Thursday, February 13, 2025

ಸರಕಾರಿ ಪ್ರೌಢ ಶಾಲೆ ಪಂಜಿಕಲ್ಲಿನಲ್ಲಿ “ಬೀಜದುಂಡೆ ಬಿತ್ತನೆ ಹಾಗೂ ಗಿಡನೇಡುವ” ಕಾರ್ಯಕ್ರಮ

ಬಂಟ್ವಾಳ: ಸರಕಾರಿ ಪ್ರೌಢಶಾಲೆ ಪಂಜಿಕಲ್ಲಿನಲ್ಲಿ “ಬೀಜದುಂಡೆ ಬಿತ್ತನೆ ಹಾಗೂ ಗಿಡನೆಡುವ” ಕಾರ್ಯಕ್ರಮ ನೇರವೇರಿತು. ಅರಣ್ಯ ಇಲಾಖಾ ವಲಯ ಅರಣ್ಯ ಅಧಿಕಾರಿಯಾಗಿರುವ ಸುರೇಶ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಪರಿಸರವನ್ನು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಹಾಗೂ ಈ ಮೂಲಕ ಸರಕಾರದ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವ ಬಗ್ಗೆ ತಿಳಿಸುತ್ತಾ ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ದುರ್ಗಾಪ್ರಸಾದ್ ಕಾರ್ಯಕ್ರಮವನ್ನು ಉದ್ದೇಶಿಸಿ  ಮಾತನಾಡಿದರು. ಶಾಲಾ ಎಸ್.ಡಿ.ಎಂ.ಸಿ ಕಾರ್ಯಧ್ಯಕ್ಷರು ಆದ  ಸುದರ್ಶನ್ ಜೈನ್ ಪ್ರಕೃತಿ ಅಸಮತೋಲನವನ್ನು ತಡೆಯುವ ನಿಟ್ಟಿನಲ್ಲಿ ಶಾಲಾ ಹಂತದಲ್ಲಿಯೇ ಗಿಡಗಳನ್ನು ನೆಡುವ ಮೂಲಕ ಜಾಗೃತಿ ಮೂಡಿಸಬೇಕೆಂದು ತಿಳಿಸಿದರು. ಈ ಕಾರ್ಯಕ್ರಮವನ್ನು ಶಾಲಾ ಗಣಿತ ಶಿಕ್ಷಕಿ ಅನಿತಾ ಶೆಟ್ಟಿ ನಿರೂಪಿಸಿದರು. ವಿಧ್ಯಾರ್ಥಿನಿ ಜ್ಯೋತಿ ಸ್ವಾಗತಿಸಿದರು. ವೇದಿಕೆಯಲ್ಲಿ ಅರಣ್ಯಧಿಕಾರಿಯಾದ ಅನಿಲ್ ಹಾಗೂ ಅರಣ್ಯಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

More from the blog

ತಾತ್ಕಾಲಿಕ ರಸ್ತೆಯಿಂದ ನದಿಗೆ ಬಿದ್ದ ಟಿಪ್ಪರ್

ಕೈಕಂಬ: ಪೊಳಲಿ-ಅಡ್ಡೂರು ಪಲ್ಗುಣಿ ಸೇತುವೆಯ ದುರಸ್ಥಿ ಕಾಮಗಾರಿಯ ಹಿನ್ನಲೆಯಲ್ಲಿ‌ ನದಿಯಲ್ಲಿ ನಿರ್ಮಿಸಲಾದ ತಾತ್ಕಾಲಿಕ ರಸ್ತೆಯಿಂದ ಟಿಪ್ಪರೊಂದು ನೀರಿಗೆ ಬಿದ್ದ ಘಟನೆ ಬುಧವಾರ ಸಂಭವಿಸಿದೆ. ಪೊಳಲಿ-ಅಡ್ಡೂರು ಸೇತುವೆಯ ದುರಸ್ಥಿ ಕಾಮಗಾರಿಯು ಭರದಿಂದ ಸಾಗುತ್ತಿದ್ದು,ಈ ಹಿನ್ನಲೆಯಲ್ಲಿ ಇದಕ್ಕೆ...

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...