Thursday, February 13, 2025

ಛಾಯಾಗ್ರಾಹಕ ಪದ್ಮನಾಭ ರಾವ್ ಅವರಿಗೆ ಶೃದ್ದಾಂಜಲಿ ಸಭೆ

ಬಂಟ್ವಾಳ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ಮಾಜಿ ಅಧ್ಯಕ್ಷ, ಹಿರಿಯ ಛಾಯಾಗ್ರಾಹಕ ಪಲ್ಲವಿ ಸ್ಟುಡಿಯೋ ಮಾಲಕ ದಿ. ಪದ್ಮನಾಭ ರಾವ್ ಅವರಿಗೆ ಬಂಟ್ವಾಳ ವಲಯದ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ಬಂಟ್ವಾಳ ವಲಯ ಹಾಗೂ ಸಾರ್ವಜನಿಕರಿಂದ ಶೃದ್ದಾಂಜಲಿ ಸಭೆ ಬಿಸಿರೋಡಿನಲ್ಲಿ ನಡೆಯಿತು.
ನಿವೃತ್ತ ಮುಖ್ಯೋಪಾಧ್ಯಾಯ, ರಂಗಕರ್ಮಿ ಮಹಾಬಲೇಶ್ವರ ಹೆಬ್ಬಾರ್ ನುಡಿ ನಮನ ಸಲ್ಲಿಸಿ ಮಿತವಾಗಿ ಮೌನಿಯಾಗಿ, ಎಲ್ಲರೊಂದಿಗೂ ಹಸನ್ಮುಖಿಯಾಗಿ ಬೆರಯುವ ಇವರ ಗುಣ ಆದರ್ಶವಾಗಿತ್ತು ಎಂದರು.

ಹಿರಿಯ ಕಲಾವಿದ ಮಂಜು ವಿಟ್ಲ ಮಾತನಾಡಿ, ಹೆರುವವರು ಯಾರು ಗೊತ್ತಿಲ್ಲ, ಹೊರುವವರು ಯಾರು ಗೊತ್ತಿಲ್ಲ ಈ ಮಧ್ಯೆ ದೇವರು ನೀಡಿದ ಸುಂದರ ಜೀವನದಲ್ಲಿ ತಮ್ಮ ಮಾತು, ನಡವಳಿಕೆ, ಸಂಸ್ಕಾರದ ಮೂಲಕ ಎಲ್ಲರಿಗೂ ಮಾದರಿಯಾದವರು ಪದ್ದಣ್ಣ ಎಂದು ಅವರು ಹೇಳಿದರು.


ಪದ್ಮನಾಭ ರಾವ್ ಅವರ ಸಹೋದರ ಬಿ. ರಾಮಚಂದ್ರ ರಾವ್, ಪ್ರೋ. ತುಕರಾಮ್ ಪೂಜಾರಿ, ಪ್ರೋ. ಅನಂತಪದ್ಮನಾಭ ರಾವ್, ಕುಮಾರಸ್ವಾಮಿ, ಸರಪಾಡಿ ಆಶೋಕ್ ಶೆಟ್ಟಿ, ಹರೀಶ್ ಮಾಂಬಾಡಿ, ರತ್ನದೇವ್ ಪುಂಜಾಲಕಟ್ಟೆ, ರಾಜ ಬಂಟ್ವಾಳ, ದಯಾನಂದ, ಪದ್ಮನಾಭ ರಾವ್ ಅವರ ಪುತ್ರಿ ಪಲ್ಲವಿ ಮತ್ತಿತರರು ನುಡಿನಮನ ಸಲ್ಲಿಸಿದರು.
ಹೆಚ್. ಕೆ. ನಯನಾಡು ಕಾರ್ಯಕ್ರಮ ನಿರೂಪಿಸಿದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...