Monday, January 26, 2026

ಪಡುಕೆರೆ ಬೀಚ್‌ಗೆ ಪ್ರವಾಸಿಗರ ಪ್ರವೇಶ ನಿಷೇಧ : ಸ್ಥಳೀಯರಿಂದ ಎಚ್ಚರಿಕೆಯ ಸಂದೇಶ

ಉಡುಪಿ: ಇನ್ಮುಂದೆ ಉಡುಪಿ ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣ ಪಡುಕೆರೆ ಬೀಚ್ ಗೆ ಪ್ರವಾಸಿಗರ ಪ್ರವೇಶವನ್ನು ಕಡಾಯವಾಗಿ ನಿಷೇಧಿಸಲಾಗಿದೆ ಎಂಬ ಬೋರ್ಡ್ ಹಾಕಲಾಗಿದೆ.

ಸರ್ವ ಸಂಸ್ಥೆಗಳ ಒಕ್ಕೂಟ ಪಡುಕೆರೆ ವತಿಯಿಂದ ಈ ಬೋರ್ಡ್ ಗಳನ್ನು ಹಾಕಲಾಗಿದ್ದು, ಮಟ್ಟುವಿನಿಂದ ಶಾಂತಿನಗರದವರೆಗೆ ರಾತ್ರಿ ಗಂಟೆ 8 ರಿಂದ ಬೆಳಿಗ್ಗೆ 6 ರ ತನಕ ಯಾವುದೇ ಪ್ರವಾಸಿಗರು ಊರಿನಲ್ಲಿ ತಿರುಗಾಡುವುದು, ಬೀಚ್ ನಲ್ಲಿ ಕೂರೂವುದು ಕಡಾಯವಾಗಿ ನಿಷೇಧಿಸಲಾಗಿದೆ ಎಂದು ಬೋರ್ಡ್ ನಲ್ಲಿ ಬರೆಯಲಾಗಿದೆ. ಮಾತ್ರವಲ್ಲದೇ ಈ ನಿಯಮವನ್ನು ಉಲ್ಲಂಘಿಸಿದ್ದಲ್ಲಿ ಮುಂದಾಗುವ ಯಾವುದೇ ಪ್ರತಿಕ್ರಿಯೆಗಳಿಗೆ ಊರಿನವರು ಹೊಣೆಯಾಗಿರುವುದಿಲ್ಲ ಎಂಬ ಎಚ್ಚರಿಕೆಯನ್ನೂ ಬರೆಯಲಾಗಿದೆ.

ಎರಡು ವರ್ಷದ ಹಿಂದೆ ಪಡುಕೆರೆ ಸಮುದ್ರ ತೀರದಲ್ಲಿ ಬಯೊಲುಮಿನೆಸೆನ್ಸ್ ಪರಿಣಾದಿಂದಾಗಿ ರಾತ್ರಿ ಸಮಯದಲ್ಲಿ ಸಮುದ್ರ ನೀಲಿಯಾಗಿ ಗೋಚರಿಸುತ್ತಿತ್ತು. ಇದನ್ನು ವೀಕ್ಷಿಸಲು ನೂರಾರು ಮಂದಿ ಪ್ರವಾಸಿಗರು ರಾತ್ರಿ ಸಮಯದಲ್ಲಿ ಆಗಮಿಸುತಿದ್ದರು. ಇದಾದ ಬಳಿಕ ಪಡುಕೆರೆಗೆ ಬರುವ ಪ್ರವಾಸಿಗಳ ಸಂಖ್ಯೆ ಹೆಚ್ಚಾಗಿದ್ದು, ರಾತ್ರಿ ಸಮಯದಲ್ಲಿ ಯುವಕ ಯುವತಿಯರು ಮದ್ಯಪಾನ, ಮತ್ತು ಇನ್ನಿತರ ಅನೈತಿಕ ಚಟುವಟಿಕೆಗಳಲ್ಲಿ ನಿರತರಾಗಿರುವುದು ಕಂಡು ಬಂದಿತ್ತು.

ಇನ್ನು ಪಡುಕೆರೆಯ ಹಲವು ಭಾಗಗಳಲ್ಲಿ ಇಂತಹ ಬೋರ್ಡ್ ಗಳು ಕಂಡು ಬಂದಿದ್ದು, ಪಡುಕೆರೆಯ ಸಾಂಸ್ಕ್ರತಿಕ ಪರಂಪರೆಯನ್ನು ಉಳಿಸುವ ದೃಷ್ಟಿಯಿಂದ ಈ ನಿರ್ಣಯವನ್ನು ಸ್ವೀಕರಿಸಲಾಗಿದೆ ಎಂದು ಬರೆಯಲಾಗಿದೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...