Thursday, February 13, 2025

“ಬಾಯಿ, ಮುಖ ಮತ್ತು ದವಡೆ ಶಸ್ತ್ರ ಚಿಕಿತ್ಸಕರ ದಿನ – ಫೆಬ್ರವರಿ 13”

ದಂತ ವೈದ್ಯಕೀಯ ಕ್ಷೇತ್ರ ಎನ್ನುವುದು ವೈದ್ಯಕೀಯ ಶಾಸ್ತ್ರದ ಒಂದು ಅವಿಭಾಜ್ಯ ಅಂಗ. ಪ್ರಾಥಮಿಕವಾಗಿ ದಂತ ವೈದ್ಯಕೀಯ ಪದವಿ ಪಡೆದ ಬಳಿಕ ಸುಮಾರು ಒಂಭತ್ತು ವಿಭಾಗಗಳಲ್ಲಿ ಉನ್ನತ ವ್ಯಾಸಂಗ ಅಥವಾ ಸ್ನಾತಕೋತರ ಪದವಿ ಪಡೆಯುವ ಅವಕಾಶವಿದೆ. ಇದರಲ್ಲಿ ಒಂದು ಶಸ್ತ್ರ ಚಿಕಿತ್ಸೆಗೆ ಸಂಬಂಧಿಸಿದ ಸ್ನಾತಕೋತ್ತರ ಪದವಿಯನ್ನು ಬಾಯಿ, ಮುಖ ಮತ್ತು ದವಡೆ ಶಾಸ್ತ್ರ ಎಂದು ಕರೆಯಲಾಗುತ್ತದೆ. ಬಾಯಿ ಮುಖ ಮತ್ತು ದವಡೆ ತಜ್ಞರು ಸಾಮಾನ್ಯವಾಗಿ ಬಾಯಿ ಮುಖ ಮತ್ತು ದವಡೆಗೆ ಸಂಬಂಧಪಟ್ಟ ರೋಗಗಳಿಗೆ ಸಂಬಂಧಿಸಿದ ಶಸ್ತ್ರ ಚಿಕಿತ್ಸೆ ಮಾಡುತ್ತಾರೆ. ಅಪಘಾತಗಳಾಗಿ ಬಾಯಿ, ಮುಖ ಮತ್ತು ದವಡೆಗೆ ಏಟು ತಗಲಿ ದವಡೆ ಮುರಿದಾಗ, ಬಾಯಿ, ಮುಖ ಮತ್ತು ದವಡೆಯಲ್ಲಿ ಕ್ಯಾನ್ಸರ್ ಗಡ್ಡೆಗಳು ಬೆಳೆದಾಗ, ಸೀಳು ತುಟ್ಟಿ ಮತ್ತು ಸೀಳು ಅಂಗಳ ನ್ಯೂನತೆ ಇದ್ದರೆ ಶಸ್ತ್ರ ಚಿಕಿತ್ಸೆಯ ಮುಖಾಂತರ ಸರಿಪಡಿಸಲಾಗುತ್ತದೆ. ವಿರೂಪಗೊಂಡ ಮುಖದ ಅಂದವನ್ನು ಹೆಚ್ಚಿಸಲು ಆರ್ಥೋಗ್ನಾತಿಕ್ ಸರ್ಜರಿಯ ಮುಖಾಂತರ ದವಡೆ ಮತ್ತು
ಮುಖದ ಅಂದ ಹೆಚ್ಚಿಸಲು, ಬಾಯಿ ಮುಖ ಮತ್ತು ದವಡೆ ತಜ್ಞರು ಶಸ್ತ್ರ ಚಿಕಿತ್ಸೆ ಮಾಡುತ್ತಾರೆ. ಇದಲ್ಲದೆ ದವಡೆಯ ಕೀಲುಗಳಲ್ಲಿ ನ್ಯೂನತೆ ಇದ್ದಾಗ, ಬಾಯಿ ಮುಖ ಮತ್ತು ಕುತ್ತಿಗೆಯ ಸುತ್ತ ಕೀವು ತುಂಬಿಕೊಂಡು ಜೀವಕ್ಕೆ ಕುತ್ತು ಬಂದಾಗ, ದವಡೆಯ ಕೀಲು ಜಾರಿಕೊಂಡು ಬಾಯಿ ಮುಚ್ಚಲು ಸಾಧ್ಯವಾಗದಿದ್ದಾಗ, ದವಡೆಯ ಸುತ್ತ ಮುತ್ತಲಿನ ನರಗಳಲ್ಲಿ ತೊಂದರೆ ಇದ್ದಾಗ ಬಾಯಿ ಮುಖ ಮತ್ತು ದವಡೆ ತಜ್ಞರು ಶಸ್ತ್ರ ಚಿಕಿತ್ಸೆ ಮಾಡುತ್ತಾರೆ. ಅದೇ ರೀತಿ ಅಡ್ಡಾದಿಡ್ಡಿಯಾಗಿ ಬೆಳೆದ ಮೂರನೇ ದವಡೆ ಹಲ್ಲನ್ನು ತೆಗೆಯಲು ಬಾಯಿ ಮುಖ ಮತ್ತು ದವಡೆ
ತಜ್ಞನ ಸೇನೆಯನ್ನು ಬಳಸಿಕೊಳ್ಳಲಾಗುತ್ತದೆ. ಜನರಲ್ಲಿ ಈ ದಂತ ವೈದಕೀಯ ಶಾಸ್ತ್ರದ ಶಸ್ತ್ರ ಚಿಕಿತ್ಸಾ ವಿಭಾಗದ ಬಗ್ಗೆ ಹೆಚ್ಚಿನ ಅರಿವು ಮತ್ತು ಜಾಗೃತಿ ಮೂಡಿಸುವ ದೃಷ್ಟಿಯಲ್ಲಿ ಪ್ರತೀ ವರ್ಷ ಭಾರತಾದ್ಯಂತ “ಬಾಯಿ ಮುಖ ಮತ್ತು ದವಡೆ ಶಸ್ತ್ರ ಚಿಕಿತ್ಸಕರ ದಿನ” ಎಂದು ಫೆಬ್ರವರಿ 13ರಂದು ಆಚರಿಸಲಾಗುತ್ತದೆ.

ಪ್ರತೀ ವರ್ಷ ಯಾವುದಾದರೊಂದು ದ್ಯೇಯ ವಾಕ್ಯ ಇಟ್ಟುಕೊಂಡು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಸದ್ದಿಲ್ಲದೇ ನಡೆಯುತ್ತದೆ. 2015ರಿಂದ 2018ರವರೆಗೆ ಈ ಆಚರಣೆಯ ದ್ಯೇಯ ವಾಕ್ಯ ““FACE IT CAMPAIGN” ಆಗಿರುತ್ತದೆ ಈ FACE IT CAMPAIGN ಎಂಬ ಬರಹದಡಿಯಲ್ಲಿ “ರಸ್ತೆ ಸುರಕ್ಷಾ ನಿಯಮಗಳು ಮತ್ತು ಮುಖಾಂಗಗಳ ಅಫಘಾತ” ಎಂಬ ಸಂದೇಶದೊಂದಿಗೆ ರಾಜ್ಯದಾದ್ಯಂತ ಜನರಲ್ಲಿ ರಸ್ತೆ ಸುರಕ್ಷಾ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಡೆಸಲಾಗುತ್ತದೆ.

ನಮ್ಮ ಭಾರತದಂತಹಾ ಮುಂದುವರಿಯುತ್ತಿರುವ ರಾಷ್ಟ್ರದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ರಸ್ತೆಗಳ ನಿರ್ವಹಣೆ
ಚೆನ್ನಾಗಿಲ್ಲದಿರುವುದರ ಜೊತೆಗೆ ಜನರಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಬಗೆಗಿನ ಅಸಡ್ಡೆ, ಅಸಹಕಾರ ಮತ್ತು ದಿವ್ಯ ನಿರ್ಲಕ್ಷದಿಂದಾಗಿ
ಹೆಚ್ಚಿನ ಅಫಘಾತಗಳು ಮಾರಣಾಂತಿಕವಾಗಿ ಪರಿಣಮಿಸತೊಡಗಿದೆ. ಹೆಲ್ಮೆಟ್‌ಗಳನ್ನು ದ್ವಿಚಕ್ರ ವಾಹನ ಓಡಿಸುವವರು ಕಡ್ಡಾಯವಾಗಿ ಧರಿಸಿದಲ್ಲಿ ಶೇಕಡಾ 80% ರಷ್ಟು ಪ್ರಾಣಾಪಾಯವನ್ನು ಕಡಿಮೆ ಮಾಡಬಹುದು. ಅದೇ ರೀತಿ ಕಾರು ಮತ್ತು ನಾಲ್ಕು ಚಕ್ರ ವಾಹನಗಳನ್ನು ಓಡಿಸುವವರು ಸೀಟು ಬೆಲ್ಟ್ ಧರಿಸಿದಲ್ಲಿ ಸುಮಾರು 75% ರಷ್ಟು ಬಾಯಿ, ಮುಖ ಮತ್ತು ದವಡೆಗಳ ಅಪಘಾತ ಮತ್ತು ತಲೆಯ ಮೇಲಾಗುವ ಮಾರಣಾಂತಿಕ ಅಫಘಾತಗಳನ್ನು ತಡೆಯಬಹುದಾಗಿದೆ.

ಅಫಘಾತದ ತೀವ್ರತೆಯನ್ನು ತಡೆಯಲು ಮಾಡಬೇಕಾದ ಮತ್ತು ಅನುಸರಿಸಬೇಕಾದ ನಿಯಮಗಳು
1. ರಸ್ತೆ ಸುರಕ್ಷಾ ನಿಯಮಗಳನ್ನು ಚಾಚು ತಪ್ಪದೆ ಅನುಸರಿಸಬೇಕು
2. ಸೀಟು ಬೆಲ್ಟ್ ಕಡ್ಡಾಯವಾಗಿ ಧರಿಸ ತಕ್ಕದ್ದು.
3. ಹೆಲ್ಮೆಟ್ ಕಡ್ಡಾಯವಾಗಿ ಧರಿಸಲೇಬೇಕು. ಶೋಕಿಗಾಗಿ ವಿವಿಧ ರೀತಿಯ ಹೆಲ್ಮೆಟ್ ಬೇಡ. ವ್ಶೆಜ್ಞಾನಿಕವಾಗಿ ತಲೆಗೆ ರಕ್ಷಣೆ ನೀಡುವ ಶಿರ ಕವಚ (ಹೆಲ್ಮೆಟ್) ಧರಿಸತಕ್ಕದ್ದು.
4. ವಾಹನ ಓಡಿಸುವಾಗ ಮೊಬೈಲ್‌ನ್ನು ಬಳಸಲೇ ಬಾರದು.
5. ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುವಾಗ ಲೇನ್ ಪದ್ಧತಿಯನ್ನು ಖಡ್ಡಾಯವಾಗಿ ಪಾಲಿಸತಕ್ಕದ್ದು.
6. ಅತಿಯಾದ ವೇಗ ಅಫಘಾತಕ್ಕೆ ಕಾರಣ.
7. ಮಧ್ಯಪಾನ ಮಾಡಿ ವಾಹನ ಚಾಲನೆ ಮಾಡಲೇಬಾರದು ಜೀವನ ಎನ್ನುವುದು ಒಂದು ಪಯಣ. ನಿಮ್ಮ ಪ್ರಯಾಣವನ್ನು ಆನಂದಿಸಿ.
ಆನಂದ ಎನ್ನುವುದು ನಿಮ್ಮ ಜೀವನ ಪ್ರಯಾಣದ ಅನುಭವವಾಗಿರಬೇಕೇ ಹೊರತು ಗುರಿಯಾಗಿರಬಾರದು. ಆನಂದ ಎನ್ನುವುದೇ ನಿಮ್ಮ ಜೀವನದ ಗುರಿಯಾಗಿದ್ದಲ್ಲಿ, ನೀವು ನಿಮ್ಮ ಜೀವನದ ಪಯಣವನ್ನು ಅನುಭವಿಸಲು ಸಾಧ್ಯವಾಗುವುದು.

ಜೀವನದ ಪ್ರತೀ ಕ್ಷಣವನ್ನು ಅನುಭವಿಸಿ ಮತ್ತು ಆನಂದಿಸಿ. ಹಾಗೇ ಮಾಡಿದ್ದಲ್ಲಿ ನೀವು ನಿಮ್ಮವರು ಮತ್ತು ಉಳಿದವರು ಕೂಡಾ ಗುರಿ ತಲುಪಬಹುದು ಮತ್ತು ತಮ್ಮ ಜೀವನದ ಪಯಣವನ್ನು ಅನುಭವಿಸಬಹುದು. ನೀವು ರಸ್ತೆ ಸುರಕ್ಷಾ ನಿಯಮಗಳನ್ನು ಗಾಳಿಗೆ ತೂರಿ ಬೇಕಾಬಿಟ್ಟಿ ವರ್ತಿಸಿದಲ್ಲಿ ನಿಮ್ಮ ಜೀವನದ ಪಯಣ ಎಲ್ಲಿಂದ ಎಲ್ಲಿಗೆ ತಲುಪಬಹುದು. ಅದರ ಜೊತೆಗೆ ಉಳಿದವರ ಜೀವನದ ಪಯಣದ ದಾರಿ ಮತ್ತು ಗುರಿ ಕೂಡಾ ಬದಲಾಗಬಹುದು. ಈ ಕಾರಣದಿಂದಲೇ ನಾವೆಲ್ಲಾ ರಸ್ತೆ ಸುರಕ್ಷತಾ ನಿಯಮಗಳನ್ನು ಚಾಚು ತಪ್ಪದೆ
ಪಾಲಿಸೋಣ ಅದರಲ್ಲಿಯೇ ನಮ್ಮೆಲ್ಲರ ಒಳಿತು ಅಡಗಿದೆ.

ನಿಮಗಿದು ಗೊತ್ತೇ?
1. ಭಾರತ ವಿಶ್ವದ ಅಪಘಾತದ ರಾಜಧಾನಿ
2. 15ರಿಂದ 30ರ ವರ್ಷದ ಯುವ ಜನತೆಯ ಸಾವಿನ ಮೊದಲ ಮೂಲ ಕಾರಣ ರಸ್ತೆ ಅಪಘಾತ.
3. ರಸ್ತೆ ಅಪಘಾತ ಅತೀ ಸಾಮಾನ್ಯ. ಕಾರಣ “ಮಧ್ಯಪಾನ”
4. ಪ್ರತೀ 48 ನಿಮಿಷಕ್ಕೆ ಒಬ್ಬೊಬ್ಬರ ಸಾವಿಗೆ ಕಾರಣ ಮಧ್ಯಪಾನ ಮತ್ತು ರಸ್ತೆ ಅಫಘಾತ
5. ಶಿರಕವಚ ಧರಿಸಿದಲ್ಲಿ ಮುಖಾಂಗದ ಅಫಘಾತ ಪ್ರಮಾಣ ಕೇವಲ 25%. ಶಿರಕವಚವಿಲ್ಲದಿದ್ದಲ್ಲಿ ಶೇಕಡಾ 50% ಮಂದಿ ಮುಖಾಂಗದ ಅಫಘಾತಕ್ಕೆ ಕಾರಣವಾಗಬಹುದು.
6. ಶಿರಕವಚ ತಲೆಗೆ ರಕ್ಷಣೆ ಕೊಡುವ ವಸ್ತುವಾಗಿರಬೇಕು ಹೊರತು ಪ್ಯಾಷನ್ ಆಗಬಾರದು. ತಲೆ ಮುಖ ಮುಚ್ಚುವ ಶಿರಕವಚ ಧರಿಸಿದಲ್ಲಿ
ತಲೆಗೆ ಒಂಟಾಗುವ ಗಾಯದ ಪ್ರಾಮಾಣ ಸುಮಾರು 13% ಮಾತ್ರ. ಆದರೆ ಅರ್ಧ ತಲೆ ಮುಚ್ಚುವ ಶಿರ ಕವಚದಿಂದ ತಲೆಗೆ ಗಾಯವಾಗುವ ಪ್ರಮಾಣ ಸುಮಾರು 26% ಈ ಕಾರಣದಿಂದಲೇ ಪೂರ್ತಿ ತಲೆಮುಚ್ಚುವ ಶಿರ ಕವಚ ಧರಿಸಬೇಕು. ಅದೇ ರೀತಿ ಪೂರ್ತಿ ಶಿರ ಕವಚ ಧರಿಸಿದಲ್ಲಿ ಮುಖಾಂಗದ ಗಾಯದ ಪ್ರಮಾಣ 7% ಮತ್ತು ಅರ್ಧ ಶಿರಕವಚ ಧರಿಸಿದಲ್ಲಿ ಮುಂಖಾಗದ ಗಾಯದ ಪ್ರಮಾಣ 27%
7. ನಮ್ಮ ದೇಶದ ಅಫಘಾತಗಳಲ್ಲಿ 55% ಅಫಘಾತಗಳಲ್ಲಿ ಚಾಲಕರು ಸೀಟ್ ಬೆಲ್ಟ್ ಧರಿಸುವುದೇ ಇಲ್ಲ. ಸೀಟ್ ಬೆಲ್ಟ್ ಧರಿಸದ ಕಾರಣ ಅಫಘಾತದ ತೀವ್ರತೆ ಅತೀ ಹೆಚ್ಚು.
8. ನಮ್ಮ ದೇಶದ ಅಫಘಾತ ಸಂಖ್ಯೆಗಳಲ್ಲಿ 50% ಮಂದಿ ಸೀಟ್‌ಬೆಲ್ಟ್ ಧರಿಸುವುದಿಲ್ಲ ಮತ್ತು ಮಧ್ಯಪಾನ ಮಾಡಿರುತ್ತಾರೆ.
9. ಶೇಕಡಾ 35% ಅಫಘಾತಕ್ಕೆ ಕಾರಣ, ವಾÀಹನ ಚಾÀಲನೆಯ ಸಮಯದಲ್ಲಿ ಮೊಬೈಲ್ ಬಳಕೆ
10. ಭಾರತದಲ್ಲಿ ಶೇಕಡಾ 10% ದ್ವಿಚಕ್ರ ವಾಹನ ಚಾಲಕರು ಮಾತ್ರ ಶಿರ ಕವಚ ಧರಿಸುತ್ತಾರೆ. ಮತ್ತು 33% ಚಾಲಕರು ಮಾತ್ರ ಸೀಟ್‌ಬೆಲ್ಟ್ ಬಳಸುತ್ತಾರೆ.
11. 40-50% ಪ್ರಮಾಣ ಅಫಘಾತಗಳು ರಾತ್ರಿ ಹೊತ್ತು ಸಂಭವಿಸುತ್ತದೆ.

ಕೊನೆಯ ಮಾತು
ಯಾರು ನಮ್ಮನ್ನು ಗಮನಿಸದೇ ಇರುವಾಗ ಅಂದರೆ ನಾವು ಏಕಾಂತದಲ್ಲಿರುವಾಗಲೂ ಕೂಡಾ ನಮ್ಮ ವರ್ತನೆ ನಮ್ಮ ಸಂಸ್ಕೃತಿಯನ್ನು
ತೋರಿಸುತ್ತದೆ ಮತ್ತು ಪ್ರತಿಬಿಂಬಿಸುತ್ತದೆ ಎಂದು ಬಲ್ಲವರು ಹೇಳಿದ್ದಾರೆ. ಹಾಗಾಗಿ ಬೇರೆಯವರು ನಮ್ಮನ್ನು ಗಮನಿಸುತ್ತಿದ್ದಾರೆ ಎಂಬ ಭಯದಲ್ಲಿ ಅಥವಾ ಗ್ರಹಿಕೆಯಲ್ಲಿ ನಾವು ರಸ್ತೆ ಸುರಕ್ಷತಾ ನಿಯಮವನ್ನು ಪಾಲಿಸಬಾರದು. ಅದು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿರಬೇಕು. ಪೋಲಿಸರು ಇರಲಿ, ಇಲ್ಲದಿರಲಿ ನಮ್ಮ ಜೀವನದ ಮತ್ತು ಇತರರ ಜೀವನದ ಮೇಲಿನ ಸುರಕ್ಷತೆಯ ದೃಷ್ಟಿಯಿಂದ
ನಾವೆಲ್ಲರೂ ರಸ್ತೆ ಸುರಕ್ಷಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಹಾಗೆ ಮಾಡಿದಲ್ಲಿ ಮಾತ್ರ ಅಫಘಾತಗಳ ಸಮಯದಲ್ಲಿ ಆಗುವ ಸಾವು ನೋವು ಮತ್ತು ಗಾಯದ ತೀವ್ರತೆಯನ್ನು ಕಡಿಮೆ ಮಾಡಬಹುದು. ಅದರಲ್ಲಿಯೇ ಭಾರತದಂತಹಾ ಮುಂದುವರಿಯುತ್ತಿರುವ ರಾಷ್ಟçದ ಒಳಿತು ಮತ್ತು ಶಾಂತಿ ಅಡಗಿದೆ. ಮೊದಲೇ ಅನರಕ್ಷತೆ, ಬಡತನ, ಅಜ್ಞಾನ, ಮೂಢನಂಬಿಕೆ ಮತ್ತು ಮೂಲಭೂತ ಸೌಕರ್ಯಗಳ ಅಲಭ್ಯತೆಗಳಿಂದ ನಮ್ಮ ದೇಶದ ಪ್ರಗತಿ ಕುಂಠಿತವಾಗುತ್ತಿರುವ ಕಾಲಘಟ್ಟದಲ್ಲಿ ವಿದ್ಯಾವಂತರಾದ ನಾವು ರಸ್ತೆ ಸುರಕ್ಷತಾ ನಿಯಮಗಳನ್ನು ಗಾಳಿಗೆ ತೂರಿದಲ್ಲಿ, ಮತ್ತಷ್ಟು ಸಾವು ನೋವು ಮತ್ತು ಹಾನಿ ಉಂಟಾಗಿ ದೇಶದ ಪ್ರಗತಿಗೆ ಮಾರಕವಾಗ ಬಹುದು. ಈ ನಿಟ್ಟಿನಲ್ಲಿ ನಾವೆಲ್ಲಾ
ನಮ್ಮೆಲ್ಲರ ಜವಾಬ್ದಾರಿ ಅರಿತು ನಮ್ಮ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸಿದಲ್ಲಿ ನಮ್ಮ ದೇಶದ ಪ್ರಗತಿಯನ್ನು ತಡೆಯುವ ಶಕ್ತಿ ಇನ್ನೊಂದಿರಲಿಕ್ಕಿಲ್ಲ. ಅದರಲ್ಲಿಯೇ ನಮ್ಮ ಒಳಿತು ಅಡಗಿದೆ.

ಡಾ|| ಮುರಲೀ ಮೋಹನ್ ಚೂಂತಾರು
ಬಾಯಿ ಮುಖ ದವಡೆ ಶಸ್ತ್ರ ಚಿಕಿತ್ಸಕರು
ಸುರಕ್ಷಾದಂತ ಚಿಕಿತ್ಸಾಲಯ ಹೊಸಂಗಡಿ – 671 323, ಮೊ :
09845135787

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...