Thursday, July 10, 2025

ಶ್ರೀಯೋಗನಿಧಿ ಪತಂಜಲಿ ಪ್ರತಿಷ್ಠಾನದ ಉದ್ಘಾಟನೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಶ್ರೀ ಯೋಗನಿಧಿ ಪತಂಜಲಿ ಪ್ರತಿಷ್ಠಾನವನ್ನು  ಬಿ.ಸಿ.ರೋಡಿನ ಗೀತಾಂಜಲಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಪೊಳಲಿ ರಾಮಕೃಷ್ಣ ತಪೋವನದ ಶ್ರೀ ವಿವೇಕಚೈತ್ಯಾನಂದ ಸ್ವಾಮೀಜಿ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಅವರು ಯೋಗದ ಸಾರವನ್ನುತಿಳಿದುಕೊಂಡು ಜೀವನ ಸಾಗಿಸಿದರೆ ನೆಮ್ಮದಿಯನ್ನು ಕಾಣಲು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಉಜಿರೆ ಎಸ್.ಡಿ.ಎಂ ಕಾಲೇಜಿನ ಡಾ.ನಂದೀಶ್ ಯೋಗದ ಮತ್ತು ಜೀವನಶೈಲಿ ಕುರಿತು ಮಾಹಿತಿ ನೀಡಿದರು. ಈ ಸಂದರ್ಭ ಹಿರಿಯ ಯೋಗ ತರಬೇತುದಾರ, ಯೋಗಪಟು ಮಂಗಳೂರಿನ ಮೋನಪ್ಪ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿ.ಯಲ್ಲಿ 625ರಲ್ಲಿ 624 ಅಂಕ ಗಳಿಸಿದ ಬಂಟ್ವಾಳ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಹೈಸ್ಕೂಲಿನ ವಿದ್ಯಾರ್ಥಿನಿ ಹಾಗೂ ಡಾ. ದಿನೇಶ್ ಕಾಮತ್ ಮತ್ತು ಡಾ.ಅನುರಾಧಾ ಕಾಮತ್ ಪುತ್ರಿ ಅನುಪಮಾ ಕಾಮತ್ ಮತ್ತು 611 ಅಂಕ ಗಳಿಸಿದ ಶಂಭೂರು ಬೊಂಡಾಲ ಜಗನ್ನಾಥ ಸ್ಮಾರಕ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಮತ್ತು ಡಾ. ಸುಬ್ರಹ್ಮಣ್ಯ ಮತ್ತು ಪ್ರತಿಭಾ ದಂಪತಿಯ ಪುತ್ರ ಜಯಗೋವಿಂದ ಅವರನ್ನು ಗೌರವಿಸಲಾಯಿತು. ಯೋಗ ಪ್ರಶಿಕ್ಷಣ ಪಡೆದ ಶಿಕ್ಷಕರನ್ನು ಅಭಿನಂದಿಸಲಾಯಿತು. ಪ್ರತಿಷ್ಠಾನದ ಅಧ್ಯಕ್ಷ ಡಾ.ಶಿವಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಡಾ.ರಘುವೀರ ಅವಧಾನಿ ಪ್ರತಿಷ್ಠಾನದ ಕಾರ್ಯಸ್ವರೂಪ ಕುರಿತು ವಿವರಿಸಿದರು. ಕೋಶಾಧಿಕಾರಿ ಡಾ.ಸುಬ್ರಹ್ಮಣ್ಯ ಭಟ್ ವಂದಿಸಿದರು. ಪ್ರತಿಭಾ, ಪ್ರತಿಮಾ ಮತ್ತು ಗೀತಾ ಪ್ರಾರ್ಥಿಸಿದರು. ಶಿಕ್ಷಕ ಬಿ.ರಾಮಚಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು. ಬಿ.ಸಿ.ರೋಡಿನ ಮಕ್ಕಳ ತಜ್ಞ ವೈದ್ಯ ಡಾ.ಎಂ.ಎಸ್.ಮಹೇಶ್ ಮತ್ತು ಬಳಗದಿಂದ ಸಂಗೀತ ಕಾರ್ಯಕ್ರಮ, ಯೋಗಪಟುಗಳಿಂದ ಯೋಗನೃತ್ಯ ಪ್ರದರ್ಶನಗೊಂಡಿತು.

More from the blog

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...