Thursday, July 3, 2025

ಪೇಜಾವರ ಶ್ರೀಗಳಿಗೆ ನುಡಿ ನಮನ

ಉಜಿರೆ: ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಸೋಮವಾರ ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್. ಸತೀಶ್ಚಂದ್ರ ಅಧ್ಯಕ್ಷತೆಯಲ್ಲಿ ನುಡಿ ನಮನ ಸಲ್ಲಿಸಲಾಯಿತು.
ಪೂಜ್ಯ ಸ್ವಾಮೀಜಿಯವರ ಶಿಷ್ಯ ಹಾಗೂ ಎಸ್.ಡಿ.ಎಂ.ಕಾಲೇಜಿನಲ್ಲಿ ಪೇಜಾವರ ಶ್ರೀಗಳು ಪರಂಧಾಮ ಹೊಂದಿದ ಬಗ್ಗೆ ಸಂಸ್ಕೃತ ಉಪನ್ಯಾಸಕ ರಾಮಚಂದ್ರ ಪುರೋಹಿತ ಮತ್ತು ಡಾ.ಶ್ರೀಧರ ಭಟ್ ನುಡಿನಮನ ಸಲ್ಲಿಸಿದರು.
ಪ್ರಾಧ್ಯಾಪಕ ವೃಂದ, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಪೂಜ್ಯ ಸ್ವಾಮೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಉಜಿರೆಯಲ್ಲಿರುವ ಕೆ.ಜಿ.ಯಿಂದ ಪಿ.ಜಿ. ವರೆಗಿನ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೂ ಸೋಮವಾರ ರಜೆ ನೀಡಲಾಯಿತು.
ಧಾರವಾಡದಲ್ಲಿರುವ ಜನತಾ ಶಿಕ್ಷಣ ಸಮಿತಿಯ ಎಲ್ಲಾ ಸಂಸ್ಥೆಗಳಿಗೂ ಸೋಮವಾರ ರಜೆ ಸಾರಲಾಗಿದೆ ಎಂದು ಅಲ್ಲಿನ ಕಾರ್ಯದರ್ಶಿ ಡಾ. ನ. ವಜ್ರಕುಮಾರ್ ತಿಳಿಸಿದ್ದಾರೆ.
1973ರಲ್ಲಿ ಪೂಜ್ಯ ಪೇಜಾವರ ಸ್ವಾಮೀಜಿ ಸಲಹೆಯಂತೆ ಆರ್ಥಿಕ ಸಂಕಷ್ಟದಲ್ಲಿ ಮುಳುಗಿದ್ದ ಜನತಾ ಶಿಕ್ಷಣ ಸಮಿತಿಯ ಆಡಳಿತವನ್ನು ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಿಕೊಂಡು ಎಲ್ಲಾ ಸಂಸ್ಥೆಗಳಿಗೂ ಕಾಯಕಲ್ಪ ನೀಡಿದ್ದಾರೆ.

More from the blog

Bantwal : ನೇತ್ರಾವತಿ ‌ನದಿಯಲ್ಲಿ ಅಪರಿಚಿತ ಗಂಡಸಿನ‌ ಮೃತದೇಹ ಪತ್ತೆ : ಗುರುತು ಪತ್ತೆಗೆ ಮನವಿ..

ಬಂಟ್ವಾಳ: ಇಲ್ಲಿನ‌ ನೇತ್ರಾವತಿ ‌ನದಿಯಲ್ಲಿ ಜುಲೈ 2 ರಂದು ಅಪರಿಚಿತ ಗಂಡಸಿನ‌ ಶವ ಪತ್ತೆಯಾಗಿದೆ ಎಂದು ಬಂಟ್ವಾಳ ನಗರ ಠಾಣಾ ಪೋಲೀಸರು ಪ್ರಕರಟನೆಯಲ್ಲಿ ತಿಳಿಸಿದ್ದಾರೆ. ಸುಮಾರು 45 ರಿಂದ 50 ವರ್ಷ ವಯಸ್ಸಿನವರಾಗಿದ್ದು,ಇವರ ಗುರುತು...

Mangalore : ಹಬ್ಬಗಳ ಋತು ಆರಂಭ – ಆಚರಣೆಗೆ ಷರತ್ತು ವಿಧಿಸಿದ ಪೊಲೀಸ್ ಇಲಾಖೆ..

ಮಂಗಳೂರು : ಕೆಲವೇ ದಿನಗಳಲ್ಲಿ ಹಬ್ಬಗಳ ಋತು ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಹಲವು ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳು ನಡೆಯಲಿದೆ. ಅವುಗಳಲ್ಲಿ ಮುಹರ್ರಂ, ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ,...

ಶ್ರೀ. ಕ್ಷೇ. ಧ. ಗ್ರಾ. ಯೋಜನೆಯ ಕ್ರಿಟಿಕಲ್ ಫಂಡ್ ಸಹಾಯಧನ ವಿತರಣೆ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಸುಧೆಕಾರು ಲೀಲಾ ಕೃಷ್ಣಪ್ಪ ಇವರ ಮಗನಾಧ ಹರೀಶ್ ಇವರು ಅನಾರೋಗ್ಯದಿಂದ ಬಳಲುತ್ತಿದ್ದು. ಇವರ ಚಿಕಿತ್ಸೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕ್ರಿಟಿಕಲ್ ಫಂಡ್...

ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ಕಾನೂನು ವಿರೋಧಿ ಕ್ರಮ ಖಂಡಿಸಿ ಪ್ರತಿಭಟನೆಗೆ ಕರೆ 

ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದ 2 ತಿಂಗಳುಗಳಿಂದ ಹಿಂದೂ ಸಂಘಟನೆಗಳ ಸಾಮಾಜಿಕ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆಯು ಕಾನೂನು ವಿರೋಧಿ ಕ್ರಮಗಳನ್ನು ಜಾರಿಗೊಳಿಸುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ...