Thursday, June 26, 2025

ನಮ್ಮ ನಡಿಗೆ ನರಹರಿ ಕಡೆಗೆ ಪಾದಯಾತ್ರೆ

ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಆಶ್ರಯದಲ್ಲಿ ನಮ್ಮ ನಡಿಗೆ ನರಹರಿಯ ಕಡೆಗೆ ಪಾದಯಾತ್ರೆ ಮತ್ತು ಜನಜಾಗೃತಿ ಸಾರ್ವಜನಿಕ ಸಭೆ ಭಾನುವಾರ ಬೆಳಗ್ಗೆ ನಡೆಯಿತು.

ಕಲ್ಲಡ್ಕ ಶ್ರೀರಾಮ ಮಂದಿರದ ಬಳಿಯಿಂದ ಮತ್ತು ಮೆಲ್ಕಾರ್ ಜಂಕ್ಷನ್ ನಿಂದ ಪಾದಯಾತ್ರೆ ನಡೆಯಿತು. ಬಳಿಕ ಸಭಾ ಕಾರ್ಯಕ್ರಮ ನಡೆದಿದ್ದು, ದಿಕ್ಸೂಚಿ ಭಾಷಣವನ್ನು ಬಾಲವಾಗ್ಮಿ ಹಾರಿಕಾ ಮಂಜುನಾಥ್ ಮಾಡಿದರು.

ಪೂರ್ವಜರು ನಮಗೆ ಬಿಟ್ಟುಹೋದ ಆಸ್ತಿಯನ್ನು ರಕ್ಷಿಸುವ ಕೆಲಸವನ್ನು ನಾವು ಮಾಡಬೇಕು, ಈ ಕುರಿತು ನಾವು ಜಾಗೃತರಾಗಬೇಕು ಎಂದರು. ಅಪಘಾನಿಸ್ಥಾನದಲ್ಲಿ ಆದ ಘಟನೆಗಳು ಇಲ್ಲಿ ಆಗಬಾರದು ಎಂಬುದಾದರೆ, ನಾವು ಜಾಗೃತರಾಗಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಹಿಂದು ಜಾಗರಣಾ ವೇದಿಕೆ ಪ್ರಾಂತ ಕಾರ್ಯಕಾರಿಣಿ ಸದಸ್ಯ ರಾಧಾಕೃಷ್ಣ ಅಢ್ಯಂತಾಯ, ಕ್ಷೇತ್ರಗಳು ಒಳ್ಳೆಯದಾಗಬೇಕು, ಭಕ್ತರಿಗೆ ಉತ್ತಮ ವ್ಯವಸ್ಥೆಗಳು ಕಲ್ಪಿಸಬೇಕು ಆದರೆ ಪ್ರವಾಸೋದ್ಯಮ ಹೆಸರಲ್ಲಿ ಪಾವಿತ್ರ್ಯತೆ ಹಾಳಾಗುವುದನ್ನು ನಾವು ಸಹಿಸುವುದಿಲ್ಲ ಎಂದರು.

ಪುತ್ತೂರು ಜಿಲ್ಲಾ ಸಂಪರ್ಕ ಪ್ರಮುಖ್ ನರಸಿಂಹ ಮಾಣಿ ಮಾತನಾಡಿ, ನರಹರಿ ಪರ್ವತ ನಮಗೆಲ್ಲರಿಗೂ ಶ್ರದ್ಧಾಕೇಂದ್ರ, ಇದರ ಪಾವಿತ್ರ್ಯ ಉಳಿಸಲು ಹಿಂದು ಜಾಗರಣಾ ವೇದಿಕೆ ವಿಟ್ಲ ತಾಲೂಕು ಕಟಿಬದ್ಧವಾಗಿದೆ ಎಂದರು.

ಸಭಾಧ್ಯಕ್ಷತೆಯನ್ನು ಹಿಂದು ಜಾಗರಣಾ ವೇದಿಕೆ ಪುತ್ತೂರು ಜಿಲ್ಲಾಧ್ಯಕ್ಷ ಜಗದೀಶ ನೆತ್ತರಕೆರೆ ವಹಿಸಿದ್ದರು. ವೇದಿಕೆಯಲ್ಲಿ ಪುತ್ತೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜಿತ್ ಹೊಸಮನೆ, ತಾಲೂಕು ಅಧ್ಯಕ್ಷ ಗಣೇಶ್ ಕುಲಾಲ್ ಕೆದಿಲ ಉಪಸ್ಥಿತರಿದ್ದರು. ತಾಲೂಕು ಪ್ರಧಾನ ಕಾರ್ಯದರ್ಶಿ ಅರುಣ್ ಸಜಿಪ ಸ್ವಾಗತಿಸಿದರು. ವೈಯಕ್ತಿಕ ಗೀತೆ, ವಂದೇ ಮಾತರಂ ಅನ್ನು ವಿದ್ಯಾಶ್ರೀ ಕಲ್ಲಡ್ಕ ಹಾಡಿದರು. ಕಲ್ಲಡ್ಕ ಮತ್ತು ಮೇಲ್ಕಾರ್ ನಿಂದ ನಡೆದ ಮೆರವಣಿಗೆಯಲ್ಲಿ ವಿಭಾಗ ಸಂಪರ್ಕ ಪ್ರಮುಖ್ ರತ್ನಾಕರ ಶೆಟ್ಟಿ ಕಲ್ಲಡ್ಕ, ಪ್ರಮುಖರಾದ ದಿನೇಶ್ ಅಮ್ಟೂರು, ಪುರುಷೋತ್ತಮ ಸಾಲಿಯಾನ್, ಪಿ.ಎಸ್.ಮೋಹನ್, ರವೀಶ್ ಶೆಟ್ಟಿ, ದಯಾನಂದ ಉಜಿರೆಮಾರು, ತಾಲೂಕು ಜಿಲ್ಲೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...