Saturday, January 31, 2026

ಒಕ್ಕೆತ್ತೂರು: ಪ್ರವಾಹಕ್ಕೆ ಕೊಚ್ಚಿಹೋಗುತ್ತಿದ್ದ ಹೋರಿಯ ರಕ್ಷಣೆ

ವಿಟ್ಲ: ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ವಿಟ್ಲ ಸಮೀಪದ ಒಕ್ಕೆತ್ತೂರು ಹೊಳೆಯಲ್ಲಿ ಪ್ರವಾಹಕ್ಕೆ ಕೊಚ್ಚಿಕೊಂಡು ಹೋಗುತ್ತಿದ್ದ ಹೋರಿಯನ್ನು ಸ್ಥಳೀಯ ಸಾಹಸಿಗ ಯುವಕರು ಸೇರಿ ರಕ್ಷಣೆ ಮಾಡಿದ್ದಾರೆ. ಹೋರಿ ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದೆ.
ಶುಕ್ರವಾರ ಮಧ್ಯಾಹ್ನ ವೇಳೆಗೆ ಒಕ್ಕೆತ್ತೂರು ಕೆಳಗಡೆ ಹೊಳೆಯಲ್ಲಿ ತೇಲಿಕೊಂಡು ಹೋಗುತ್ತಿರುವುದನ್ನು ಗಮನಿಸಿದ ಸ್ಥಳೀಯ ವ್ಯಕ್ತಿಯೊಬ್ಬರು ಇತರರಿಗೆ ಮಾಹಿತಿ ನೀಡಿದ್ದಾರೆ. ಹೋರಿ ಒಕ್ಕೆತ್ತೂರು ಸುರುಂಬಡ್ಕ ಕಿಂಡಿ ಅಣೆಕಟ್ಟು ಸಮೀಪಿಸುತ್ತಿದ್ದಂತೆ ಒಕ್ಕೆತ್ತೂರಿನ ಯುವಕರು ಹಗ್ಗ ಹಿಡಿದು ಹೊಳೆ ಬದಿಯಲ್ಲಿ ಹಿಡಿಯಲು ಮುಂದಾದರು. ಆದರೂ ಸಾಧ್ಯವಾಗಿಲ್ಲ. ಬಳಿಕ ಒಕ್ಕೆತ್ತೂರಿನ ಇಬ್ಬರು ಸಾಹಸಿಗ ಯುವಕರು ನೇರವಾಗಿ ಹೊಳೆಗೆ ಹಾರಿ ರಕ್ಷಣೆ ಮಾಡಿದ್ದಾರೆ. ಈ ಹೋರಿ ಯಾರದ್ದು ಎಂಬುದು ತಿಳಿದಿಲ್ಲ. ಇದೀಗ ಮಂಜಲಾಡಿ ಲಕ್ಷ್ಮಣ್ ಗೌಡ ಅವರ ಮನೆಯಲ್ಲಿ ಹೋರಿಯನ್ನು ಕಟ್ಟಿ ರಕ್ಷಿಸಲಾಗಿದೆ.

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...