಸ್ವಾಗತಿಸಿದರು. ಸಂತೋಷ್ ಭಂಡಾರಿ ವಂದಿಸಿದರು.

More from the blog

ನಿರಂತರ ಮಳೆ : ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ದಿನಾಂಕ 15.07.2025ರಂದು ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರ್...

ಒಡಿಯೂರು ಶ್ರೀ ಜನ್ಮದಿನೋತ್ಸವ ಸೇವಾ ಸಂಭ್ರಮದ ಅಂಗವಾಗಿ ಬೃಹತ್ ಉಚಿತ ವೈದ್ಯಕೀಯ ಶಿಬಿರ

ವಿಟ್ಲ : ನಮ್ಮ ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಬದುಕಿನ ಉತ್ತುಂಗಕ್ಕೆ ಕಾರಣವಾಗುತ್ತದೆ. ಬದುಕು ಪೂರ್ತಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಋತುವಿಗನುಗುಣವಾಗಿ ಹಿತ, ಮಿತ ಆಹಾರ ಸೇವಿಸಿದಾಗ ಉತ್ತಮ ಆರೋಗ್ಯ ಪಡೆಯಬಹುದು...

ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು ನಡೆಯಲು ಸಾಧ್ಯ- ಮಾಣಿಲಶ್ರೀ

ವಿಟ್ಲ: ನಮ್ಮ ಕಣ್ಣುಗಳಿಗೆ ಕಾಣದಿರುವ ಶಕ್ತಿಯೇ ದೇವರು. ದೇವರನ್ನು ಬಿಟ್ಟು ನಾವು ಯಾವ ಕಾರ್ಯವನ್ನೂ ಮಾಡಿದರೂ ನಿಷ್ಪ್ರಯೋಜಕ. ಉಸಿರು ಇದ್ದಷ್ಟು ದಿನ ಲೋಕಹಿತ ಕಾರ್ಯ ಮಾಡಬೇಕು. ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು...

ನೈಸರ್ಗಿಕ ವಿಪತ್ತುಗಳಿಗೆ ಮೂಲ ಕಾರಣವೆ ಅರಣ್ಯ ನಾಶ : ಮನೋಜ್ ಮಿನೇಜಸ್ 

ಬಂಟ್ವಾಳ: ನೈಸರ್ಗಿಕ ವಿಪತ್ತುಗಳಿಗೆ  ಮೂಲ ಕಾರಣವೆ ಅರಣ್ಯನಾಶ. ಜಲ ನೆಲ ಪ್ರಾಣಿ ಸಂಕುಲಗಳು ದೇವರ ಆಸ್ತಿ ಅವುಗಳನ್ನು ಸರಿಯಾಗಿ ನಡೆಸುವ ಜವಾಬ್ದಾರಿ ನಮ್ಮದು. ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ .ಕಳೆದ 5 ವರ್ಷಗಳಿಂದ...