Tuesday, July 15, 2025

*ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಒಂದನೇ ಮೂಲ್ಯಣ್ಣ ಅನುವಂಶೀಕ ಪ್ರಧಾನ ಅರ್ಚಕರಿಗೆ ಸ್ವರ್ಣ ಬಳೆ ಸಮರ್ಪಣೆ*

ಸಂಪ್ರದಾಯದ ಕಟ್ಟು ಪಾಡಿನಂತೆ ಪಣೋಲಿಬೈಲ್ ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಅನುವಂಶಿಕ ಪ್ರಧಾನ ಅರ್ಚಕರಾಗಿದ್ದ ದಿ!ಗುಡ್ಡ ಮೂಲ್ಯ ಯಾನೆ ಬಾಬು ಮೂಲ್ಯರ ಉತ್ತರಾಧಿಕಾರಿಯಾದ ದೈವಸ್ಥಾನದ ಒಂದನೇ ಪ್ರಧಾನ ಅರ್ಚಕ ಶ್ರೀ ಗುಡ್ಡ ಮೂಲ್ಯ ಯಾನೆ ವಾಸುದೇವ ಮೂಲ್ಯರಿಗೆ, ಶ್ರೀ ಧಾಮ‌ ಮಾಣಿಲದ ಪರಮಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಪೂಜ್ಯ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಹಾಗೂ ಎರಡನೆ ಅರ್ಚಕರಾದ ಶ್ರೀ ನಾರಾಯಣ ಮೂಲ್ಯ, ಮೂರನೆ ಅರ್ಚಕರಾದ ಮೋನಪ್ಪ ಮೂಲ್ಯ, ಹಾಗೂ ಕುಟುಂಬದ ಹಿರಿಯ ಸದಸ್ಯರಾದ ಪೂವಪ್ಪ ಮೂಲ್ಯ ಕುಂಡಡ್ಕ, ಬೂಬ ಸಾಲ್ಯಾನ್ ಮತ್ತು ಕುಟುಂಬದ ಸದಸ್ಯರು ಹಾಗೂ ಶ್ರೀ ಪಣೋಲಿಬೈಲ್ ಶ್ರೀ ಕಲ್ಲುರ್ಟಿ ದೈವಸ್ಥಾನದ ಭಂಡಾರದ ಮನೆಯ ನವೀನ್ ಕುಮಾರ್, ಉಮೇಶ್ ಕುಲಾಲ್ ಮಂಚಿ, ಮತ್ತು ಗ್ರಾಮಸ್ಥರು, ಭಕ್ತಾಧಿಗಳ ಸಮ್ಮುಖದಲ್ಲಿ ಶ್ರೀ ಕ್ಷೇತ್ರದ ಗರ್ಭ ಗುಡಿಯ ಮಂಭಾಗದಲ್ಲಿ , ಕಟ್ಟು ಕಟ್ಟಳೆಯಂತೆ ದೈವದ ಪ್ರಧಾನ ಅರ್ಚಕರ *ಸ್ವರ್ಣ ಬಳೆ* ತೊಡಿಸಿ ದೈವದ ಅರ್ಚಕ ಜವಾಬ್ದಾರಿ ನೀಡಲಾಯಿತು.

ಕುಟುಂಬದ ಕಟ್ಟು ಪಾಡಿನ ಬಗ್ಗೆ ದೈವಸ್ಥಾನದ ಸಂಭಂಧಪಟ್ಟವರಿಗೆ ದೈವಸ್ಥಾನದ ಕಾರ್ಯ ನಿರ್ವಹಣಾಧಿಕಾರಿಯವರು ನೀಡಿರುವ ಮಾರ್ಗಸೂಚಿಯಂತೆ .ಕೋವಿಡ್ ನಿಯಮಾವಳಿಯ ಪ್ರಕಾರ ಕನಿಷ್ಠ ಸಂಖ್ಯೆಯಲ್ಲಿ ಭಾಗವಹಿಸಿ ತಲತಲಾಂತರದಿಂದ ನಡೆದು ಕೊಂಡು ಬಂದ ಸಂಪ್ರದಾಯದಂತೆ. ನಡೆಸಲಾಯಿತು, ಈ ಸಂಧರ್ಭದಲ್ಲಿ ಶ್ರೀ ರಮೇಶ್ ಕುಲಾಲ್ ಪಣೋಲಿಬೈಲ್, ರಾಜು ಕುಲಾಲ್, ಲೋಹಿತ್ ಕುಮಾರ್ ಯಸ್ ಪಣೋಲಿಬೈಲ್, ಕುಕ್ಕುಟ ಸಮಿತಿಯ ಅಧ್ಯಕ್ಷ ಮತ್ತು ಮಾತ್ರ ಸಂಘದ ಜಿಲ್ಲಾಉಪಾಧ್ಯಕ್ಷ ಶ್ರೀ ದಯಾನಂದ ಅಡ್ಯಾರ್, ಕುಲಾಲ ಕುಂಬಾರ ವೇದಿಕೆ ಪಣೋಲಿಬೈಲಿನ ಅಧ್ಯಕ್ಷರು ರಮೇಶ್ ಎಂ,ಭಂಡಾರದ ಮನೆ, ಲಿಂಗಪ್ಪ ಬಂಗೇರ ಕಾರಜೆ, ಕುಲಾಲ ಯುವ ವೇದಿಕೆಯ ಜಿಲ್ಲಾಧ್ಯಕ್ಷ ಸುಕುಮಾರ್ ಬಂಟ್ವಾಳ್, ಕಾರ್ತಿಕ್ ಬಂಟ್ವಾಳ್, ಪುನೀತ್ ಕಾಮಾಜೆ, ಜಯರಾಮ ಶೆಟ್ಟಿ ನಗ್ರಿಗುತ್ತು, ನಾಗೇಶ್ ಬಂಗೇರ, ಮನೋಜ್ ಕುಮಾರ್, ಬಾಲಕ್ರಷ್ಣ ಕುಲಾಲ್, ಗೋಪಾಲ ಕುಲಾಲ್, ಹಾಗೂ ಹೆಚ್ಚಿನ ಭಕ್ತಾದಿಗಳು ಭಾಗವಹಿಸಿದ್ದರು.

More from the blog

ತುಳುರಂಗಭೂಮಿ‌ ಕಲಾವಿದ ಮೌನೇಶ ಆಚಾರ್ಯ ನಿಧನ..

ಬಂಟ್ವಾಳ : ಪ್ರತಿಭಾನ್ವಿತ ಯುವಕ, ತುಳುರಂಗಭೂಮಿ‌ ಕಲಾವಿದ, ಕಾಪಿಕಾಡು‌ ನಿವಾಸಿ ಮೌನೇಶ ಆಚಾರ್ಯ ಮಾಣಿ(44) ಇವರು ಮಂಗಳವಾರ ಮುಂಜಾನೆ ತಮ್ಮ‌ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು. ಚಿನ್ನದ ಕೆಲಸ‌ಮಾಡುತ್ತಿದ್ದ ಇವರು ಜೊತೆಗೆ ಮನೆಸಮೀಪವೇ ಚಿಕ್ಕ‌ ದಿನಸಿ‌ ಅಂಗಡಿ...

ಬಂಟ್ವಾಳ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಹಾಗೂ ವಾರ್ಷಿಕ ಸಭೆ..

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಹಾಗೂ ವಾರ್ಷಿಕ ಸಭೆ ಸೋಮವಾರ...

ನಿರಂತರ ಮಳೆ : ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ದಿನಾಂಕ 15.07.2025ರಂದು ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರ್...

ಒಡಿಯೂರು ಶ್ರೀ ಜನ್ಮದಿನೋತ್ಸವ ಸೇವಾ ಸಂಭ್ರಮದ ಅಂಗವಾಗಿ ಬೃಹತ್ ಉಚಿತ ವೈದ್ಯಕೀಯ ಶಿಬಿರ

ವಿಟ್ಲ : ನಮ್ಮ ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಬದುಕಿನ ಉತ್ತುಂಗಕ್ಕೆ ಕಾರಣವಾಗುತ್ತದೆ. ಬದುಕು ಪೂರ್ತಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಋತುವಿಗನುಗುಣವಾಗಿ ಹಿತ, ಮಿತ ಆಹಾರ ಸೇವಿಸಿದಾಗ ಉತ್ತಮ ಆರೋಗ್ಯ ಪಡೆಯಬಹುದು...