Sunday, July 13, 2025

ಸರಕಾರಿ ಪ್ರೌಢ ಶಾಲೆ ಪಂಜಿಕಲ್ಲಿನಲ್ಲಿ “ಬೀಜದುಂಡೆ ಬಿತ್ತನೆ ಹಾಗೂ ಗಿಡನೇಡುವ” ಕಾರ್ಯಕ್ರಮ

ಬಂಟ್ವಾಳ: ಸರಕಾರಿ ಪ್ರೌಢಶಾಲೆ ಪಂಜಿಕಲ್ಲಿನಲ್ಲಿ “ಬೀಜದುಂಡೆ ಬಿತ್ತನೆ ಹಾಗೂ ಗಿಡನೆಡುವ” ಕಾರ್ಯಕ್ರಮ ನೇರವೇರಿತು. ಅರಣ್ಯ ಇಲಾಖಾ ವಲಯ ಅರಣ್ಯ ಅಧಿಕಾರಿಯಾಗಿರುವ ಸುರೇಶ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಪರಿಸರವನ್ನು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಹಾಗೂ ಈ ಮೂಲಕ ಸರಕಾರದ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವ ಬಗ್ಗೆ ತಿಳಿಸುತ್ತಾ ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ದುರ್ಗಾಪ್ರಸಾದ್ ಕಾರ್ಯಕ್ರಮವನ್ನು ಉದ್ದೇಶಿಸಿ  ಮಾತನಾಡಿದರು. ಶಾಲಾ ಎಸ್.ಡಿ.ಎಂ.ಸಿ ಕಾರ್ಯಧ್ಯಕ್ಷರು ಆದ  ಸುದರ್ಶನ್ ಜೈನ್ ಪ್ರಕೃತಿ ಅಸಮತೋಲನವನ್ನು ತಡೆಯುವ ನಿಟ್ಟಿನಲ್ಲಿ ಶಾಲಾ ಹಂತದಲ್ಲಿಯೇ ಗಿಡಗಳನ್ನು ನೆಡುವ ಮೂಲಕ ಜಾಗೃತಿ ಮೂಡಿಸಬೇಕೆಂದು ತಿಳಿಸಿದರು. ಈ ಕಾರ್ಯಕ್ರಮವನ್ನು ಶಾಲಾ ಗಣಿತ ಶಿಕ್ಷಕಿ ಅನಿತಾ ಶೆಟ್ಟಿ ನಿರೂಪಿಸಿದರು. ವಿಧ್ಯಾರ್ಥಿನಿ ಜ್ಯೋತಿ ಸ್ವಾಗತಿಸಿದರು. ವೇದಿಕೆಯಲ್ಲಿ ಅರಣ್ಯಧಿಕಾರಿಯಾದ ಅನಿಲ್ ಹಾಗೂ ಅರಣ್ಯಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

More from the blog

ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ

ಕೈಕಂಬ: ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜು ೬ರಂದು ಭಾನುವಾರ ಪುಂಚಮೆ ಶ್ರೀ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರತಿಭಾನ್ವಿತರಾದ ಪೊಳಲಿ...

ನೆಟ್ಲಮುಡ್ನೂರು : ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಜನಜಾಗೃತಿ ಅಭಿಯಾನ..

ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಮಿತಿಯ ವತಿಯಿಂದ "ಜನಜಾಗೃತಿ ಅಭಿಯಾನ" ನೇರಳಕಟ್ಟೆಯಲ್ಲಿ ಶನಿವಾರ ಸಂಜೆ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾಜಿ ಸಚಿವ...

ಶಕ್ತಿ ಯೋಜನೆಯ ಪ್ರಯಾಣಿಕರ ಸಂಖ್ಯೆ 500 ಕೋಟಿ ದಾಟಿದೆ – ಭರತ್ ಮುಂಡೋಡಿ..

ಬಂಟ್ವಾಳ: ಬಡವರ ಉದ್ಧಾರ, ಮಹಿಳಾ ಸ್ವಾವಲಂಬನೆಯ ದೃಷ್ಟಿಯಿಂದ ರಾಜ್ಯ ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ದ.ಕ.ಜಿಲ್ಲೆಯಲ್ಲಿ ಯೋಜನೆಯಿಂದ ಹೊರಗುಳಿದ ಫಲಾನುಭವಿಗಳನ್ನು ಯೋಜನಾ ವ್ಯಾಪ್ತಿಗೆ ತರಲಾಗಿದೆ. ಪ್ರಸ್ತುತ ಶಕ್ತಿ ಯೋಜನೆಯ...

ಶ್ರದ್ಧಾ ನಿಷ್ಠೆಯಿಂದ ಸಾಧನೆ ಸಾಧ್ಯ – ಅಬ್ದುಲ್ ಮಜೀದ್ ಎಸ್

ಬಂಟ್ವಾಳ : ಸಾಧನೆ ಮಾಡಲು ಕೇವಲ ಹೆಚ್ಚಿನ ಅಂಕಗಳನ್ನು ಗಳಿಸುವುದಲ್ಲ.ಹೊರತಾಗಿ ಒಳ್ಳೆಯದಕ್ಕೆ ಅನುಸಾರವಾಗಿರುವುದು,ಗುರು ಹಿರಿಯರ ಆದರ್ಶಗಳನ್ನು ಅನುಸರಿಸುವುದು, ಗೌರವ ಕೊಟ್ಟು ಗೌರವ ಪಡೆದುಕೊಳ್ಳುವುದು,ಶ್ರದ್ಧೆ ಮತ್ತು ನಿಷ್ಠೆಯಿಂದ ನಿತ್ಯದ ಕರ್ತವ್ಯಗಳನ್ನು ನಿಭಾಯಿಸುವುದೇ ಮುಂತಾದ ಅಂಶಗಳನುಸಾರ...