Friday, June 27, 2025

ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶಾಭಿಷೇಕ ಹೊರೆಕಾಣಿಕೆ

ವಿಟ್ಲ: ಪೆರುವಾಯಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಅಂಗವಾಗಿ ಮಂಗಳವಾರ ಪೆರುವಾಯಿ ಶ್ರೀ ರಾಜರಾಜೇಶ್ವರೀ ಭಜನಾ ಮಂದಿರದಿಂದ ಹಸಿರುವಾಣಿ ಹೊರೆಕಾಣಿಕೆಯ ಭವ್ಯ ಶೋಭಾಯಾತ್ರೆ ದೇವಾಲಯದವರೆಗೆ ನಡೆಯಿತು.
ಬೆಳಗ್ಗೆ ಶ್ರೀ ರಾಜರಾಜೇಶ್ವರೀ ಭಜನಾ ಮಂದಿರದಿಂದ ಹೊರಟ ಭಜನಾ ಸಂಕೀರ್ತನೆಯನ್ನು ರಾಮಕೃಷ್ಣ ಕಾಟುಕುಕ್ಕೆ ಉದ್ಘಾಟಿಸಿದರು. ಹಸಿರುವಾಣಿ ಹೊರೆಕಾಣಿಕೆಯ ಭವ್ಯ ಶೋಭಾಯಾತ್ರೆಗೆ ಗಣುಮೂಲೆ ಕೆ. ಜಿ. ಸುಬ್ರಹ್ಮಣ್ಯ ಭಟ್ ಚಾಲನೆ ನೀಡಿದರು. ವೈದಿಕರ ಸಹಿತ ತಂತ್ರಿಗಳ ಆಗಮನವಾಗಿ ಧಾರ್ಮಿಕ ವಿಧಿವಿಧಾನಗಳನ್ನು ಆರಂಭಿಸಿದರು.
ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರಾದ ಕಲಾತ್ತಿಮಾರು ವೆಂಕಪ್ಪ ಮಾರ್ಲ ಮತ್ತು ಸಚಿನ್ ಅಡ್ವಾಯಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅಡಿವಾಯಿ ನಾರಾಯಣ ರೈ, ಕಾರ್‍ಯಾಧ್ಯಕ್ಷ ಎಂ.ಚಂದ್ರಹಾಸ ಕಾವ ಗುರುಪುರ, ಗೌರವ ಸಲಹೆಗಾರ ಗೋಪಿನಾಥ ಶೆಟ್ಟಿ, ಕಾರ್‍ಯದರ್ಶಿ ಮಂಜುನಾಥ ಶೆಟ್ಟಿ ಕಲಾತ್ತಿಮಾರು, ಬ್ರಹ್ಮಕಲಶ ಸಮಿತಿ ಪ್ರಧಾನ ಕಾರ್‍ಯದರ್ಶಿ ಪ್ರಭಾಕರ ಶೆಟ್ಟಿ ಕಲಾತ್ತಿಮಾರು, ಕೋಶಾಧಿಕಾರಿ ಮನೋಹರ ಶೆಟ್ಟಿ ಪೇರಡ್ಕ, ಪ್ರಧಾನ ಕಾರ್‍ಯದರ್ಶಿ ಪ್ರಕಾಶ್ಚಂದ್ರ ಶೆಟ್ಟಿ, ಸದಾಶಿವ ಅಳಿಕೆ, ಹೊರೆಕಾಣಿಕೆ ಸಮಿತಿಯ ಪುರುಷೋತ್ತಮ ಶೆಟ್ಟಿ ಕೆಳಗಿನಮನೆ, ಮಧುಸೂದನ ಶೆಟ್ಟಿ ಕಡೆಂನಿಲ ಮತ್ತು ಇತರ ಉಪಸಮಿತಿಗಳ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...