Monday, January 26, 2026

ಸಂತರ ಸಂತಾಪ

ಒಡಿಯೂರು ಶ್ರೀಗಳ ಸಂತಾಪ:


ವಿಶ್ವವಂದ್ಯ, ವಿಶ್ವಸಂತ, ಉಡುಪಿ ಅಷ್ಟಮಠದ ಹಿರಿಯ ಯತಿಶ್ರೇಷ್ಠರಾದ ಪೂಜ್ಯ ಶ್ರೀ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರು ಕೃಷ್ಣೈಕ್ಯರಾದುದು ಭಾರತೀಯ ಸನಾತನ ಪರಂಪರೆಗೆ ತುಂಬಲಾರದ ನಷ್ಟ. ಲೋಕೋದ್ಧಾರದ ಚುಕ್ಕಾಣಿ ಹಿಡಿದು, ಸಮನ್ವಯತೆಯ ಹರಿಕಾರರಾಗಿ ಆಧ್ಯಾತ್ಮಿಕ ಪರಿವ್ರಾಜಕರಾಗಿದ್ದ ಪೂಜ್ಯ ಶ್ರೀಗಳವರು ಅಗಲಿರುವುದು ತುಂಬಾ ದುಃಖವನ್ನುಂಟು ಮಾಡಿದೆ.

 

ಮಾಣಿಲಶ್ರೀ ಸಂತಾಪ:

ದೇಶದ ಸಂತ ಪರಂಪರೆಗೆ ಅರ್ಥ ತುಂಬಿದ ಮಹಾ ಸಂತ ಪೇಜಾವರ ಶ್ರೀಶ್ರೀ ವಿಶ್ವೇಶ ತೀರ್ಥ ಪಾದರುನಡೆದಾಡುವ ದೇವರಂತೆ ನಮ್ಮ ನಿಮ್ಮ ನಡುವೆ ಮಾರ್ಗದರ್ಶಕರಾಗಿ ನಡುವೆ ಇದ್ದವರು. ಭಾರತ ದೇಶ ಓರ್ವ ಮಹಾನ್ ಸಂತ ಶ್ರೇಷ್ಠರನ್ನು ಕಳೆದುಕೊಂಡಿದೆ. ಆದರೆ ಅವರ ತೇಜಸ್ಸು, ವಿದ್ವತ್ತು, ಸಮಾಜದ ಚಿಂತನೆ, ದೇಶದ ಚಿಂತನೆ, ಸಮನ್ವಯತೆ, ಮನುಕುಲಕ್ಕೆ ಅವರು ನೀಡಿದ ಸಂದೇಶಗಳ ಮೂಲಕ ಅವರು ನಮ್ಮ ಜತೆಗೇ ಇದ್ದಾರೆ ಎನ್ನುವುದು ನಿತ್ಯಸತ್ಯ. ಪೂಜ್ಯ ಶ್ರೀಗಳವರ ಅಗಲುವಿಕೆ ದುಃಖವನ್ನುಂಟು ಮಾಡಿದೆ ಎಂದು ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕಣಿಯೂರುಶ್ರೀ ಸಂತಾಪ:


ರಾಷ್ಟ್ರಪ್ರೇಮದ ಸಂದೇಶಗಳ ಮೂಲಕ ಜಗತ್ತಿನಲ್ಲಿಯೇ ಜನಮನ್ನಣೆ ಪಡೆದ ಮಾಧ್ವ ಪರಂಪರೆಯನ್ನು ಪಸರಿಸಿದ ಮಹಾಸಂತರಾಗಿದ್ದಾರೆ. ಅವರ ಮಾರ್ಗದರ್ಶಕ ಸಂದೇಶ, ತತ್ವವಿಚಾರಗಳು ನಮ್ಮೊಂದಿಗೆ ಸದಾ ಇರುತ್ತವೆ. ಪೇಜಾವರಶ್ರೀ ಕೃಷ್ಣಸಾಯುಜ್ಯಗೊಂಡಿರುವುದು ಅಪಾರ ದು:ಖ ತಂದಿದೆ ಎಂದು ಕನ್ಯಾನ ಕಣಿಯೂರು ಶ್ರೀ ಮಹಾಬಲ ಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ.

 

ಬಾಳೆಕೋಡಿಶ್ರೀ ಸಂತಾಪ:


ದಲಿತಕೇರಿಗಳ ಭೇಟಿ, ದಲಿತರೊಂದಿಗೆ ಸಹ ಪಂಕ್ತಿ ಇನ್ನಿತರ ಸಾಮಾಜಿಕ ಮೈಲಿಗಲ್ಲುಗಳಿಗೆ ನಾಂದಿ ಹಾಡಿದ ಮಾಧ್ವ ಪರಂಪರೆಯಲ್ಲಿ ವಿಶೇಷ ಸ್ಥಾನಮಾನ ಪಡೆದ ಪೇಜಾವರಶ್ರೀ ವಿಶ್ವೇಶತೀರ್ಥರು ಸಮಕಾಲೀನ ಅಗ್ರಮಾನ್ಯ ಸಂತರ ಸಾಲಿನಲ್ಲಿ ಗುರುತಿಸಲ್ಪಟ್ಟಿದ್ದಾರೆ. ಪೂಜ್ಯರು ಕೃಷ್ಣಪಾದೈಕ್ಯವಾಗಿರುವುದು ಅತೀವ ದು:ಖವಾಗಿದೆ ಎಂದು ಕನ್ಯಾನ ಬಾಲೆಕೋಡಿ ಸದ್ಗುರು ಡಾ.ಶಶೀಕಾಂತಮಣಿ ಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ.

 

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...