Thursday, February 13, 2025

ಮಾ.19-20: ಬಸವನಗುಡಿ ಪಂಚಕಟ್ಟೆ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ 30ನೇ ವರ್ಷದ ಪ್ರತಿಷ್ಠಾ ವರ್ಧಂತಿ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

ಪುಂಜಾಲಕಟ್ಟೆ ಬಸವನಗುಡಿ ಪಂಚಕಟ್ಟೆ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಪಾಂಗಲ್ಪಾಡಿ ಉದಯ ಪಾಂಗಣ್ಣಾಯ ತಂತ್ರಿಯವರ ನೇತೃತ್ವದಲ್ಲಿ 30ನೇ ವರ್ಷದ ಪ್ರತಿಷ್ಠಾ ವರ್ಧಂತಿ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ ಮಾ.19 ರಿಂದ ಮಾ.20 ರವರೆಗೆ ನಡೆಯಲಿದೆ.

 

ಮಾರ್ಚ್ 19 ರಂದು ಮಂಗಳವಾರ ಪೂರ್ವಾಹ್ನ 9 ಗಂಟೆಗೆ ಉಗ್ರಾಣ ಮುಹೂರ್ತ, ಗೊನೆ ಕಡಿಯುವುದು, ಸಂಜೆ ಗಂಟೆ 6.30ಕ್ಕೆ : ದೇವತಾ ಪ್ರಾರ್ಥನೆ, ಪುಣ್ಯಾಹವಾಚನ, ರಾಕ್ಷೋಘ್ನಹೋಮ, ವಾಸ್ತುಪೂಜೆ, ವಾಸ್ತುಬಲಿ ಪ್ರಸನ್ನ ಪೂಜೆ ನಡೆಯಲಿದೆ.

ಮಾರ್ಚ್ 20ರಂದು ಬುಧವಾರ ಬೆಳಿಗ್ಗೆ: ಗಣಹೋಮ, ಏಕದಶರುದ್ರಾಭಿಷೇಕ, ನವಕಲಶ ಪ್ರಧಾನಹೋಮ, ಆಶ್ಲೇಷ ಬಲಿ. ಮಧ್ಯಾಹ್ನ: ಮಹಾಪೂಜೆ, ಪ್ರಸಾದ ವಿತರಣೆ, ದಾನಿಗಳಿಂದ ಅನ್ನಸಂತರ್ಪಣೆ. ರಾತ್ರಿ : ಶ್ರೀ ವ್ಯಾಘ್ರಚಾಮುಂಡಿ ದೈವದ ಭಂಡಾರವು ಬೈಲೊರ್ದುಗುತ್ತು ಭಂಡಾರದ ಕೊಟ್ಯದಿಂದ, ಪರಿವಾರ ದೈವಗಳ ಭಂಡಾರವು ಕೊಯಕ್ಕೂರಿ ಗುತ್ತಿನಿಂದ ಆಗಮನ. ರಾತ್ರಿ ಗಂಟೆ 8.30ಕ್ಕೆ : ರಂಗಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಬಳಿಕ ಅನ್ನಸಂತರ್ಪಣೆ ಜರಗಲಿರುವುದು.

ರಾತ್ರಿ ಗಂಟೆ 9.00ಕ್ಕೆ : ಶ್ರೀ ವ್ಯಾಘ್ರ ಚಾಮುಂಡಿ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ ಜರಗಲಿರುವುದು. ಬಳಿಕ ದೈವಗಳ ಗಂಧ ಪ್ರಸಾದ ನೀಡಲಾಗುವುದು.

ಮಾರ್ಚ್ 21 ರಂದು ಗುರುವಾರ ಸಂಪ್ರೋಕ್ಷಣೆ, ಕಲಶ, ಮಹಾಮಂಗಳಾರತಿ, ಮಂತ್ರಾಕ್ಷತೆಯೊಂದಿಗೆ ಮಂಗಳ ಜರಗಲಿರುವುದು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...