Tuesday, January 27, 2026

ಸೆ.4 ರಿಂದ ಶ್ರೀ ಕ್ಷೇತ್ರ ಪಣೋಲಿಬೈಲಿನಲ್ಲಿ ಕೋಲ ಸೇವೆಗೆ ಅವಕಾಶ: ಅಗೇಲು ಸೇವೆ ಆರಂಭವಾಗಿಲ್ಲ, ಭಕ್ತರು ಸಹಕರಿಸಿ

ಬಂಟ್ವಾಳ: ಲಾಕ್ ಡೌನ್ ಹಿನ್ನೆಲೆ ರದ್ದುಗೊಳಿಸಲಾಗಿದ್ದ ತಾಲೂಕಿನ ಪ್ರಸಿದ್ದ ಕಾರಣೀಕ ಶ್ರೀ ಕ್ಷೇತ್ರ ಪಣೋಲಿಬೈಲಿನಲ್ಲಿ ಸೆ.4 ರಿಂದ ಕೋಲ ಸೇವೆ ಆರಂಭವಾಗಲಿದೆ. ಕೊರೊನಾ ಮಹಾಮಾರಿಯಿಂದ ಜನಸೇರಲು ಅವಕಾಶ ಇರದ ಹಿನ್ನೆಲೆಯಲ್ಲಿ ಧಾರ್ಮಿಕ ಕ್ಷೇತ್ರದಲ್ಲಿ ಯಾವುದೇ ಸೇವೆಗಳಿಗೆ ‌ಅವಕಾಶವಿರಲಿಲ್ಲ.
ಶ್ರೀ ಕ್ಷೇತ್ರ ಪಣೋಲಿಬೈಲುನಲ್ಲಿಯೂ ವಾರದಲ್ಲಿ ಮೂರು ದಿನ ನಡೆಯುತ್ತಿದ್ದ ಅಗೇಲು ಸೇವೆ ಹಾಗೂ ಕೋಲ ಸೇವೆಯೂ ಸರಕಾರದ ನಿಯಮದಂತೆ ರದ್ದುಗೊಳಿಸಲಾಗಿತ್ತು. ಇದೀಗ ಸರಕಾರದ ಆದೇಶದಂತೆ (ಸೆ.)4 ನಾಳೆಯಿಂದ ಕೇವಲ ಕೋಲ ಸೇವೆ ಮಾತ್ರ ಆರಂಭವಾಗಲಿದ್ದು ಅಗೇಲು ಸೇವೆಗೆ ಅವಕಾಶವಿಲ್ಲ ಎಂದು ಪ್ರಕಟಣೆ ತಿಳಿಸಿದೆ.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...