Tuesday, January 27, 2026

ಇಹಲೋಕ ತ್ಯಜಿಸಿದ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ

ಉಡುಪಿ: ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಗಳು ಇನ್ನಿಲ್ಲ. ಕಳೆದ ಒಂಭತ್ತು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪೇಜಾವರ ಸ್ವಾಮೀಜಿ ಇವತ್ತು ಪೇಜಾವರ ಮಠದಲ್ಲಿ ಇಹಲೋಕ ತ್ಯಜಿಸಿದ್ದಾರೆ.

ಉಡುಪಿಯ ಅಷ್ಟಮಠಗಳಲ್ಲಿ ಒಂದಾಗಿರುವ ಪೇಜಾವರ ಮಠದ ಮುಖ್ಯಸ್ಥರಾಗಿದ್ದ ಶ್ರೀ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ, ‘ಪೇಜಾವರ ಶ್ರೀಗಳು’ ಎಂದೇ ಚಿರಪರಿಚಿತರು. 1931ರ ಏಪ್ರಿಲ್​​ 27ರ ಸೋಮವಾರದಂದು ಜನಿಸಿದ ವಿಶ್ವೇಶತೀರ್ಥರು, ನಾರಾಯಣಾಚಾರ್ಯ ಮತ್ತು ಕಮಲಮ್ಮ ದಂಪತಿಯ ಎರಡನೇ ಸುಪುತ್ರ. ಉಡುಪಿಯಿಂದ ಸುಮಾರು 120 ಕಿ.ಮೀ. ದೂರದಲ್ಲಿರುವ ಉಪ್ಪಿನಂಗಡಿ ಸಮೀಪದ ರಾಮಕುಂಜ, ಪೇಜಾವರ ಶ್ರೀಗಳ ಜನ್ಮಸ್ಥಳ. ಶ್ರೀಗಳ ಪೂರ್ವಾಶ್ರಮದ ಹೆಸರು ವೆಂಕಟರಮಣ ತನ್ನ ಪ್ರಾಥಮಿಕ ವಿದ್ಯಾಭ್ಯಾಸವನ್ನು ರಾಮಕುಂಜದ ಸಂಸ್ಕೃತ ಎಲಿಮೆಂಟರಿ ಶಾಲೆಯಲ್ಲಿ ಮುಗಿಸಿದ ವೆಂಕಟರಮಣಗೆ ಎಂಟು ವರ್ಷ ತುಂಬುತ್ತಿರುವಾಗಲೇ ಸನ್ಯಾಸ ದೀಕ್ಷೆ ನಡೆಯುತ್ತದೆ.

ಅದಾಗಲೇ ಪೇಜಾವರ ಮಠಾಧೀಶರಾಗಿದ್ದ ಶ್ರೀ ವಿಶ್ವಮಾನ್ಯ ತೀರ್ಥರು ಪರ್ಯಾಯದ ಅವಧಿ ಮುಗಿದ ಬಳಿಕ ಲೋಕ ಸಂಚಾರಕ್ಕೆ ತೆರಳುತ್ತಾರೆ. ಪಯಣದ ಹಾದಿಯಲ್ಲಿ ವ್ಯಾಸತೀರ್ಥರ ತಪೋಭೂಮಿ ಹಂಪಿಗೆ ‘ವೆಂಕಟರಮಣ’ರನ್ನು ಕರೆಸಿಕೊಂಡ ವಿಶ್ವಮಾನ್ಯ ಶ್ರೀಗಳು, 1938ರ ಡಿಸೆಂಬರ್​ 3ರಂದು ಹಂಪಿಯ ಮುಖ್ಯಪ್ರಾಣನ ಸನ್ನಿಧಿಯಲ್ಲಿ ರಾಮಕುಂಜ ಎನ್ನುವ ಪುಟ್ಟ ಹಳ್ಳಿಯ ಬಾಲಕನಿಗೆ ಸನ್ಯಾಸ ದೀಕ್ಷೆ ಬೋಧಿಸುತ್ತಾರೆ. ಅಂದಿನಿಂದ ವೆಂಕಟರಮಣ ಹೆಸರಿನ ಬಾಲಕ ವಿಶ್ವೇಶತೀರ್ಥರಾಗಿ, ಅಧೋಕ್ಷಜ ತೀರ್ಥರ ಸಂಸ್ಥಾದ ಉತ್ತರಾಧಿಕಾರಿಯಾಗಿ, ಪೇಜಾವರ ಮಠದ 32ನೆಯ ಯತಿಯಾಗಿ ಮಧ್ವಾಚಾರ್ಯರ ವೇದಾಂತ ಪೀಠವ್ನನೇರುತ್ತಾರೆ.

ಬೆಂಗಳೂರಿನ ವಿದ್ಯಾಪೀಠದಲ್ಲಿ ಪೇಜಾವರ ಶ್ರೀಗಳ ಅಂತ್ಯಸಂಸ್ಕಾರ:

ಇಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಯವರೆಗೆ ಉಡುಪಿಯ ಅಜ್ಜರ ಕಾಡು ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ಬೆಂಗಳೂರಿಗೆ ಕರೆತರಲಾಗುವುದು. ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಶ್ರೀಗಳ ಪಾರ್ಥೀವ ಶರೀರವನ್ನು ಇಡಲಾಗುವುದು.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...