Friday, June 27, 2025

ಫರಂಗಿಪೇಟೆಯ ನೂತನ ಮೀನು ಮಾರುಕಟ್ಟೆಗೆ ಎಸ್ಸೈ ಪ್ರಸನ್ನ ಚಾಲನೆ

ಬಂಟ್ವಾಳ: ಫರಂಗಿಪೇಟೆಯ ರಾಷ್ಟ್ರೀಯ ಹೆದ್ದಾರಿಯ ಸಮೀಪ ಸುಸಜ್ಜಿತವಾದ ತಾತ್ಕಾಲಿಕ ಮೀನು ಮಾರುಕಟ್ಟೆಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಎಸ್ಸೈ ಪ್ರಸನ್ನ ಅವರು ಶುಕ್ರವಾರ ಸಂಜೆ ಉದ್ಘಾಟಿಸಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಮಾರುಕಟ್ಟೆಯು ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿಯೇ ಕಾರ್ಯಾಚರಿಸುತ್ತಿರುವುದರಿಂದ ಯಾವುದೇ ತೊಂದರೆಯಾಗದಂತೆ ವಹಿವಾಟು ನಡೆಸಬೇಕು. ಹೆದ್ದಾರಿ ಕೊಂಚ ದೂರದಲ್ಲಿ ಬ್ಯಾರಿಕೇಡ್ ಅಳವಡಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಹೆದ್ದಾರಿಯಲ್ಲಿಯೇ ವಾಹನವನ್ನು ನಿಲ್ಲಿಸಲು ವ್ಯಾಪಾರಸ್ಥರು ಅನುವು ಮಾಡಿಕೊಡಬಾರದು. ಇದರಿಂದ ಅಪಘಾತ ಹಾಗೂ ಸಂಚಾರಕ್ಕೆ ತೊಡಕು ಉಂಟಾಗುವ ಸಾಧ್ಯತೆ ಇದೆ. ಇರುವ ದಿನಗಳಷ್ಟು ಈ ಪರಿಸರದಲ್ಲಿ ಸ್ವಚ್ಛತೆಯೊಂದು ವ್ಯಾಪಾರ ನಡೆಸಿ ಎಂದು ಶುಭಹಾರೈಸಿದರು.
ಮಾಜಿ ಜಿಪಂ ಸದಸ್ಯ ಉಮರ್ ಫಾರೂಕ್ ಮಾತನಾಡಿ, ಫರಂಗಿಪೇಟೆ ಮಾರುಕಟ್ಟೆ ಜಿಲ್ಲೆಯಾದ್ಯಂತ ಪ್ರಸಿದ್ಧಿಯನ್ನು ಪಡೆದಿದೆ. ಮಂಗಳೂರಿನ ಬಂದರ್ ಪ್ರದೇಶ ಬಿಟ್ಟರೆ 2ನೇಯದಾಗಿ ಫರಂಗಿಪೇಟೆಯಲ್ಲಿ ತಾಜಾ ಮೀನುಗಳು ಸಿಗುತ್ತದೆ. ಪರಂಪರಗತವಾಗಿ ಬಂದಿರುವ ಈ ಮಾರುಕಟ್ಟೆ ಉಳಿಸುವ ಕೆಲಸವಾಗಬೇಕಾಗಿದೆ. ಇದಕ್ಕೆ ನಿಮ್ಮೆಲ್ಲರ ಸಹಕಾರ ಅತೀ ಅಗತ್ಯ. ಶಾಶ್ವತ ಮಾರುಕಟ್ಟೆ ನಿರ್ಮಾಣಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಒತ್ತಾಯ ಮಾಡಲಾಗುವುದು ಎಂದರು.
ಪುದು ಗ್ರಾಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಮಾತನಾಡಿ, ಸುಮಾರು 15 ಸಾವಿರ ಜನಸಂಖ್ಯೆಯನ್ನು ಹೊಂದಿರುವ ಈ ಪ್ರದೇಶಕ್ಕೆ ಶಾಶ್ವತ ಮೀನು ಮಾರುಕಟ್ಟೆ ಅಗತ್ಯವಾಗಿ ಬೇಕಾಗಿದೆ. ಈ ಬಗ್ಗೆ ಗ್ರಾಮ ಸಭೆಯಲ್ಲಿ ನಿರ್ಣಯ ಮಾಡಿ, ಸೂಕ್ತವಾದ ಸರಕಾರಿ ಜಾಗದಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಿಸಲಾಗುವುದು ಎಂದು ಹೇಳಿದರು.
ಮಾಜಿ ಮೇಯರ್ ಅಶ್ರಫ್ ಕೆ., ಜುಮಾ ಮಸೀದಿ ಅಧ್ಯಕ್ಷ ಮುಹಮ್ಮದ್ ಬಾವ ಈ ಸಂದರ್ಭ ಮಾತನಾಡಿ ಶುಭ ಹಾರೈಸಿದರು.
ವೇದಿಕೆಯಲ್ಲಿ ಗ್ರಾಪಂ ಉಪಾಧ್ಯಕ್ಷೆ ಉಪಾಧ್ಯಕ್ಷೆ ಲಿಡಿಯೋ ಪಿಂಟೋ, ಸಿ.ಎಂ. ಮುಸ್ತಫಾ, ಬುಖಾರಿ, ಉಮರಬ್ಬ, ಮಜೀದ್, ರಫೀಕ್ ಪೆರಿಮಾರ್, ಜಾಹಿರ್ ಅಬ್ಬಾಸ್, ಆದಂ, ಸುಲೈಮಾನ್, ಇಕ್ಬಾಲ್ ಸುಜೀರ್, ಖತೀಬ್ ಉಸ್ಮಾನ್ ದಾರಿಮಿ, ರಿಯಾಝ್ ಕುಂಪನಮಜಲು, ಹನೀಫ್, ಉಪಸ್ಥಿತರಿದ್ದರು.
ಮಾಜಿ ತಾಪಂ ಸದಸ್ಯ ಆಸಿಫ್ ಇಕ್ಬಾಲ್ ಸ್ವಾಗತಿಸಿ, ಸಲಾಂ ಮಲ್ಲಿ ವಂದಿಸಿ, ಇಸ್ಮಾಯಿಲ್ ನಿರೂಪಿಸಿದರು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...