Tuesday, January 27, 2026

ಮಾ.19-20: ಬಸವನಗುಡಿ ಪಂಚಕಟ್ಟೆ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ 30ನೇ ವರ್ಷದ ಪ್ರತಿಷ್ಠಾ ವರ್ಧಂತಿ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

ಪುಂಜಾಲಕಟ್ಟೆ ಬಸವನಗುಡಿ ಪಂಚಕಟ್ಟೆ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಪಾಂಗಲ್ಪಾಡಿ ಉದಯ ಪಾಂಗಣ್ಣಾಯ ತಂತ್ರಿಯವರ ನೇತೃತ್ವದಲ್ಲಿ 30ನೇ ವರ್ಷದ ಪ್ರತಿಷ್ಠಾ ವರ್ಧಂತಿ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ ಮಾ.19 ರಿಂದ ಮಾ.20 ರವರೆಗೆ ನಡೆಯಲಿದೆ.

 

ಮಾರ್ಚ್ 19 ರಂದು ಮಂಗಳವಾರ ಪೂರ್ವಾಹ್ನ 9 ಗಂಟೆಗೆ ಉಗ್ರಾಣ ಮುಹೂರ್ತ, ಗೊನೆ ಕಡಿಯುವುದು, ಸಂಜೆ ಗಂಟೆ 6.30ಕ್ಕೆ : ದೇವತಾ ಪ್ರಾರ್ಥನೆ, ಪುಣ್ಯಾಹವಾಚನ, ರಾಕ್ಷೋಘ್ನಹೋಮ, ವಾಸ್ತುಪೂಜೆ, ವಾಸ್ತುಬಲಿ ಪ್ರಸನ್ನ ಪೂಜೆ ನಡೆಯಲಿದೆ.

ಮಾರ್ಚ್ 20ರಂದು ಬುಧವಾರ ಬೆಳಿಗ್ಗೆ: ಗಣಹೋಮ, ಏಕದಶರುದ್ರಾಭಿಷೇಕ, ನವಕಲಶ ಪ್ರಧಾನಹೋಮ, ಆಶ್ಲೇಷ ಬಲಿ. ಮಧ್ಯಾಹ್ನ: ಮಹಾಪೂಜೆ, ಪ್ರಸಾದ ವಿತರಣೆ, ದಾನಿಗಳಿಂದ ಅನ್ನಸಂತರ್ಪಣೆ. ರಾತ್ರಿ : ಶ್ರೀ ವ್ಯಾಘ್ರಚಾಮುಂಡಿ ದೈವದ ಭಂಡಾರವು ಬೈಲೊರ್ದುಗುತ್ತು ಭಂಡಾರದ ಕೊಟ್ಯದಿಂದ, ಪರಿವಾರ ದೈವಗಳ ಭಂಡಾರವು ಕೊಯಕ್ಕೂರಿ ಗುತ್ತಿನಿಂದ ಆಗಮನ. ರಾತ್ರಿ ಗಂಟೆ 8.30ಕ್ಕೆ : ರಂಗಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಬಳಿಕ ಅನ್ನಸಂತರ್ಪಣೆ ಜರಗಲಿರುವುದು.

ರಾತ್ರಿ ಗಂಟೆ 9.00ಕ್ಕೆ : ಶ್ರೀ ವ್ಯಾಘ್ರ ಚಾಮುಂಡಿ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ ಜರಗಲಿರುವುದು. ಬಳಿಕ ದೈವಗಳ ಗಂಧ ಪ್ರಸಾದ ನೀಡಲಾಗುವುದು.

ಮಾರ್ಚ್ 21 ರಂದು ಗುರುವಾರ ಸಂಪ್ರೋಕ್ಷಣೆ, ಕಲಶ, ಮಹಾಮಂಗಳಾರತಿ, ಮಂತ್ರಾಕ್ಷತೆಯೊಂದಿಗೆ ಮಂಗಳ ಜರಗಲಿರುವುದು.

More from the blog

Bantwal : ರಥಸಪ್ತಮಿಯ ಪ್ರಯುಕ್ತ 108 ಸೂರ್ಯ ನಮಸ್ಕಾರ ಕಾರ್ಯಕ್ರಮ

ಬಂಟ್ವಾಳ : ಸಂಸ್ಕಾರ ಸಂಘಟನೆ ಸೇವೆಯ ಧ್ಯೇಯ ಉದ್ದೇಶಗಳನ್ನು ಹೊಂದಿರುವ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ( ರಿ) ಕರ್ನಾಟಕ ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಮಂಗಳೂರು, ಬಂಟ್ವಾಳ ತಾಲೂಕು ವತಿಯಿಂದ ಜ....

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ಬಲಿಷ್ಠ ಭಾರತದ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿ : ತಹಶೀಲ್ದಾರ್ ಜಿ. ಮಂಜುನಾಥ್

ಬಂಟ್ವಾಳ : ಬಲಿಷ್ಠ ಭಾರತದ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಎಲ್ಲರನ್ನು ಒಳಗೊಂಡ ಸಮೃದ್ಧ ಭಾರತವನ್ನು ಸಂವಿಧಾನದ ಶಕ್ತಿಯಜೊತೆ ನಿರ್ಮಿಸೋಣ ಎಂದು ತಾಲೂಕು ದಂಡಾಧಿಕಾರಿ ಹಾಗೂ ತಹಶೀಲ್ದಾರ್ ಜಿ ಮಂಜುನಾಥ್ ಹೇಳಿದರು. ಬಂಟ್ವಾಳ ತಾಲೂಕು ರಾಷ್ಟ್ರೀಯ...

ಪುದು ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ..

ಬಂಟ್ವಾಳ : ಬಂಟ್ವಾಳ ತಾಲೂಕಿನ ದ. ಕ. ಜಿ. ಪಂ. ಮಾ. ಹಿ. ಪ್ರಾ. ಶಾಲೆ ಪುದು ಇಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ರಮ್ಲಾನ್ ಅವರು ಧ್ವಜಾರೋಹಣ...