Thursday, February 13, 2025

ಮಾ.3-12: ಪಾಣೆಮಂಗಳೂರು ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದ ಶ್ರೀಗಣಪತಿ, ಶ್ರೀ ದುರ್ಗಾ ಸಾನಿಧ್ಯಗಳ ಪುನಃಪ್ರತಿಷ್ಠೆ, ಭಯಂಕೇಶ್ವರ ಸದಾಶಿವ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಜಾತ್ರಾ ಮಹೋತ್ಸವ

ಬಂಟ್ವಾಳ: ಪಾಣೆಮಂಗಳೂರು ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದ ಶ್ರೀಗಣಪತಿ, ಶ್ರೀ ದುರ್ಗಾ ಸಾನಿಧ್ಯಗಳ ಪುನಃಪ್ರತಿಷ್ಠೆಯೊಂದಿಗೆ ಭಯಂಕೇಶ್ವರ ಸದಾಶಿವ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಜಾತ್ರಾ ಮಹೋತ್ಸವ ಮಾ.3ರಿಂದ ಮೊದಲ್ಗೊಂಡು ಮಾ.12ರವರೆಗೆ ನಡೆಯಲಿದೆ ಎಂದು ವ್ಯವಸ್ಥಾಪನಾ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ.ರಘುನಾಥ ಸೋಮಯಾಜಿ ಎರಕಳ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರ್ಮಿಕ ಪ್ರಕ್ರಿಯೆಗಳು ಆರಂಭಗೊಂಡಿದ್ದು, ಮಾ.5ರಂದು ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ದೊಂಪದಬಲಿ ಶ್ರೀ ನಾಲ್ಕೈತ್ತಾಯ ದೈವಸ್ಥಾನದಿಂದ ಹೊರೆಕಾಣಿಕೆ ಮೆರವಣಿಗೆ ಮಧ್ಯಾಹ್ನ 2.30ಕ್ಕೆ ಆರಂಭಗೊಳ್ಳುತ್ತದೆ ಎಂದರು. ಮಾ.7ರಂದು ಬಿಂಬಪ್ರತಿಷ್ಠೆ, ಮಾ.8ರಂದು ಬೆಳಗ್ಗೆ ಬ್ರಹ್ಮಕಲಶಾಬಿಷೇಕ ನಡೆಯುವುದು. ಬಳಿಕ ಜಾತ್ರೋತ್ಸವಗಳು ಆರಂಭಗೊಂಡು, ಮಾ.12ರವರೆಗೆ ನಡೆಯಲಿದೆ. ಪ್ರತಿದಿನ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ನೃತ್ಯಭಜನೆಯೂ ಇರಲಿದೆ ಎಂದರು.

ಮಾ.5ರಂದು ನರಿಕೊಂಬು ಗ್ರಾಮದ ಗುತ್ತಿನ ನಾಲ್ಕು ಮನೆಯವರಿಂದ ದೀಪ ಪ್ರಜ್ವಲನೆಯೊಂದಿಗೆ ಉಗ್ರಾಣ ಮುಹೂರ್ತ ನೆರವೇರಲಿದೆ, ಬಳಿಕ ಶ್ರೀಧಾಮ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿಯವರ ದೀಪ ಪ್ರಜ್ವಲನೆಯೊಂದಿಗೆ ಹೊರೆಕಾಣಿಕೆ ಮೆರವಣಿಗೆ ದೊಂಪದಬಳಿಯ ನಾಲ್ಕೈತ್ತಾಯ ದೈವಸ್ಥಾನದಿಂದ ಆರಂಭಗೊಂಡು, ಮೊಗರ್ನಾಡಿನ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನ, ಕುರ್ಚಿಪಲ್ಲ, ಸತ್ಯದೇವತೆ ಕಲ್ಲುರ್ಟಿ ದೇವಸ್ಥಾನ, ಪಾಣೆಮಂಗಳೂರು ವೀರವಿಠಲ ದೇವಸ್ಥಾನದತ್ತ ಸಾಗಿ ಶ್ರೀ ಭಯಂಕೇಶ್ವರ ದೇವಸ್ಥಾನ ತಲುಪಲಿದೆ ಎಂದರು.

ಜಾತ್ರೋತ್ಸವದ ಪ್ರತಿದಿನವೂ ಮಧ್ಯಾಹ್ನ ರಾತ್ರಿ ಊಟೋಪಚಾರ ಸಹಿತ ಉಪಾಹಾರದ ವ್ಯವಸ್ಥೆ ಮಾಡಲಾಗಿದೆ. ಈ ಸಂದರ್ಭ ಪ್ರತಿದಿನ ಭಗವದ್ಗೀತಾ ಪ್ರವಚನವೂ ಇರಲಿದೆ ಎಂದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ರಘುನಾಥ ಸೋಮಯಾಜಿ, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಡಾ. ಎಂ.ಮೋಹನ ಆಳ್ವ, ಅಧ್ಯಕ್ಷರಾಗಿ ಜಗನ್ನಾಥ ಬಂಗೇರ, ಕಾರ್ಯಾಧ್ಯಕ್ಷರಾಗಿ ಜಗನ್ನಾಥ ಚೌಟ ಬದಿಗುಡ್ಡೆ ನೇತೃತ್ವದಲ್ಲಿ ವಿವಿಧ ಸಮಿತಿ ಕಾರ್ಯಾಚರಿಸುತ್ತಿವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳು ಮಾಹಿತಿ ನೀಡಿದರು. ಪ್ರಮುಖರಾದ ಪ್ರಕಾಶ್ ಕಾರಂತ ನರಿಕೊಂಬು, ರಘು ಸಫಲ್ಯ, ಲೋಕೇಶ್ ಕೆ ನರಹರಿನಗರ, ಪದ್ಮನಾಭ ಮಯ್ಯ ಏಲಬೆ, ಬಿ.ರಾಮಚಂದ್ರ ರಾವ್, ಭುವನೇಶ್, ಚಂದ್ರಾವತಿ ರತ್ನಾಕರ ನಾಯ್ಕ್, ಗೋವಿಂದ ಪೈ, ಪುರುಷೋತ್ತಮ ಸಾಲಿಯಾನ ನರಿಕೊಂಬು, ಪ್ರೇಮನಾಥ ಶೆಟ್ಟಿ ಅಂತರ ಮತ್ತಿತರರು ಉಪಸ್ಥಿತರಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...