Tuesday, January 27, 2026

ಪಾಣೆಮಂಗಳುರು ಶ್ರೀ ಶಾರದಾ ಪ್ರೌಢ ಶಾಲೆ: 70ನೇ ಸಂವಿಧಾನ ದಿನಾಚರಣೆ

ಬಂಟ್ವಾಳ: ಪಾಣೆಮಂಗಳುರು ಶ್ರೀ ಶಾರದಾ ಪ್ರೌಢ ಶಾಲೆಯಲ್ಲಿ 70ನೇ ಸಂವಿಧಾನ ದಿನಾಚರಣೆ ಹಾಗೂ ಉಪನ್ಯಾಸ ಕಾರ್ಯಕ್ರಮ ಶನಿವಾರ ಶಾಲೆಯ ಸಭಾಂಗಣದಲ್ಲಿ ನಡೆಯಿತು.
ಚಿಂತಕ ದಮ್ಮಾನಂದ ಬೆಳ್ತಂಗಡಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಪ್ರಜಾಪ್ರಭುತ್ವವು ಸಂವಿಧಾನದ ಅಂಗವಾಗಿದೆ. ಅದನ್ನು ಉಳಿಸುವ ಕಾರ್ಯವಾಗಬೇಕಾಗಿದೆ. ದೇಶದ ಏಕತೆ, ಸಾರ್ವಭೌಮ, ಅಖಂಡತೆ ಉಳಿಯಬೇಕಾದರೆ ಸಂವಿಧಾನ ರಕ್ಷಣೆ ಅಗತ್ಯ. ಕೇವಲ ಸಂವಿಧಾನ ದಿನಾಚರಣೆಯನ್ನು ಆಚರಿಸಿದರೆ ಸಾಲದು. ಬದಲಾಗಿ ಸಂವಿಧಾನವನ್ನು ಓದಿ, ಅರ್ಥೈಸುವ ಮೂಲಕ ಅದರ ಆದರ್ಶಗಳನ್ನು ಮೈಗೂಡಿಸಿಕೊಂಡು ಪಾಲನೆ ಮಾಡಬೇಕು ಎಂದು ಸಲಹೆ ನೀಡಿದರು.
ದೇವರಿಗೆ ಮನುಷ್ಯರೆಲ್ಲರೂ ಸಮಾನರು ಎಂದು ಹೇಳುತ್ತಿರುವ ನಾವುಗಳು, ಮನುಷ್ಯ ಮನುಷ್ಯರ ನಡುವಿನ ಅಸಮಾನತೆಯನ್ನು ಉಂಟು ಮಾಡುತ್ತಿದ್ದೇವೆ ಎಂದು ವಿಷಾದಿಸಿದ ಅವರು, ಸಮಾನತೆ, ಸಾಮಾಜಿಕ ನ್ಯಾಯ, ಆರ್ಥಿಕ ನ್ಯಾಯ, ಭ್ರಾತೃತ್ವದ ಬಗ್ಗೆ ಮಾಹಿತಿ ನೀಡಿದರು.
ಪಾಣೆಮಂಗಳುರು ಶ್ರೀ ಶಾರದಾ ಪ್ರೌಢ ಶಾಲೆಯ ಸಂಚಾಲಕ ಎಂ.ಜನಾರ್ದನ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಮುಖ್ಯ ಶೀಕ್ಷಕ ಭೋಜ ಕೆ., ಹಿರಿಯ ಶಿಕ್ಷಕರಾದ ಶಿವಪ್ಪನಾಯ್ಕ, ಉಮಾ ಕಿಶೋರಿ, ಶಾಲಾ ನಾಯಕ ಹರ್ಷಿತ್ ಉಪಸ್ಥಿತರಿದ್ದರು. ಶಿಕ್ಷಕ ಧನರಾಜ್ ಡಿ.ಆರ್ ಸ್ವಾಗತಿಸಿದರು. ಶಿಕ್ಷಕ ಶಿವಪ್ಪನಾಯ್ಕ್ ವಂದಿಸಿ, ಶಿಕ್ಷಕ ಸುಧಾಕರ್ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಅತಿಥಿಗಳಾದ ದಮ್ಮಾನಂದ ಬೆಳ್ತಂಗಡಿ ಅವರು ಮಕ್ಕಳಿಗೆ ಸಂವಿಧಾನ ರಕ್ಷಣಾ ಪ್ರತಿಜ್ಞಾವಿಧಿ ಬೋಧಿಸಿದರು.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...