ಬಂಟ್ವಾಳ: ಬಂಟ್ವಾಳ ತಾ| ಇರ್ವತ್ತೂರುಪದವು ಶ್ರೀ ಶಾರದೋತ್ಸವ ಸಮಿತಿ ಇದರ ಆಶ್ರಯದಲ್ಲಿ ಮೂಡುಪಡುಕೋಡಿ ಸ.ಹಿ.ಪ್ರಾ. ಶಾಲಾ ವಠಾರದಲ್ಲಿ 5 ನೇ ವರ್ಷದ ಶ್ರೀ ಶಾರದಾ ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಶಾರದಾ ಎಸ್ ರಾವ್ ಮಂಚಿ ಅವರಿಗೆ ಶಾರದಾ ತಿಲಕ ಪ್ರಶಸ್ತಿ ಪ್ರದಾನ, ಸಾಧಕರಿಗೆ ಸಮ್ಮಾನ ಕಾರ್ಯಕ್ರಮ ನಡೆಯಿತು.

ತಾಲೂಕು ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಸುನಿಲ್ ಸಿಕ್ವೆರಾ, ಮುರಳಿಕೃಷ್ಣ ರಾವ್, ನಿವೃತ್ತ ಶಿಕ್ಷಕಿ ವಸಂತಿ ಜಿ.ಕೆ.ಭಟ್, ಶಿಕ್ಷಕರಾದ ವಿಲ್ಮಾ ಮೇರಿ ಡಿಸೋಜ,ಅಮೃತಾ ಕೆ., ಕುಮಾರ್ಸಿ.,ಬಂಟ್ವಾಳ ತಾ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಅವರನ್ನು ಸನ್ಮಾನಿಸಲಾಯಿತು.
ಕಜೆಕೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಧ್ಯಕ್ಷ ಚಂದ್ರಶೇಖರ ಭಟ್ ನೆಕ್ಕಿತರವು,ಸಮಿತಿ ಕಾರ್ಯಾಧ್ಯಕ್ಷ ಹರೀಂದ್ರ ಪೈ, ಸಮಿತಿ ಗೌರವಾಧ್ಯಕ್ಷ ರಾಜೀವ ಶೆಟ್ಟಿ ಎಡ್ತೂರು, ಪ್ರಮುಖರಾದ ಸುಲೋಚನಾ ಜಿ.ಕೆ.ಭಟ್, ಲೋಕೇಶ್ ಆಚಾರ್ಯ, ಜಗನ್ನಾಥ ಶೆಟ್ಟಿ ಕೆದ್ದಳಿಕೆ, ಧೀರಜ್ ನಾಯ್ಕ್ ಪ್ರಶಾಂತ್ ಪುಂಜಾಲಕಟ್ಟೆ, ರಮೇಶ್ ಪೂಜಾರಿ ಕುಡ್ಮೇರು,ಸತೀಶ್ ಕಯ್ಯಬೆ, ಯತೀಶ್ ಶೆಟ್ಟಿ, ಶೇಖರ ಪೂಜಾರಿ, ಪದ್ಮನಾಭ ಭಂಡಾರಿ, ಮೋಹನ ಶೆಟ್ಟಿ ನರ್ವಲ್ದಡ್ಡ, ಸಮಿತಿ ಪದಾಽಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಶಂಕರ ಶೆಟ್ಟಿ ಬೆದ್ರಮಾರ್ ಸ್ವಾಗತಿಸಿದರು. ಸಮಿತಿ ಅಧ್ಯಕ್ಷ ಡಾ| ರಾಮಕೃಷ್ಣ ಎಸ್. ಪ್ರಸ್ತಾವಿಸಿದರು.ದಯಾನಂದ ಎರ್ಮೆನಾಡು ವಂದಿಸಿದರು.ಗಣೇಶ್ ಶೆಟ್ಟಿ ಸೇವಾ ಕಾರ್ಯಕ್ರಮ ನಿರೂಪಿಸಿದರು.

