Wednesday, February 12, 2025

’ಸಂಘಟಿತರಾಗಿ ಕೆಲಸ ಮಾಡಿದಾಗ ಧರ್ಮಕೇಂದ್ರಗಳ ಬೆಳವಣಿಗೆ’-ಪೀಟರ್ ಪಾವ್ಲ್ ಸಲ್ದಾನಾ

ವಿಟ್ಲ: ಸಂಘಟಿತರಾಗಿ ಕೆಲಸ ಮಾಡಿದಾಗ ಧರ್ಮಕೇಂದ್ರಗಳ ಬೆಳವಣಿಗೆಯಾಗುತ್ತದೆ. ಎಲ್ಲರೂ ಒಂದೇ ಮನಸ್ಸಿನಿಂದ ಒಟ್ಟು ಸೇರಿ ಕೆಲಸ ಮಾಡಿದಾಗ ಯಶಸ್ಸು ಗಳಿಸಬಹುದು ಎಂದು ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಪೀಟರ್ ಪಾವ್ಲ್ ಸಲ್ದಾನಾ ಹೇಳಿದರು.
ಅವರು ಭಾನುವಾರ ಪೆರುವಾಯಿ ಮುಚ್ಚಿರಪದವು ಫಾತಿಮಾ ಮಾತೆಯ ದೇವಾಲಯದಲ್ಲಿ ಸಮುದಾಯ ದಿನ ಆಚರಣೆ, ನವೀಕರಣಗೊಂಡ ನೂತನ ಸ್ಮಶಾನ ಹಾಗೂ ತೆರೆದ ಸಭಾಂಗಣ ಲೋಕಾರ್ಪಣೆಗೊಳಿಸಿ, ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ನಾನು ಹಿಂದೆ ಇಲ್ಲಿ ಸೇವೆ ಸಲ್ಲಿಸುವ ವೇಳೆ ಸಿಕ್ಕಿದ ಅನುಭವಗಳು ಉತ್ತಮವಾಗಿತ್ತು. ಆ ಅನುಭವಗಳನ್ನು ಎಲ್ಲಾ ಕಡೆ ಹೇಳುತ್ತಿದ್ದೇನೆ. ಇದು ಎಲ್ಲರಿಗೂ ಪ್ರೇರಣೆಯಾಗಿದೆ. ಪೆರುವಾಯಿ ಧರ್ಮ ಕೇಂದ್ರ ಎಲ್ಲರಿಗೂ ಮಾದರಿಯಾಗಿ ಕೆಲಸ ಮಾಡುತ್ತಿದೆ ಪೆರುವಾಯಿ ವ್ಯಾಪ್ತಿಯಲ್ಲಿ ಹಲವು ಬಡವರಿದ್ದರೂ ಕೂಡಾ ಅವರು ಉದಾರ ಮನಸ್ಸು ಹೊಂದಿದವರು ಎಂದು ಹೇಳಿದರು.
ಸಭಾ ಕಾರ್‍ಯಕ್ರಮದಲ್ಲಿ ಧರ್ಮಾಧ್ಯಕ್ಷ ಪೀಟರ್ ಪಾವ್ಲ್ ಸಲ್ದಾನಾ ಹಾಗೂ ಪೆರುವಾಯಿ ಫಾತಿಮಾ ಮಾತೆಯ ಧರ್ಮ ಗುರುಗಳನ್ನು ಸನ್ಮಾನಿಸಲಾಯಿತು. ಚರ್ಚ್‌ಗೆ ಸಹಕಾರ ನೀಡಿದ ಭಕ್ತರನ್ನು ಇದೇ ಸಂದರ್ಭ ಗೌರವಿಸಲಾಯಿತು. ನಾನಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್‍ಯಕ್ರಮ ನಡೆಯಿತು.
ನಿವೃತ್ತ ಧರ್ಮಗುರುಗಳಾದ ಪೀಟರ್ ಸೆರಾವೊ, ಅಲೋಶಿಯಸ್ ಡಿಸೋಜ, ಧರ್ಮಗುರು ಜೀವನ್ ಲೋಬೋ, ಮಂಗಳೂರು ಮಾಜಿ ಶಾಸಕ ಜೆ.ಆರ್ ಲೋಬೋ, ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಲ್ಫ್ ಡಿ’ಸೋಜ, ಸಾರಿಗೆ ಅಧಿಕಾರಿ ಜಾನ್ ಮಿಸ್ಕೀತ್, ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಜೋನ್ಸನ್ ಮೊಂತೆರೋ, ಕಾರ್‍ಯದರ್ಶಿ ವಿಲಿಯಂ ಡಿ’ಸೋಜ ಉಪಸ್ಥಿತರಿದ್ದರು.
ಧರ್ಮಗುರು ವಿಶಾಲ್ ಮೋನಿಸ್ ಸ್ವಾಗತಿಸಿದರು. ಕಾರ್‍ಯಕ್ರಮದ ಸಂಚಾಲಕ ವಿನ್ಸೆಂಟ್ ಡಿ’ಸೋಜ ವಂದಿಸಿದರು. ಸಂತೋಷ್ ಮೊಂತೆರೋ ಹಾಗೂ ಸೀಮಾ ಕಾರ್‍ಯಕ್ರಮ ನಿರೂಪಿಸಿದರು.

More from the blog

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...