Wednesday, January 28, 2026

ಕಜೆಕೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಆಶ್ಲೇಷಬಲಿ ಪೂಜೆ

ಬಂಟ್ವಾಳ: ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು ಪುನರ್ ನಿರ್ಮಾಣಗೊಳ್ಳುತ್ತಿರುವ ಬಂಟ್ವಾಳ ತಾಲೂಕಿನ ಮೂಡುಪಡುಕೋಡಿ ಗ್ರಾಮದ ಕಜೆಕೋಡಿ ಶ್ರೀ ಉಮಾಮಹೇಶ್ವರ ಸಪರಿವಾರ ದೇವಸ್ಥಾನದಲ್ಲಿ ಜೀರ್ಣೊದ್ಧಾರ ಕಾರ್ಯ ಪೂರ್ವಭಾವಿಯಾಗಿ ಆಶ್ಲೇಷಬಲಿ ಪೂಜೆ ಎ.21ರಂದು ನಡೆಯಿತು.

ಗ್ರಾಮದ ತಂತ್ರಿಗಳಾದ ವೇ.ಮೂ. ಬಾಲಕೃಷ್ಣ ಪಾಂಗಣ್ಣಾಯ ಅವರ ಪೌರೋಹಿತ್ಯದಲ್ಲಿ ವೇ.ಮೂ. ಉದಯ ಪಾಂಗಣ್ಣಾಯ ಹಾಗೂ ಪ್ರ. ಅರ್ಚಕ ಗೋಪಾಲಕೃಷ್ಣ ಭಟ್ ಅವರ ಸಹಕಾರದಲ್ಲಿ ಧಾರ್ಮಿಕ ವಿಧಾನಗಳು ನಡೆಯಿತು.

ಅಡಳಿತ ಮಂಡಳಿಯ ಅಧ್ಯಕ್ಷ ಯು.ಎಸ್. ಚಂದ್ರಶೇಖರ ಭಟ್, ಪ್ರ. ಕಾರ್ಯದರ್ಶಿ ಡಾ. ರಾಮಕೃಷ್ಣ ಎಸ್., ಗೌರವಾಧ್ಯಕ್ಷ ಮೋಹನ್ ಶೆಟ್ಟಿ ನರ್ವಲ್ದಡ್ಡ, ಡಾ. ಶಿವಪ್ರಸಾದ್ ಭಟ್ ಸನಂಗುಳಿ ಕೊರಗ ಶೆಟ್ಟಿ ಬಂಗೇರೆಕೆರೆ, ಜೀರ್ಣೊದ್ಧಾರ ಸಮಿತಿ ಅಧ್ಯಕ್ಷ ಶಂಕರ್ ಶೆಟ್ಟಿ ಬೆದ್ರಮಾರ್, ಪ್ರ. ಕಾರ್ಯದರ್ಶಿ ದಯಾನಂದ ಎಸ್. ಎರ್ಮೆನಾಡು, ಉಮೇಶ್ ಮೂಲ್ಯ ಸೇವಾ, ಶೀನ ಶೆಟ್ಟಿ ಕಜೆಕೋಡಿ, ಅರುಣ್ ಶೆಟ್ಟಿ ಕಜೆಕೋಡಿ, ಕಾಂತಪ್ಪ ಕಜೆಕೋಡಿ, ಪ್ರಶಾಂತ್ ಜೈನ್ ಸೇವಾ, ಯಕ್ಷಿತ್ ಗೌಡ, ಲೋಕನಾಥ ಶೆಟ್ಟಿ ನರ್ವಲ್ದಡ್ಡ ಮತ್ತಿತರರು ಉಪಸ್ಥಿತರಿದ್ದರು.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...