Tuesday, January 27, 2026

ಸರಕಾರಿ ಪ್ರೌಢ ಶಾಲೆ ಪಂಜಿಕಲ್ಲಿನಲ್ಲಿ “ಬೀಜದುಂಡೆ ಬಿತ್ತನೆ ಹಾಗೂ ಗಿಡನೇಡುವ” ಕಾರ್ಯಕ್ರಮ

ಬಂಟ್ವಾಳ: ಸರಕಾರಿ ಪ್ರೌಢಶಾಲೆ ಪಂಜಿಕಲ್ಲಿನಲ್ಲಿ “ಬೀಜದುಂಡೆ ಬಿತ್ತನೆ ಹಾಗೂ ಗಿಡನೆಡುವ” ಕಾರ್ಯಕ್ರಮ ನೇರವೇರಿತು. ಅರಣ್ಯ ಇಲಾಖಾ ವಲಯ ಅರಣ್ಯ ಅಧಿಕಾರಿಯಾಗಿರುವ ಸುರೇಶ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಪರಿಸರವನ್ನು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಹಾಗೂ ಈ ಮೂಲಕ ಸರಕಾರದ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವ ಬಗ್ಗೆ ತಿಳಿಸುತ್ತಾ ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ದುರ್ಗಾಪ್ರಸಾದ್ ಕಾರ್ಯಕ್ರಮವನ್ನು ಉದ್ದೇಶಿಸಿ  ಮಾತನಾಡಿದರು. ಶಾಲಾ ಎಸ್.ಡಿ.ಎಂ.ಸಿ ಕಾರ್ಯಧ್ಯಕ್ಷರು ಆದ  ಸುದರ್ಶನ್ ಜೈನ್ ಪ್ರಕೃತಿ ಅಸಮತೋಲನವನ್ನು ತಡೆಯುವ ನಿಟ್ಟಿನಲ್ಲಿ ಶಾಲಾ ಹಂತದಲ್ಲಿಯೇ ಗಿಡಗಳನ್ನು ನೆಡುವ ಮೂಲಕ ಜಾಗೃತಿ ಮೂಡಿಸಬೇಕೆಂದು ತಿಳಿಸಿದರು. ಈ ಕಾರ್ಯಕ್ರಮವನ್ನು ಶಾಲಾ ಗಣಿತ ಶಿಕ್ಷಕಿ ಅನಿತಾ ಶೆಟ್ಟಿ ನಿರೂಪಿಸಿದರು. ವಿಧ್ಯಾರ್ಥಿನಿ ಜ್ಯೋತಿ ಸ್ವಾಗತಿಸಿದರು. ವೇದಿಕೆಯಲ್ಲಿ ಅರಣ್ಯಧಿಕಾರಿಯಾದ ಅನಿಲ್ ಹಾಗೂ ಅರಣ್ಯಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...