Wednesday, February 12, 2025

ಪರಂಗಿಪೇಟೆ ರೈಲ್ವೆ ಕ್ರಾಸ್ ಸಮಸ್ಯೆಯ ಸ್ಥಳ ಪರಿಶೀಲನೆಗೆ ಜಿಲ್ಲಾಧಿಕಾರಿ ಬೇಟಿ

ಬಂಟ್ವಾಳ: ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್
ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿ ಲಕ್ಮೀಪ್ರಸಾದ್, ಎ.ಸಿ.ರವಿ ಚಂದ್ರ ನಾಯಕ್, ಅವರು ಪರಂಗಿಪೇಟೆ ರೈಲ್ವೆ ಲೆವೆಲ್ ಕ್ರಾಸ್ ನ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.

 

ಪರಂಗಿಪೇಟೆ ಕುಂಪಣಮಜಲು ನಿಂದ ಮೇರೆಮಜಲು ಸಂಪರ್ಕ ದ ಪರಂಗಿಪೇಟೆ ಯ ರೈಲ್ವೆ ಲೆವೆಲ್ ಕ್ರಾಸ್ ನ್ನು ಇಲಾಖೆ ಕಾಮಗಾರಿಯ ನೆಪವೊಡ್ಡಿ ಶಾಸ್ವತವಾಗಿ ಸಂಪರ್ಕ ದ ಕೊಂಡಿಯನ್ನು ಕಳಚಿ ಹಾಕಿತ್ತು.
ಇದರಿಂದ ಆಕ್ರೋಶಿತರಾದ ಸ್ಥಳೀಯ ನಿವಾಸಿಗಳು ಎರಡು ಬಾರಿ ಈ ಸ್ಥಳದಲ್ಲಿ ಪ್ರತಿಭಟನೆ ನಡೆಸಿ ರೈಲ್ವೆ ಲೆವೆಲ್ ಕ್ರಾಸ್ ಮಾಡಲು ಅವಕಾಶ ಮಾಡಿಕೊಡುವಂತೆ ಅಧಿಕಾರಿಗಳಲ್ಲಿ ವಿನಂತಿ ‌ಮಾಡಿದ್ದರು.
ಆದರೆ ಇಲಾಖೆಯವರು ಇವರ ಪ್ರತಿಭಟನೆ ಗೆ ಯಾವುದೇ ಸ್ಪಂದನೆ ನೀಡದ ಹಿನ್ನೆಲೆಯಲ್ಲಿ ಸಚಿವ ಖಾದರ್ ಅವರಿಗೆ ಸ್ಥಳೀಯ ಪ್ರಮುಖರು ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಹಿತ ಪೋಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಸೂಕ್ತವಾದ ಪರಿಹಾರ ಕ್ರಮಕೈಗೊಳ್ಳವ ಭರವಸೆ ನೀಡಿದರು.

ನಾಳೆ ರೈಲ್ವೆ ಇಲಾಖೆಯ ಅಧಿಕಾರಿಗಳನ್ನು ಕರೆಸಿ ಮಾತುಕತೆ ನಡೆಸಿ ಶಾಶ್ವತ ವಾದ ಪರಿಹಾರಕ್ಕೆ ಕ್ರಮಕೈಗೊಳ್ಳಲು ವ್ಯವಸ್ಥೆ ಮಾಡುವ ಭರವಸೆ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ನೀಡಿದರು.
ಈ ಸಂಧರ್ಭದಲ್ಲಿ
ಗ್ರಾಮಾಂತರ ಎಸ್.ಐ.ಪ್ರಸನ್ನ ಪ್ರಮುಖರಾದ ಜಿ.ಪಂ.ಮಾಜಿ ಸದಸ್ಯ ಉಮ್ಮರ್ ಫಾರೂಕ್, ಗ್ರಾ.ಪಂ.ಆದ್ಯಕ್ಷ ರಮ್ಲಾನ್, ತಾ.ಪಂ.ಮಾಜಿ ಸದಸ್ಯ ಆಸೀಪ್ ಇಕ್ಬಾಲ್, ಸುಕೇಶ್ ಶೆಟ್ಟಿ, ಸೆಲಿಂ ಕುಂಪಣಮಜಲು, ಗ್ರಾ.ಪಂ.ಸದಸ್ಯ ರಾದ ರಿಯಾಜ್ ಕುಂಪಣಮಜಲು, ಜಾಹೀರ್ ಕುಂಪಣಮಜಲು ಸ್ಥಳೀಯ ರಾದ ಧನ್ ರಾಜ್ , ಲಕ್ಷಣ್, ಶೇಖರ್ ಕುಂಪಣಮಜಲು, ಅಶೋಕ್ ಶೆಟ್ಟಿ‌, ವಿಕ್ರಂ ಮತ್ತಿತರರು ಹಾಜರಿದ್ದರು.
ಇದೇ ಸಂದರ್ಭದಲ್ಲಿ ಇಲ್ಲಿನ ಸಮಸ್ಯೆ ಗಳ ಬಗ್ಗೆ ಬಿಡಿಬಿಡಿಯಾಗಿ ಎಲ್ಲವನ್ನು ಸ್ಥಳೀಯ ರು ಅಧಿಕಾರಿ ಗಳಲ್ಲಿ ವಿವರಿಸಿದರು

More from the blog

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...