Monday, January 26, 2026

ವಿರೋಧ ಪಕ್ಷದವರ ಅಪಪ್ರಾಚಾರಕ್ಕೆ ಪ್ರತ್ಯುತ್ತರ ನೀಡುವಂತೆ ರೈ’ ಕರೆ

ಪಂಜಿಕಲ್ಲು ಗ್ರಾಮ ಪಂಚಾಯತ್ ವಲಯದ ಪಂಚಾಯತ್ ಮಿಲನ 2019 ಕಾರ್ಯಕ್ರಮ ಆಚಾರಿ ಪಲ್ಕೆ ಜಂಕ್ಷನ್‌ನಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕರ್ತರು ಪಕ್ಷದ ಘಣತೆಯನ್ನು ಕಾಪಾಡುವ ಮುಖಾಂತರ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು. ವಿರೋಧ ಪಕ್ಷದವರ ಅಪಪ್ರಚಾರಕ್ಕೆ ಪ್ರತ್ಯುತ್ತರ ನೀಡುವ ಮುಖಾಂತರ ಜವಾಬ್ದಾರಿಯುತವಾಗಿ ಕಾರ್ಯಗತಗೊಳ್ಳುವಂತೆ ಆದೇಶಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಕಾರ್ಯಕರ್ತರಿಂದ ಸಲಹೆ ಸೂಚನೆಗಳನ್ನು ಸ್ವೀಕರಿಸಿ ಪಕ್ಷದಲ್ಲಿ ಶಿಸ್ತಿಗೆ ಹೆಚ್ಚು ಪ್ರಾಮುಖ್ಯತೆಯನ್ನು ಕೊಟ್ಟು ಒಗ್ಗಟ್ಟಿನಿಂದ ಪಕ್ಷದ ಬಲವರ್ಧನೆಗೆ ಒತ್ತು ನೀಡುವಂತೆ ಕರೆಯಿತ್ತರು. ಕಾರ್ಯಕರ್ತರು ತಮ್ಮ ವೈಯ್ಯಕ್ತಿಕ ವರ್ಚ್ಚಸ್ಸನ್ನು ವೃಧ್ದಿಸುವ ಮುಖಾಂತರ ಪಕ್ಷಕ್ಕೆ ಶಕ್ತಿ ನೀಡುವಂತೆ ವಿನಂತಿಸಿದರು. ವಲಯ ಹಾಗೂ ಬೂತ್ ಸಮಿತಿಯನ್ನು ಪುನರ್‌ರಚಿಸಿ ಪಂಚಾಯತ್ ಸಮಿತಿ ಅಧ್ಯಕ್ಷರನ್ನಾಗಿ ಸದಾನಂದ ಶೆಟ್ಟಿ ಯವರನ್ನು ಆಯ್ಕೆ ಮಾಡಲಾಯಿತು. ವಲಯ ಪ್ರದಾನ ಕಾರ್ಯದರ್ಶಿಯಾಗಿ ದೇವಪ್ಪ ಕುಲಾಲ್, ಬೂತ್ ಸಮಿತಿ ಅಧ್ಯಕ್ಷರಾಗಿ ಲೋಕಯ್ಯ ಪೂಜಾರಿ, ನೇಮಿರಾಜ್ ಕಡಂಬ, ರವಿ ಪೂಜಾರಿ, ವಿಕ್ಟರ್ ಪಾಯ್ಸ್, ಸುರೇಶ್ ಜೊರಾ, ಹಾಗೂ ವಲಯ ಯುವಕಾಂಗ್ರೆಸ್ ಅಧ್ಯಕ್ಷರಾಗಿ ಸಂತೋಷ್ ಪೂಜಾರಿ, ಮಹಿಳಾ ಅಧ್ಯಕ್ಷರಾಗಿ ವಸಂತಿ ಕುಲಾಲ್ ಇವರನ್ನು ಆಯ್ಕೆ ಮಾಡಲಾಯಿತು. ಜಿಲ್ಲಾ ಪಂಚಾಯತ್ ಸದ್ಯಸರಾದ ಚಂದ್ರಪ್ರಕಾಶ್ ಶೆಟ್ಟಿ, ಭೂ ಅಬಿವೃಧ್ದಿ ಬ್ಯಾಂಕ್ ಅಧ್ಯಕ್ಷರಾದ ಸುದರ್ಶನ್ ಜೈನ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಜಗದೀಶ್ ಕೊಯಿಲ, ಮಾಜಿ ಅಕ್ರಮ ಸಕ್ರಮ ಅಧ್ಯಕ್ಷರಾದ ಮಾಯಿಲಪ್ಪ ಸಾಲ್ಯನ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕುಲಾಲ್, ಮುಖಂಡರಾದ ಅಶೋಕ್ ಮೈರನ್‌ಪಾದೆ, ಪಂಚಾಯತ್ ಸಧ್ಯಸರಾದ ವಿಶ್ವನಾಥ ಶೆಟ್ಟಿ, ಜಯಶ್ರೀ, ಪಕ್ಷದ ಮುಖಂಡರು ಹಾಗೂ ಅಧಿಕ ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿಧ್ದರು. ದೇವಪ್ಪ ಕುಲಾಲ್ ಸ್ವಾಗತಿಸಿ ರಾಜೇಶ್ ಗೌಡ ಧನ್ಯವಾದವಿತ್ತರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...