Saturday, February 8, 2025

ಫರಂಗಿಪೇಟೆಯ ನೂತನ ಮೀನು ಮಾರುಕಟ್ಟೆಗೆ ಎಸ್ಸೈ ಪ್ರಸನ್ನ ಚಾಲನೆ

ಬಂಟ್ವಾಳ: ಫರಂಗಿಪೇಟೆಯ ರಾಷ್ಟ್ರೀಯ ಹೆದ್ದಾರಿಯ ಸಮೀಪ ಸುಸಜ್ಜಿತವಾದ ತಾತ್ಕಾಲಿಕ ಮೀನು ಮಾರುಕಟ್ಟೆಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಎಸ್ಸೈ ಪ್ರಸನ್ನ ಅವರು ಶುಕ್ರವಾರ ಸಂಜೆ ಉದ್ಘಾಟಿಸಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಮಾರುಕಟ್ಟೆಯು ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿಯೇ ಕಾರ್ಯಾಚರಿಸುತ್ತಿರುವುದರಿಂದ ಯಾವುದೇ ತೊಂದರೆಯಾಗದಂತೆ ವಹಿವಾಟು ನಡೆಸಬೇಕು. ಹೆದ್ದಾರಿ ಕೊಂಚ ದೂರದಲ್ಲಿ ಬ್ಯಾರಿಕೇಡ್ ಅಳವಡಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಹೆದ್ದಾರಿಯಲ್ಲಿಯೇ ವಾಹನವನ್ನು ನಿಲ್ಲಿಸಲು ವ್ಯಾಪಾರಸ್ಥರು ಅನುವು ಮಾಡಿಕೊಡಬಾರದು. ಇದರಿಂದ ಅಪಘಾತ ಹಾಗೂ ಸಂಚಾರಕ್ಕೆ ತೊಡಕು ಉಂಟಾಗುವ ಸಾಧ್ಯತೆ ಇದೆ. ಇರುವ ದಿನಗಳಷ್ಟು ಈ ಪರಿಸರದಲ್ಲಿ ಸ್ವಚ್ಛತೆಯೊಂದು ವ್ಯಾಪಾರ ನಡೆಸಿ ಎಂದು ಶುಭಹಾರೈಸಿದರು.
ಮಾಜಿ ಜಿಪಂ ಸದಸ್ಯ ಉಮರ್ ಫಾರೂಕ್ ಮಾತನಾಡಿ, ಫರಂಗಿಪೇಟೆ ಮಾರುಕಟ್ಟೆ ಜಿಲ್ಲೆಯಾದ್ಯಂತ ಪ್ರಸಿದ್ಧಿಯನ್ನು ಪಡೆದಿದೆ. ಮಂಗಳೂರಿನ ಬಂದರ್ ಪ್ರದೇಶ ಬಿಟ್ಟರೆ 2ನೇಯದಾಗಿ ಫರಂಗಿಪೇಟೆಯಲ್ಲಿ ತಾಜಾ ಮೀನುಗಳು ಸಿಗುತ್ತದೆ. ಪರಂಪರಗತವಾಗಿ ಬಂದಿರುವ ಈ ಮಾರುಕಟ್ಟೆ ಉಳಿಸುವ ಕೆಲಸವಾಗಬೇಕಾಗಿದೆ. ಇದಕ್ಕೆ ನಿಮ್ಮೆಲ್ಲರ ಸಹಕಾರ ಅತೀ ಅಗತ್ಯ. ಶಾಶ್ವತ ಮಾರುಕಟ್ಟೆ ನಿರ್ಮಾಣಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಒತ್ತಾಯ ಮಾಡಲಾಗುವುದು ಎಂದರು.
ಪುದು ಗ್ರಾಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಮಾತನಾಡಿ, ಸುಮಾರು 15 ಸಾವಿರ ಜನಸಂಖ್ಯೆಯನ್ನು ಹೊಂದಿರುವ ಈ ಪ್ರದೇಶಕ್ಕೆ ಶಾಶ್ವತ ಮೀನು ಮಾರುಕಟ್ಟೆ ಅಗತ್ಯವಾಗಿ ಬೇಕಾಗಿದೆ. ಈ ಬಗ್ಗೆ ಗ್ರಾಮ ಸಭೆಯಲ್ಲಿ ನಿರ್ಣಯ ಮಾಡಿ, ಸೂಕ್ತವಾದ ಸರಕಾರಿ ಜಾಗದಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಿಸಲಾಗುವುದು ಎಂದು ಹೇಳಿದರು.
ಮಾಜಿ ಮೇಯರ್ ಅಶ್ರಫ್ ಕೆ., ಜುಮಾ ಮಸೀದಿ ಅಧ್ಯಕ್ಷ ಮುಹಮ್ಮದ್ ಬಾವ ಈ ಸಂದರ್ಭ ಮಾತನಾಡಿ ಶುಭ ಹಾರೈಸಿದರು.
ವೇದಿಕೆಯಲ್ಲಿ ಗ್ರಾಪಂ ಉಪಾಧ್ಯಕ್ಷೆ ಉಪಾಧ್ಯಕ್ಷೆ ಲಿಡಿಯೋ ಪಿಂಟೋ, ಸಿ.ಎಂ. ಮುಸ್ತಫಾ, ಬುಖಾರಿ, ಉಮರಬ್ಬ, ಮಜೀದ್, ರಫೀಕ್ ಪೆರಿಮಾರ್, ಜಾಹಿರ್ ಅಬ್ಬಾಸ್, ಆದಂ, ಸುಲೈಮಾನ್, ಇಕ್ಬಾಲ್ ಸುಜೀರ್, ಖತೀಬ್ ಉಸ್ಮಾನ್ ದಾರಿಮಿ, ರಿಯಾಝ್ ಕುಂಪನಮಜಲು, ಹನೀಫ್, ಉಪಸ್ಥಿತರಿದ್ದರು.
ಮಾಜಿ ತಾಪಂ ಸದಸ್ಯ ಆಸಿಫ್ ಇಕ್ಬಾಲ್ ಸ್ವಾಗತಿಸಿ, ಸಲಾಂ ಮಲ್ಲಿ ವಂದಿಸಿ, ಇಸ್ಮಾಯಿಲ್ ನಿರೂಪಿಸಿದರು.

More from the blog

ಅನರ್ಹ ಮತದಾರರ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಗೆ ಪರಿಗಣಿಸಬಾರದು: ಉಚ್ಚ ನ್ಯಾಯಾಲಯದ ತೀರ್ಪು

ಬಂಟ್ವಾಳ: ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಯಲ್ಲಿ ಪರಿಗಣಿಸಬಾರದು ಎಂದು ಕರ್ನಾಟಕ ಉಚ್ಚ ನ್ಯಾಯಲಯವು ಐತಿಹಾಸಿಕ ತೀರ್ಪನ್ನು ಹೊರಡಿಸಿದೆ. ಮಡಂತ್ಯಾ‌ರ್ ಪ್ರಾಥಮಿಕ...

ಬಂಟ್ವಾಳ : ತಾಲೂಕು ಆಸ್ಪತ್ರೆಗೆ ವೈದ್ಯರನ್ನು ನೀಡಿ – ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ

ಬಂಟ್ವಾಳ: ಸುಸಜ್ಜಿತವಾದ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆಯಾದರೂ ರೋಗಿಗಳಿಗೆ ಚಿಕಿತ್ಸೆ ನೀಡಲು ಸರಿಯಾದ ವಿಭಾಗದಲ್ಲಿ ವೈದ್ಯರುಗಳಿಲ್ಲದೆ, ತಾಲೂಕಿನ ಬಡ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಸಾಮಾಜಿಕ ಕಾರ್ಯಕರ್ತ ಸಮಾದ್ ಕೈಕಂಬ ಅವರು...

ಕಣಿಯೂರು: ನುಡಿನಮನ, ಯಕ್ಷಗಾನ ತಾಳಮದ್ದಳೆ

ವಿಟ್ಲ: ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ಇತ್ತೀಚೆಗೆ ನಿಧನರಾದ ಯಕ್ಷಗಾನ ಕಲಾವಿದ, ಉಪನ್ಯಾಸಕ ಪಕಳಕುಂಜ ಶ್ಯಾಮ್ ಭಟ್, ಕೂಡ್ಲು ಗಣಪತಿ ಭಟ್ ಅವರಿಗೆ ನುಡಿ ನಮನ ಹಾಗೂ ಯಕ್ಷಗಾನ ತಾಳಮದ್ದಳೆ...

ಒಡಿಯೂರಿನಲ್ಲಿ 25ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಒಡಿಯೂರು ರಥೋತ್ಸವ ತುಳುನಾಡ ಜಾತ್ರೆಯ ಅಂಗವಾಗಿ 25 ನೇ ವರ್ಷದ ತುಳು ಸಾಹಿತ್ಯ ಸಮ್ಮೇಳನ ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ನಡೆಯಿತು. ಸಮ್ಮೇಳನ ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ...