Wednesday, February 12, 2025

ಪಂಚಾಯತ್ ಮಿಲನ ಕಾರ್ಯಕ್ರಮ

ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಪ್ರತಿಯೊಂದು ಅಭಿವೃದ್ದಿ ವಿಷಯಕ್ಕೂ ವಿಶೇಷ ಗಮನ ನೀಡಿ ಶಕ್ತಿಮೀರಿ ಜನರ ಸೇವೆ ಮಾಡಿದರೂ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಒಂದು ರೀತಿಯಲ್ಲಿ ವಿರೋಚಿತ ಸೋಲುಂಟಾಗಿರುವುದು ಅತ್ಯಂತ ವಿಷಾದನೀಯ. ಚುನಾವಣೆಯಲ್ಲಿ ಸೋಲು-ಗೆಲುವು ಸಾಮಾನ್ಯವಾಗಿದ್ದು, ಸೋಲನ್ನು ಸವಾಲಾಗಿ ಸ್ವೀಕರಿಸಿ ಮತ್ತೆ ಪಕ್ಷ ಗತ ವೈಭವಕ್ಕೆ ಮರಳುವಂತೆ ಮಾಡಲು ಕಾರ್ಯಕರ್ತರು ಶಕ್ತಿ ಮೀರಿ ಶ್ರಮಿಸಬೇಕಾಗಿದೆ ಎಂದು ಮಾಜಿ ಸಚಿವ ಬಿ ರಮಾನಾಥ ರೈ ಕರೆ ನೀಡಿದರು.


ಕಂದೂರು ಗೌರಿ ಗಣೇಶ್ ಸಭಾಭವನದಲ್ಲಿ ಮಂಗಳವಾರ ನಡೆದ ಸಜಿಪಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟ ಚುನಾಯಿತ ಜನಪ್ರತಿನಿಧಿಗಳ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಪಂಚಾಯತ್ ಮಿಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ, ಜಿ ಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ತಾ ಪಂ ಉಪಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಸದಸ್ಯೆ ನಸೀಮಾ ಬೇಗಂ, ಸಜಿಪಮುನ್ನೂರು ಗ್ರಾ ಪಂ ಅಧ್ಯಕ್ಷ ಮುಹಮ್ಮದ್ ಶರೀಫ್, ಪ್ರಮುಖರಾದ ಪರಮೇಶ್ವರ ಎಂ., ಶರೀಫ್ ಆಲಾಡಿ, ಹರೀಶ್ ಗಟ್ಟಿ ಮಾರ್ನಬೈಲು, ಎನ್. ದೇವರಾಯರ್ ಬೊಕ್ಕಸ, ಬಶೀರ್ ನಂದಾವರ, ಆರಿಫ್ ನಂದಾವರ, ಅಝೀಝ್ ಕೊಪ್ಪಳ, ಧನಂಜಯ ಶೆಟ್ಟಿ ಪರಾರಿ, ಇಕ್ಬಾಲ್ ಮಲಾಯಿಬೆಟ್ಟು, ಹೇಮಾವತಿ, ಜನಾರ್ದನ ಮಾರ್ನಬೈಲು, ಫಾತಿಮಾ ಝೊಹರಾ, ಕರೀಂ ನಂದಾವರ, ಇಬ್ರಾಹಿಂ ಮಲಾಯಿಬೆಟ್ಟು, ಬದ್ರುದ್ದೀನ್ ಮುನ್ನೂರು ಮೊದಲಾದವರು ಭಾಗವಹಿಸಿದ್ದರು.
ಪಕ್ಷದ ಮುಂಚೂಣಿ ಘಟಕ ಪದಾಧಿಕಾರಿಗಳು, ಬೂತ್ ಅಧ್ಯಕ್ಷರುಗಳು, ಬಿಎಲ್‌ಒಗಳು ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.
ಸಜಿಪಮುನ್ನೂರು ಗ್ರಾ ಪಂ ಸದಸ್ಯರಾದ ಯೂಸುಪ್ ಕರಂದಾಡಿ ಸ್ವಾಗತಿಸಿ, ಅಹ್ಮದ್ ಕಬೀರ್ ಆಲಾಡಿ ವಂದಿಸಿದರು.
ವಲಯಾಧ್ಯಕ್ಷರಾಗಿ ಯೂಸುಫ್ ಕರಂದಾಡಿ ಮರು ಆಯ್ಕೆ
ಇದೇ ವೇಳೆ ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಸಜಿಪಮುನ್ನೂರು ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಗ್ರಾ ಪಂ ಸದಸ್ಯ ಯೂಸುಫ್ ಕರಂದಾಡಿ ಅವರನ್ನು ಮುಂದಿನ ಅವಧಿಗೆ ಮತ್ತೆ ಸರ್ವಾನುಮತದಿಂದ ಮರು ಆಯ್ಕೆಗೊಳಿಸಲಾಯಿತು.

More from the blog

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...