Saturday, February 8, 2025

ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ನಿವಾಸಕ್ಕೆ ದ.ಕ.ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಭೇಟಿ

ಬಂಟ್ವಾಳ; ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ದ.ಕ.ಜಿಲ್ಲಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಅವರು ಭೇಟಿ ನೀಡಿ ಆಶ್ರೀರ್ವಾದ ಪಡೆದಿದ್ದಾರೆ.

ಕಾಂಗ್ರೆಸ್ ಟಿಕೆಟ್ ಅಕಾಂಕ್ಷಿಯಾಗಿದ್ದ ಪದ್ಮರಾಜ್ ಆರ್ ಅವರನ್ನು ಪಕ್ಷ ಅಭ್ಯರ್ಥಿಯಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಕುದ್ರೋಳಿ ದೇವಸ್ಥಾನಕ್ಕೆ ಭೇಟಿ ನೀಡಿ ಬಳಿಕ ನೇರವಾಗಿ ಹಿರಿಯ ಕಾಂಗ್ರೆಸ್ ನಾಯಕ ಗುರುಸಮಾನರಾದ ಜನಾರ್ದನ ಪೂಜಾರಿ ಅವರ ಮನೆಗೆ ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಜನಾರ್ದನ ಪೂಜಾರಿ ಅವರು‌ ಮಾತನಾಡಿ, ದೇವರ ಸಂಪೂರ್ಣ ಆಶ್ರೀರ್ವಾದ ಅಭ್ಯರ್ಥಿಯ ಮೇಲೆ ಇದ್ದು, ವಿಜಯದ ಪತಾಕೆಯನ್ನು ಹಾರಿಸಲು ಕಾರ್ಯಕರ್ತರು ರಾತ್ರಿ ಹಗಲು ಕೆಲಸ ಮಾಡಬೇಕು ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಬಡವರ ಸೇವೆ ಮಾಡಬೇಕು ಎಂದು ತಿಳಿಸಿದರು.

ಅಭ್ಯರ್ಥಿ ಪದ್ಮರಾಜ್ ಆರ್ ಅವರು ಮಾತನಾಡಿ, ರಾಜಕೀಯ ವ್ಯವಸ್ಥೆಯ ಒಳಗೆ ಬರಬೇಕಿದ್ದರೆ ಪೂಜಾರಿ ಅವರ ಆಶ್ರೀರ್ವಾದದಿಂದ ಸಾಧ್ಯವಾಗಿದೆ.

ಇದೀಗ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅವಕಾಶ ಸಿಕ್ಕಿದ್ದು, ಈ ಸಂದರ್ಭದಲ್ಲಿ ಪೂಜಾರಿ ಅವರ ಆಶ್ರೀರ್ವಾದ ಪಡೆಯಲು ಬಂದಿದ್ದೇನೆ.

ಪೂಜಾರಿ ಅವರು ಹಾಕಿಕೊಟ್ಟ ಹಾದಿಯಲ್ಲಿ ಪಾರದರ್ಶಕತೆಯ ರಾಜಕೀಯ ಮಾಡುತ್ತೇನೆ, ಪೂಜಾರಿ ಅವರ ಕನಸಿನ ಅನೇಕ ಕಾರ್ಯಗಳಿಗೆ ಬಲತುಂಬುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬಂಟ್ವಾಳ ‌ಬೂಡ ಅಧ್ಯಕ್ಷ ಬೇಬಿಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಶೆಟ್ಟಿ ಮಾಣಿ, ಪ್ರಮುಖರಾದ ಸುನಿಲ್ ಬಜಲಕೇರಿ, ಅಪ್ಪಿ , ದೀಪಕ್ ಪೆರ್ಬುದೆ, ದೀಪಕ್ ಪಿಳಾರ್, ಮಧುಸೂದನ್ ಶೆಣೈ, ದಿನೇಶ್ ಶೆಟ್ಟಿ ,ಸುರೇಶ್ ಜೋರಾ, ನಿತಿನ್ ಬೆಳುವಾಯಿ, ಪ್ರವೀಣ್ ಪರಂಗಿಪೇಟೆ ಮತ್ತಿತರ ಪ್ರಮುಖರು ಹಾಜರಿದ್ದರು ‌

More from the blog

ಅನರ್ಹ ಮತದಾರರ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಗೆ ಪರಿಗಣಿಸಬಾರದು: ಉಚ್ಚ ನ್ಯಾಯಾಲಯದ ತೀರ್ಪು

ಬಂಟ್ವಾಳ: ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಯಲ್ಲಿ ಪರಿಗಣಿಸಬಾರದು ಎಂದು ಕರ್ನಾಟಕ ಉಚ್ಚ ನ್ಯಾಯಲಯವು ಐತಿಹಾಸಿಕ ತೀರ್ಪನ್ನು ಹೊರಡಿಸಿದೆ. ಮಡಂತ್ಯಾ‌ರ್ ಪ್ರಾಥಮಿಕ...

ಬಂಟ್ವಾಳ : ತಾಲೂಕು ಆಸ್ಪತ್ರೆಗೆ ವೈದ್ಯರನ್ನು ನೀಡಿ – ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ

ಬಂಟ್ವಾಳ: ಸುಸಜ್ಜಿತವಾದ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆಯಾದರೂ ರೋಗಿಗಳಿಗೆ ಚಿಕಿತ್ಸೆ ನೀಡಲು ಸರಿಯಾದ ವಿಭಾಗದಲ್ಲಿ ವೈದ್ಯರುಗಳಿಲ್ಲದೆ, ತಾಲೂಕಿನ ಬಡ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಸಾಮಾಜಿಕ ಕಾರ್ಯಕರ್ತ ಸಮಾದ್ ಕೈಕಂಬ ಅವರು...

ಕಾರ್ಮಿಕರ ಸಮಸ್ಯೆ ಮತ್ತು ಮಂಗಳೂರಿನ ಇಎಸ್ಐ ಆಸ್ಪತ್ರೆಯ ಸಮಸ್ಯೆಯ ಪರಿಹಾರಕ್ಕಾಗಿ, ದೆಹಲಿಯಲ್ಲಿ ಇಎಸ್ಐಸಿ ಡಿಜಿಯನ್ನು ಭೇಟಿಯಾದ ಸಂಸದ ಕ್ಯಾ. ಚೌಟ

  ನವದೆಹಲಿ: ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನವದೆಹಲಿಯಲ್ಲಿ ಇಂದು ಇಎಸ್ಐಸಿ ಪ್ರಧಾನ ಕಚೇರಿಯ ಮಹಾ ನಿರ್ದೇಶಕ ಅಶೋಕ್ ಕುಮಾರ್ ಸಿಂಗ್ ಅವರನ್ನು ಭೇಟಿ ಮಾಡಿ ಮಂಗಳೂರಿನ ಇಎಸ್ಐ ಆಸ್ಪತ್ರೆ...

ಮಾಣಿಯಲ್ಲಿ ಟ್ರಾಫಿಕ್ ಜಾಮ್

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಮಂಗಳೂರು - ಬೆಂಗಳೂರು ರಸ್ತೆಯ ಮಧ್ಯೆ ಮಾಣಿಯಲ್ಲಿ ಇಂದು ಮಧ್ಯಾಹ್ನ ವೇಳೆ ಸುಮಾರು ತಾಸುಗಳ ಕಾಲ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿರುವ ಘಟನೆ ನಡೆದಿದ್ದು, ಪ್ರಯಾಣಿಕರು ತೊಂದರೆಯಲ್ಲಿ ಸಿಲುಕಿದ...