Saturday, July 5, 2025

ಅಕ್ರಮ ಗಣಿಗಾರಿಕೆ : ಆರೋಪಿಗಳ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು..

ಬಂಟ್ವಾಳ : ಪುರಸಭಾ ವ್ಯಾಪ್ತಿಯ ಬಿ.ಮೂಡ ಗ್ರಾಮದ ಪಲ್ಲಮಜಲು ಸಮೀಪದ ಕುವಡ್ಕ ಎಂಬಲ್ಲಿ ಅಕ್ರಮವಾಗಿ ಗಣಿಗಾರಿಕೆ ಮಾಡುತ್ತಿದ್ದು,ಆರೋಪಿಗಳ ಬಗ್ಗೆ ಪ್ರಕರಣ ದಾಖಲಿಸುವಂತೆ ಗಣಿ ಇಲಾಖೆಯ ಅಧಿಕಾರಿಗಳು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮಂಗಳೂರು ಹಿರಿಯ ಭೂವಿಜ್ಞಾನಿಯವರ ಕಚೇರಿಯ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಸಂದೀಪ್ ಜಿ.ಯು.ಅವರು ಬಿ.ಮೂಡ ಗ್ರಾಮದ ಕುವಡ್ಕ ನಿವಾಸಿಗಳಾದ ಜೋಸೆಫ್ ಡಿ.ಕುನ್ಹ ಹಾಗೂ ಮರ್ವಿನ್ ಗೋವಿಯಸ್ ಅವರ ವಿರುದ್ದ ದೂರು ನೀಡಿದ್ದಾರೆ.

ಬಿ.ಮೂಡ ಗ್ರಾಮದ ಪಲ್ಲಮಜಲು ಎಂಬಲ್ಲಿ ನಡೆಯುತ್ತಿರುವ ಕಪ್ಪ ಕಲ್ಲು ಗಣಿಗಾರಿಕೆ ವಿರುದ್ದ ಗ್ರಾಮಸ್ಥರು ಆಕ್ರಮ ಎಂದು ಆರೋಪಿಸಿ ತಹಶಿಲ್ದಾರ್ ಹಾಗೂ ಜಿಲ್ಲಾಧಿಕಾರಿ ಹಾಗೂ ಗಣಿ ಇಲಾಖೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಅಧಿಕಾರಿಗಳು ತನಿಖೆ ನಡೆಸಿದಾಗ ಇವರ ಅಕ್ರಮ ಬಯಲಾಗಿದೆ. ಅನುಮತಿ ಪಡೆದ ಸ್ಥಳದಲ್ಲಿ ಹೊರತುಪಡಿಸಿ,ಇತರೆ ಜಾಗದಲ್ಲಿ ಅತಿಕ್ರಮಿಸಿ ಕಲ್ಲು ಗಣಿಗಾರಿಕೆ ನಡೆಸಿದ ಬಗ್ಗೆ ಕಂಡು ಬಂದಿದ್ದು, ಇದೀಗ ಗಣಿಗಾರಿಕೆ ನಡೆಸುವವರ ಮೇಲೆ ಕ್ರಮ ಕೈಗೊಳ್ಳುವಂತೆ ನಗರ ಪೋಲೀಸರಿಗೆ ದೂರು ನೀಡಿದ್ದಾರೆ.

ಅಕ್ರಮ ಗಣಿಗಾರಿಕೆಯಿಂದ ಸ್ಥಳೀಯ ಅನೇಕ ಮನೆಗಳ ಗೋಡೆಗಳಿಗೆ ಹಾನಿಯಾಗಿದೆ ಎಂದು ಆರೋಪಿಸಿದ್ದಲ್ಲದೆ, ಘನ ಗಾತ್ರದ ವಾಹನಗಳ ಬೇಜವಾಬ್ದಾರಿತನದ ಸಂಚಾರ ಜೀವಕ್ಕೆ ಅಪಾಯಕಾರಿಯಾಗಿದೆ ಎಂದು ಆರೋಪಿಸಿದ್ದರು, ಅಲ್ಲದೆ ನ್ಯಾಯ ಒದಗಿಸಿಕೊಡುವಂತೆ ಅಧಿಕಾರಿಗಳಲ್ಲಿ ಮನವಿ ಮಾಡಿದ್ದರು.

ಇದೀಗ ಅತಿಕ್ರಮಣ ಮಾಡಿ ಅಕ್ರಮ ಗಣಿಗಾರಿಕೆ ಮಾಡಿದ ಆರೋಪದ ಮೇಲೆ ಮಾಲಕರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ನಗರ ಠಾಣಾ ಪೋಲೀಸರು ಮಾಹಿತಿ ನೀಡಿದ್ದಾರೆ.

More from the blog

ಆರ್.ಎಸ್.ಎಸ್. ನಿಷೇದ ಬಗೆಗಿನ ಸಚಿವರ ಬೇಜವಾಬ್ದಾರಿ ಹೇಳಿಕೆ ಖಂಡನೀಯ : ಪ್ರಭಾಕರ ಪ್ರಭು

ಬಂಟ್ವಾಳ : ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗ ಆರ್. ಎಸ್ ಎಸ್. ನಿಷೇಧಿಸುವ ತೀರ್ಮಾನ ಮಾಡುತ್ತೇವೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ನೀಡಿರುವ ದುರಹಂಕಾರದ,...

Bantwal Rain Damage: ಅನೇಕ ಮನೆಗಳಿಗೆ ಹಾನಿ

ಬಂಟ್ವಾಳ: ಜುಲೈ 3 ರಂದು ರಾತ್ರಿ ಸುರಿದ ಮಳೆಗೆ ತಾಲೂಕಿನ ಅನೇಕ ಕಡೆಗಳಲ್ಲಿ ಹಾನಿ ಸಂಭವಿಸಿದ್ದು, ಲಕ್ಷಾಂತರ ರೂ‌ ನಷ್ಟ ಸಂಭವಿಸಿದೆ. ನೆಟ್ಲ ಮುನ್ನೂರು ಗ್ರಾ.ಪಂ.ವ್ಯಾಪ್ತಿಯ ಏಮಾಜೆ ಭಜನಾ ಮಂದಿರ ಬಳಿಯ ದೇವಪ್ಪ...

Rural station: ಮೇಯಲು ಬಿಟ್ಟ ಕರುಗಳ ಕಳವು, ಸಿ.ಸಿ.ಟಿ.ವಿಯಲ್ಲಿ ದೃಶ್ಯ ಸೆರೆ

ಬಂಟ್ವಾಳ: ಮೇಯಲು ಹೋಗಿದ್ದ ಕರುಗಳು ನಾಪತ್ತೆ, ಕರುಗಳನ್ನು ಕಾರಿನಲ್ಲಿ ತುಂಬಿಸಿಕೊಂಡು ಕದ್ದುಕೊಂಡುವ ಹೋಗುವ ದೃಶ್ಯ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿರುವುದು,ಮಾಲೀಕರಿಗೆ ದೊರಕಿದ್ದು, ಇದೀಗ ಕರುಗಳನ್ನು ಪತ್ತೆ ಮಾಡಿಕೊಡಿ ಎಂದು ಬಂಟ್ವಾಳ ಗ್ರಾಮಾಂತರ ಪೋಲೀಸರಿಗೆ ದೂರು ನೀಡಿದ...

B. C. ROAD : ಜು.19ರಿಂದ 27ರವರೆಗೆ ಭಾರತ ದರ್ಶನ ಯಕ್ಷಗಾನ ತಾಳಮದ್ದಳೆ ನವಾಹ..

ಬಂಟ್ವಾಳ : ಬಿ.ಸಿ.ರೋಡಿನ ತುಳು ಶಿವಳ್ಳಿ ಸಭಾಭವನದಲ್ಲಿ ವಿಶ್ವಭಾರತಿ ಯಕ್ಷ ಸಂಜೀವಿನಿ ಟ್ರಸ್ಟ್ ಮುಡಿಪು ಅವರಿಂದ ತುಳು ಶಿವಳ್ಳಿ ಸೇವಾ ಟ್ರಸ್ಟ್ ಬಂಟ್ವಾಳ ತಾಲೂಕು ಸಹಭಾಗಿತ್ವದಲ್ಲಿ ಭಾರತ ದರ್ಶನ ಎಂಬ ಯಕ್ಷಗಾನ ತಾಳಮದ್ದಳೆ...