Tuesday, January 27, 2026

ಜ.27: ಪೆರುವಾಯಿಯಲ್ಲಿ ನವೀಕೃತ ಸ್ಮಶಾನ ಲೋಕಾರ್ಪಣೆ

ವಿಟ್ಲ: ಪೆರುವಾಯಿ ಮುಚ್ಚಿರಪದವು ಫಾತಿಮಾ ಮಾತೆಯ ದೇವಾಲಯದಲ್ಲಿ ಸಮುದಾಯ ದಿನ ಆಚರಣೆ, ನೂತನ ನವೀಕೃತ ಸ್ಮಶಾನ ಲೋಕಾರ್ಪಣೆ ಹಾಗೂ ತೆರೆದ ವೇದಿಕೆಯ ಉದ್ಘಾಟನಾ ಸಮಾರಂಭ ಜ.27 ರಂದು ನಡೆಯಲಿದೆ.
ಬೆಳಗ್ಗೆ ನವೀಕೃತ ಸ್ಮಶಾನ ಲೋಕಾರ್ಪಣೆ ಹಾಗೂ ಸ್ಮಶಾನ ಆಶೀರ್ವಚನವನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಪೀಟರ್ ಪಾವ್ಲ್ ಸಲ್ದಾನಾ ಅವರು ನೀಡಲಿದ್ದಾರೆ. ಬಳಿಕ ಅವರ ನೇತೃತ್ವದಲ್ಲಿ ಬಲಿ ಪೂಜೆ ನಡೆಯಲಿದೆ. ಸಭಾ ಕಾರ್‍ಯಕ್ರಮದಲ್ಲಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮಂಗಳೂರು ಮಾಜಿ ಶಾಸಕ ಜೆ.ಆರ್ ಲೋಬೋ ಭಾಗವಹಿಸಲಿದ್ದಾರೆ ಎಂದು ಚರ್ಚ್‌ನ ಧರ್ಮ ಗುರು ವಿಶಾಲ್ ಮೋನಿಸ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

Bantwal : ರಥಸಪ್ತಮಿಯ ಪ್ರಯುಕ್ತ 108 ಸೂರ್ಯ ನಮಸ್ಕಾರ ಕಾರ್ಯಕ್ರಮ

ಬಂಟ್ವಾಳ : ಸಂಸ್ಕಾರ ಸಂಘಟನೆ ಸೇವೆಯ ಧ್ಯೇಯ ಉದ್ದೇಶಗಳನ್ನು ಹೊಂದಿರುವ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ( ರಿ) ಕರ್ನಾಟಕ ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಮಂಗಳೂರು, ಬಂಟ್ವಾಳ ತಾಲೂಕು ವತಿಯಿಂದ ಜ....

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...