Wednesday, February 12, 2025

’ಆತ್ಮವಿಶ್ವಾಸದಿಂದ ಎಲ್ಲವೂ ಸಾಧ್ಯ’-ಒಡಿಯೂರುಶ್ರೀ

ಒಡಿಯೂರು : ಆತ್ಮವಿಶ್ವಾಸದಿಂದ ಅಸಾಧ್ಯವೂ ಸಾಧ್ಯವಾಗುತ್ತದೆ. ಯಶಸ್ವಿಯಾಗುತ್ತದೆ. ವ್ಯಕ್ತಿಗಿಂತ ಸಂಘ-ಸಂಸ್ಥೆ ಶ್ರೇಷ್ಠವಾದುದು. ಈ ಬಾರಿಯೂ ಶ್ರೀಒಡಿಯೂರು ರಥೋತ್ಸವ-ತುಳುನಾಡ್ದ ಜಾತ್ರೆ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ನುಡಿದರು.
ಅವರು ಶ್ರೀ ಒಡಿಯೂರು ರಥೋತ್ಸವ-ತುಳುನಾಡ್ದ ಜಾತ್ರೆಯಲ್ಲಿ ಅವಿರತವಾಗಿ ಶ್ರಮಿಸಿದ ಕಾರ್‍ಯಕರ್ತರ ಅಭಿನಂದನೆ ಸಭೆಯಲ್ಲಿ ಆಶೀರ್ವಚನ ನೀಡಿದರು. ಅಭಿನಂದನ್ ಅವರ ದೇಶಸೇವೆಗೆ ಅಭಿನಂದನೆ ಸಲ್ಲಿಸಬೇಕು. ಸೈನಿಕರ ಸೇವೆಯನ್ನು ರಾಜಕೀಯವಾಗಿ ಬಳಸಕೂಡದು. ರಾಷ್ಟ್ರಕ್ಕೆ ಅನ್ಯಾಯವಾಗುತ್ತಿರುವಾಗ ರಾಜಕೀಯ ತೊರೆದು ಎಲ್ಲ ಮನಸ್ಸುಗಳು ಸಂಘಟಿತರಾಗಬೇಕು. ಅಪಾಯ ಸನ್ನಿವೇಶವನ್ನು ಎದುರಿಸಲು ಸದಾ ಸನ್ನದ್ಧರಾಗಿರಬೇಕು ಎಂದು ಸ್ವಾಮೀಜಿ ಹೇಳಿದರು.
ವಿಶೇಷ ಆಹ್ವಾನಿತರಾಗಿ ತುಳುನಾಡ್ದ ಜಾತ್ರೆ ಸಂಚಾಲಕ ಡಾ.ವಸಂತ ಕುಮಾರ್ ಪೆರ್ಲ, ಒಡಿಯೂರು ತುಳುಕೂಟದ ಸ್ಥಾಪಕ ಅಧ್ಯಕ್ಷ ಮಲಾರು ಜಯರಾಮ ರೈ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಅಧ್ಯಕ್ಷ ಎ.ಸುರೇಶ್ ರೈ, ಸಂಸ್ಥೆಯ ಕಾರ್ಯನಿರ್ವಾಹಕ ಪದ್ಮನಾಭ ಒಡಿಯೂರು, ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಅಧ್ಯಕ್ಷೆ ಸರ್ವಾಣಿ ಪಿ.ಶೆಟ್ಟಿ, ವಿವಿಧ ಸಮಿತಿ ಪದಾಧಿಕಾರಿಗಳಾದ ದೇವಿಪ್ರಸಾದ್ ಶೆಟ್ಟಿ, ಕೆ.ಪಿ.ರಘುರಾಮ ಶೆಟ್ಟಿ, ಲಿಂಗಪ್ಪ ಗೌಡ ಪನೆಯಡ್ಕ ಮತ್ತಿತರರು ಉಪಸ್ಥಿತರಿದ್ದರು.
ಗ್ರಾಮವಿಕಾಸ ಯೋಜನೆ ಬಂಟ್ವಾಳ ತಾ.ವಿಸ್ತರಣಾಧಿಕಾರಿ ಸದಾಶಿವ ಅಳಿಕೆ, ಪ್ರಚಾರ ಸಮಿತಿಯ ಅಜಿತ್‌ನಾಥ್ ಶೆಟ್ಟಿ ಒಡಿಯೂರು, ನಾರಾಯಣ ಶೆಟ್ಟಿ ಸಂಕೊಳಿಗೆ ಮತ್ತಿತರರು ಅನಿಸಿಕೆ ವ್ಯಕ್ತಪಡಿಸಿದರು. ಯಶವಂತ ವಿಟ್ಲ ಸ್ವಾಗತಿಸಿದರು. ಸಂತೋಷ್ ಭಂಡಾರಿ ವಂದಿಸಿದರು.

More from the blog

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...