Tuesday, January 27, 2026

ಫರಂಗಿಪೇಟೆಯ ನೂತನ ಮೀನು ಮಾರುಕಟ್ಟೆಗೆ ಎಸ್ಸೈ ಪ್ರಸನ್ನ ಚಾಲನೆ

ಬಂಟ್ವಾಳ: ಫರಂಗಿಪೇಟೆಯ ರಾಷ್ಟ್ರೀಯ ಹೆದ್ದಾರಿಯ ಸಮೀಪ ಸುಸಜ್ಜಿತವಾದ ತಾತ್ಕಾಲಿಕ ಮೀನು ಮಾರುಕಟ್ಟೆಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಎಸ್ಸೈ ಪ್ರಸನ್ನ ಅವರು ಶುಕ್ರವಾರ ಸಂಜೆ ಉದ್ಘಾಟಿಸಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಮಾರುಕಟ್ಟೆಯು ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿಯೇ ಕಾರ್ಯಾಚರಿಸುತ್ತಿರುವುದರಿಂದ ಯಾವುದೇ ತೊಂದರೆಯಾಗದಂತೆ ವಹಿವಾಟು ನಡೆಸಬೇಕು. ಹೆದ್ದಾರಿ ಕೊಂಚ ದೂರದಲ್ಲಿ ಬ್ಯಾರಿಕೇಡ್ ಅಳವಡಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಹೆದ್ದಾರಿಯಲ್ಲಿಯೇ ವಾಹನವನ್ನು ನಿಲ್ಲಿಸಲು ವ್ಯಾಪಾರಸ್ಥರು ಅನುವು ಮಾಡಿಕೊಡಬಾರದು. ಇದರಿಂದ ಅಪಘಾತ ಹಾಗೂ ಸಂಚಾರಕ್ಕೆ ತೊಡಕು ಉಂಟಾಗುವ ಸಾಧ್ಯತೆ ಇದೆ. ಇರುವ ದಿನಗಳಷ್ಟು ಈ ಪರಿಸರದಲ್ಲಿ ಸ್ವಚ್ಛತೆಯೊಂದು ವ್ಯಾಪಾರ ನಡೆಸಿ ಎಂದು ಶುಭಹಾರೈಸಿದರು.
ಮಾಜಿ ಜಿಪಂ ಸದಸ್ಯ ಉಮರ್ ಫಾರೂಕ್ ಮಾತನಾಡಿ, ಫರಂಗಿಪೇಟೆ ಮಾರುಕಟ್ಟೆ ಜಿಲ್ಲೆಯಾದ್ಯಂತ ಪ್ರಸಿದ್ಧಿಯನ್ನು ಪಡೆದಿದೆ. ಮಂಗಳೂರಿನ ಬಂದರ್ ಪ್ರದೇಶ ಬಿಟ್ಟರೆ 2ನೇಯದಾಗಿ ಫರಂಗಿಪೇಟೆಯಲ್ಲಿ ತಾಜಾ ಮೀನುಗಳು ಸಿಗುತ್ತದೆ. ಪರಂಪರಗತವಾಗಿ ಬಂದಿರುವ ಈ ಮಾರುಕಟ್ಟೆ ಉಳಿಸುವ ಕೆಲಸವಾಗಬೇಕಾಗಿದೆ. ಇದಕ್ಕೆ ನಿಮ್ಮೆಲ್ಲರ ಸಹಕಾರ ಅತೀ ಅಗತ್ಯ. ಶಾಶ್ವತ ಮಾರುಕಟ್ಟೆ ನಿರ್ಮಾಣಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಒತ್ತಾಯ ಮಾಡಲಾಗುವುದು ಎಂದರು.
ಪುದು ಗ್ರಾಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಮಾತನಾಡಿ, ಸುಮಾರು 15 ಸಾವಿರ ಜನಸಂಖ್ಯೆಯನ್ನು ಹೊಂದಿರುವ ಈ ಪ್ರದೇಶಕ್ಕೆ ಶಾಶ್ವತ ಮೀನು ಮಾರುಕಟ್ಟೆ ಅಗತ್ಯವಾಗಿ ಬೇಕಾಗಿದೆ. ಈ ಬಗ್ಗೆ ಗ್ರಾಮ ಸಭೆಯಲ್ಲಿ ನಿರ್ಣಯ ಮಾಡಿ, ಸೂಕ್ತವಾದ ಸರಕಾರಿ ಜಾಗದಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಿಸಲಾಗುವುದು ಎಂದು ಹೇಳಿದರು.
ಮಾಜಿ ಮೇಯರ್ ಅಶ್ರಫ್ ಕೆ., ಜುಮಾ ಮಸೀದಿ ಅಧ್ಯಕ್ಷ ಮುಹಮ್ಮದ್ ಬಾವ ಈ ಸಂದರ್ಭ ಮಾತನಾಡಿ ಶುಭ ಹಾರೈಸಿದರು.
ವೇದಿಕೆಯಲ್ಲಿ ಗ್ರಾಪಂ ಉಪಾಧ್ಯಕ್ಷೆ ಉಪಾಧ್ಯಕ್ಷೆ ಲಿಡಿಯೋ ಪಿಂಟೋ, ಸಿ.ಎಂ. ಮುಸ್ತಫಾ, ಬುಖಾರಿ, ಉಮರಬ್ಬ, ಮಜೀದ್, ರಫೀಕ್ ಪೆರಿಮಾರ್, ಜಾಹಿರ್ ಅಬ್ಬಾಸ್, ಆದಂ, ಸುಲೈಮಾನ್, ಇಕ್ಬಾಲ್ ಸುಜೀರ್, ಖತೀಬ್ ಉಸ್ಮಾನ್ ದಾರಿಮಿ, ರಿಯಾಝ್ ಕುಂಪನಮಜಲು, ಹನೀಫ್, ಉಪಸ್ಥಿತರಿದ್ದರು.
ಮಾಜಿ ತಾಪಂ ಸದಸ್ಯ ಆಸಿಫ್ ಇಕ್ಬಾಲ್ ಸ್ವಾಗತಿಸಿ, ಸಲಾಂ ಮಲ್ಲಿ ವಂದಿಸಿ, ಇಸ್ಮಾಯಿಲ್ ನಿರೂಪಿಸಿದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...