Monday, June 30, 2025

ಪಣೋಲಿಬೈಲು ಕ್ಷೇತ್ರಕ್ಕೆ ಆಡಳಿತಾಧಿಕಾರಿ ಮದನ್ ಮೋಹನ್ ಭೇಟಿ

ತುಳುನಾಡಿನ ಕಾರಣಿಕ ಕ್ಷೇತ್ರ, ಐತಿಹಾಸಿಕ ಸನ್ನಿಧಿಯಾದ ಶ್ರೀ ಕಲ್ಲುರ್ಟಿ ದೈವಸ್ಥಾನ ಪಣೋಲಿಬೈಲು ಕ್ಷೇತ್ರಕ್ಕೆ ಮಂಗಳೂರು ಸಹಾಯಕ ಕಮಿಷನರ್, ಕ್ಷೇತ್ರದ ಆಡಳಿತಾಧಿಕಾರಿ ಮದನ್ ಮೋಹನ್ ಸಿ ಅವರು ಭೇಟಿ ನೀಡಿ, ಶ್ರೀ ಕಲ್ಲುರ್ಟಿ
ದೈವ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಸ್ಥಳಿಯ ಸಜೀಪ ಮೂಡ ಗ್ರಾಮ ಪಂಚಾಯತಿ ಸದಸ್ಯ .
ರಮೇಶ್ ಎಂ. ಭಂಡಾರದ ಮನೆ ಪಣೋಲಿಬೈಲ್ ಅವರು ಸಹಾಯಕ ಕಮಿಷನರ್ ಮದನ್ ಮೋಹನ್ ಸಿ ಅವರನ್ನು ಶಾಲು ಹೊದಿಸಿ, ಫಲಪುಷ್ಪ ನೀಡಿ ಶ್ರೀ ಕ್ಷೇತ್ರದ ಪರವಾಗಿ ಗೌರವಿಸಿದರು.
ಕಲ್ಲುರ್ಟಿ ದೈವಕ್ಕೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸಹಾಯಕ ಕಮಿಷನರ್ ಅವರಿಗೆ
ಪ್ರಧಾನ ಅರ್ಚಕರಾದ ವಾಸುದೇವ ಮೂಲ್ಯ, ಅರ್ಚಕರಾದ ರಮೇಶ್ ಮೂಲ್ಯ.
ಮೋನಪ್ಪ ಮೂಲ್ಯ ಈ ಸಂದರ್ಭದಲ್ಲಿ ಪ್ರಸಾದ ನೀಡಿ ಗೌರವಿಸಿದರು.
ಇದೇ ಸಂದರ್ಭದಲ್ಲಿ ದೈವಸ್ಥಾನದ ಸಿಬ್ಬಂದಿ ವರ್ಗ ಹಾಜರಿದ್ದರು.

More from the blog

ಬೋಳಂತೂರು : ಮನೆ ದುರಸ್ತಿ ಶ್ರಮದಾನ ಕಾರ್ಯಕ್ರಮ..

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)ವಿಟ್ಲ ಇದರ ಕಲ್ಲಡ್ಕ ವಲಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಭೀಮ್ ಸಂಜೀವಿನಿ ಬೋಳಂತೂರು ಇದರ ಜಂಟಿ...

ಮಾಣಿಲ – ಸಾಮೂಹಿಕ ಲಕ್ಷ್ಮೀ ಪೂಜೆ : ಧಾರ್ಮಿಕ ಸಭೆ..

ವಿಟ್ಲ: ಕೋಪ, ಅಹಂಕಾರ, ಗರ್ವಗಳೆಲ್ಲವೂ ಬದುಕಿಗೆ ಎಂದೂ ಪ್ರಯೋಜನಕ್ಕೆ ಬಾರವು. ಉದ್ರೇಕ ರೋಷ, ದ್ವೇಷಗಳಿಂದ ಏನೂ ಸಾಧಿಸಲಾಗದು. ಭ್ರಮೆಯಿಂದ ಹೊರಬೇಕಾದರೆ ಗುರುಶಕ್ತಿಯನ್ನು ಅರಿತುಕೊಳ್ಳುವ ಜ್ಞಾನವನ್ನು ಹೊಂದಬೇಕು. ಎಲ್ಲರನ್ನೂ ಎಲ್ಲವನ್ನೂ ಪ್ರೀತಿಸುತ್ತಾ ಸಾಗೋಣ ಎಂದು...

ಫರಂಗಿಪೇಟೆ: ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಅಭಿಯಾನ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ೭೫ರ ಮಂಗಳೂರು- ಬಿ.ಸಿ.ರೋಡು ಹೆದ್ದಾರಿಯನ್ನು ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಸ್ವಚ್ಛತೆಗಾಗಿ ನಿಮ್ಮೊಂದಿಗೆ ನಾವು, ನಮ್ಮೊಂದಿಗೆ ನೀವು ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಇದರ ಭಾಗವಾಗಿ ಅಡ್ಯಾರ್ ನಿಂದ ಫರಂಗಿಪೇಟೆ ಮೂಲಕ ಕಡೆಗೋಳಿವರೆಗೆ...

Strike : ಜು. 9ರ ಕಾರ್ಮಿಕರ ಅಖಿಲ ಭಾರತ ಮುಷ್ಕರ ಯಶಸ್ವಿಗೊಳಿಸಲು ಕಾಮ್ರೇಡ್ ಪಿ.ಪಿ ಅಪ್ಪಣ್ಣ ಕರೆ

ಬಂಟ್ವಾಳ : ಜುಲೈ 9 ರಂದು ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದ್ದು ಈ...