Thursday, January 29, 2026

ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದ ಆಡಳಿತ ಅಧಿಕಾರಿಯಾಗಿ ದಕ್ಷ, ಪ್ರಾಮಾಣಿಕ ಅಧಿಕಾರಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ನೇಮಕ

ಬಂಟ್ವಾಳ: ಐತಿಹಾಸಿಕ ಹಿನ್ನೆಲೆಯುಳ್ಳ, ಕಾರಣೀಕ ಶ್ರೀ ಕ್ಷೇತ್ರ ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದ ಆಡಳಿತ ಅಧಿಕಾರಿಯಾಗಿ ದಕ್ಷ , ಪ್ರಮಾಣಿಕ ಅಧಿಕಾರಿ ಬಂಟ್ವಾಳ ತಹಶಿಲ್ದಾರ್ ದ.ಕ. ಮೂಲದ ರಶ್ಮಿ ಎಸ್. ಆರ್ ಅವರನ್ನು ಧಾರ್ಮಿಕ ದತ್ತಿ ಇಲಾಖೆ ನೇಮಕ ಮಾಡಿದೆ.
ಕಳೆದ ಒಂದುವರೆ ವರ್ಷಗಳಿಂದ ಬಂಟ್ವಾಳ ತಾಲೂಕಿನ ತಹಶಿಲ್ದಾರ್ ಆಗಿದ್ದು ಕೊಂಡು ಉತ್ತಮ ಅಧಿಕಾರಿ ಆಗಿರುವ ಇವರು ಪನೋಲಿಬೈಲು ಕ್ಷೇತ್ರದ ಅನನ್ಯ ಭಕ್ತೆ ಕೂಡ ಹೌದು .
ಪುರಸಭಾ ವ್ಯಾಪ್ತಿಯ ಗೂಡಿನಬಳಿಯಲ್ಲಿ ಹಲವಾರು ವರ್ಷಗಳಿಂದ ಅಕ್ರಮ ಅಡ್ಡೆಯಾಗಿದ್ದಕೊಂಡು ಸಾರ್ವಜನಿಕ ವಾಗಿ ತೊಂದರೆಯಾಗುತ್ತಿದ್ದ ಸುಣ್ಣದ ಗೂಡು ತೆರವುಮಾಡಿದ ಓರ್ವ ದಕ್ಷ ಅಧಿಕಾರಿಯಾಗಿದ್ದು , ಸರಕಾರದ ಅದೇಶದಂತೆ ಕೋವಿಡ್ ನಿಯಂತ್ರಣದ ವ್ಯವಸ್ಥೆಗಳ ಸಂದರ್ಭದಲ್ಲಿ ಯೂ ಇವರ ಪಾತ್ರ ಹಿರಿದಾಗಿತ್ತು.

ಪ್ರಸ್ತುತ ಇವರು ಪನೋಲಿಬೈಲು ಕಲ್ಲುರ್ಟಿ ದೇವಸ್ಥಾನ ದ ಆಡಳಿತ ಅಧಿಕಾರಿಯಾಗಿ ನೇಮಕವಾಗಿದ್ದಾರೆ, ಇವರ ಅವಧಿಯಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ಹಾಗೂ ಭಕ್ತರ ಕೆಲವೊಂದು ಬೇಡಿಕೆಗಳು ಈಡೇರಿಕೆಯಾಗಲಿ , ಸಾವಿರಾರು ಭಕ್ತರು ಕ್ಷೇತ್ರ ಕ್ಕೆ ಬೇಟಿ ನೀಡುತ್ತಿದ್ದು ಆಡಳಿತ ಅಧಿಕಾರಿಯವರ ಆಡಳಿತದ ಅವಧಿಯಲ್ಲಿ ಭಕ್ತರ ಅನುಕೂಲ ವಾಗುವಂತಹ ಕಾರ್ಯಗಳು ನೆರವೇರಲಿ ಎಂಬುದು ಭಕ್ತರ ಆಶಯ.

More from the blog

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...

ದೈವೀಕೃಪೆಯಿಂದ ಮಾತ್ರ ಜೀವನರಥ ಎಳೆಯಬಹುದು : ಒಡಿಯೂರುಶ್ರೀ

ವಿಟ್ಲ: ಆತ್ಮರೂಪಿ ಭಗವಂತ ದೇಹದೊಳಗಿರುವಾಗಲೇ ಬದುಕಿನ ಸಾರ್ಥಕತೆ ಪಡೆಯಬೇಕು. ಧರ್ಮದ ಬಗ್ಗೆ ಮನೆಯಿಂದಲೇ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಆಧ್ಯಾತ್ಮಿಕ ಬೆಳಕಿನಿಂದ ಮಾತ್ರ ರಾಷ್ಟ್ರ ಬೆಳಗಲು ಸಾಧ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ...