Wednesday, June 25, 2025

ಪೆಟ್ರೋಲ್ ಬೆಲೆ ನಾಟೌಟ್ 100 ಪರಂಗಿಪೇಟೆಯಲ್ಲಿ ಪುದುವಲಯ ಹಾಗೂ ಯುವ ಕಾಂಗ್ರೇಸ್ ವತಿಯಿಂದ ಪ್ರತಿಭಟನೆ

ಬಂಟ್ವಾಳ: ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ಕೇಂದ್ರ ಸರಕಾರದ ವಿರುದ್ಧ ಪುದು ವಲಯ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ವತಿಯಿಂದ ಫರಂಗಿಪೇಟೆ ಪೆಟ್ರೋಲ್ ಬಂಕಿನ ಮುಂಭಾಗ 100 ನಾಟೌಟ್ ಪ್ರತಿಭಟನೆ ನಡೆಯಿತು.

ಜಿ.ಪಂ.ಮಾಜಿ ಸದಸ್ಯ ಉಮ್ಮರ್ ಫಾರೂಕ್ ಮಾತನಾಡಿ, ಹಿಂದೆ ಯುಪಿಎ ಸರಕಾರ ಇದ್ದಾಗ ಪೆಟ್ರೋಲ್ ಬೆಲೆಯನ್ನು 70 ರೂ.ದಾಟಲು ಬಿಟ್ಟಿರಲಿಲ್ಲ. ಆದರೆ ಬಿಜೆಪಿ ಸರಕಾರದ ಕೊರೊನಾ ಸಂದರ್ಭದಲ್ಲಿ ಊಟಕ್ಕೂ ಪರದಾಡುವ ಪರಿಸ್ಥಿತಿಯಲ್ಲಿ ಪೆಟ್ರೋಲ್ ಬೆಲೆ ಏರಿಸುವ ಮೂಲಕ ಜನರ ಜೀವನದ ಮೇಲೆ ಬರೆ ಎಳೆಯುವ ಕೆಲಸ ಮಾಡುತ್ತಿದೆ. ಪ್ರಧಾನಿ ಮೋದಿ ಅವರೇ ನಿಮ್ಮ ಆಚ್ಚೇ ದಿನ ನಮಗೆ ಬೇಕಿಲ್ಲ. ಹಿಂದೆ ಪೆಟ್ರೋಲ್ 60 ರೂ.ಗಳಿಗೆ ಸಿಗುತ್ತಿದ್ದ ದಿನಗಳೇ ಸಾಕು ಎಂದರು.

ಕೇವಲ ಒಂದು ವರ್ಷದಲ್ಲಿ 48 ಬಾರಿ ಬೆಲೆ ಏರಿಸುವ ಕೆಲಸವನ್ನು ಸರಕಾರ ಮಾಡಿದೆ. ಪೆಟ್ರೋಲ್ ಬೆಲೆಯ ಜತೆಗೆ ವಿದ್ಯುತ್ ಶುಲ್ಕ, ದಿನಬಳಕೆಯ ವಸ್ತುಗಳನ್ನು ಏರಿಸಿದ್ದು, ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಳ್ಳಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದರು.

ಪುದು ಗ್ರಾ.ಪಂ.ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಮಾತನಾಡಿ, ಮುಂದಿನ ದಿನಗಳಲ್ಲಿ ಈ ಬಿಜೆಪಿ ಸರಕಾರವನ್ನು ಕಿತ್ತು ಹಾಕಿ ಕಾಂಗ್ರೆಸ್ ಸರಕಾರವನ್ನು ಅಧಿಕಾರಕ್ಕೆ ತರುತ್ತಾರೆ. ಬೆಲೆ ಕಡಿಮೆ ಆಗದೇ ಇದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಿದ್ದೇವೆ ಎಂದು ಎಚ್ಚರಿಸಿದರು.

ಪುದು ಗ್ರಾ.ಪಂ.ಉಪಾಧ್ಯಕ್ಷೆ ಲಿಡಿಯಾ ಪಿಂಟೋ, ಸದಸ್ಯರಾದ ಭಾಸ್ಕರ್ ರೈ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾಕ ಮೋರ್ಚಾ ಅಧ್ಯಕ್ಷ ಇಮ್ತಿಯಾಜ್ ತುಂಬೆ, ಇಕ್ಬಾಲ್ ಸುಜೀರ್, ರಝಾಕ್ ಅಮ್ಮೆಮಾರ್, ಮಮ್ತಾಜ್ ಸುಜೀರ್, ಫೆಝಲ್ ಅಮ್ಮೆಮಾರ್, ಹೇಮಲತಾ ಕುಂಪನಮಜಲು, ಲವಿನಾ ಕುಂಪನಮಜಲು, ರಿಯಾಜ್ ಕುಂಪನಮಜಲು, ಝಾಹೀರ್ ಕುಂಪನಮಜಲು, ಮೊಹಮ್ಮದ್ ಮೋನು ಫರಂಗಿಪೇಟೆ, ಝೀನರ್ ಕುಂಜರ್ಕಳ, ಹುಸೈನ್ ಪಾಡಿ, ರಶೀದಾ ಮಾರಿಪಳ್ಳ, ಕಿಶೋರ್ ಸುಜೀರ್, ರೆಹನಾ ಮಾರಿಪಳ್ಳ, ಇಶಾನ್ ಫರಂಗಿಪೇಟೆ, ಹಕೀಂ ಮಾರಿಪಳ್ಳ, ಮಜೀದ್ ಪೇರಿಮಾರ್, ನಿಜಾಮ್ ಕುಂಜರ್ಕಳ, ಫಯಾಜ್ ಅಮ್ಮೆಮಾರ್, ದೀಕ್ಷಿತ್ ಅತ್ತಾವರ, ಸಲೀಂ ಫರಂಗಿಪೇಟೆ, ಸಲಾಂ ಮಲ್ಲಿ, ಗಫೂರ್ ಫರಂಗಿಪೇಟೆ, ಇಸ್ಮಾಯಿಲ್ ಮಾಜಪೆ, ರಿಲ್ವಾನ್ ಅಮ್ಮೆಮಾರ್, ಇಂಶಾದ್ ಮಾರಿಪಳ್ಳ, ಸಜೀಜ್ ಫರಂಗಿಪೇಟೆ, ಆತೀಕ್ ಫರಂಗಿಪೇಟೆ, ರಫೀಕ್ ಫೆರಿಮಾರ್, ಕಿಶೋರ್ ಕುಂಬ್ಡೇಲು, ಕೆರೀಂ ಮಾರಿಪಳ್ಳ ಮೊದಲಾದವರು ಉಪಸ್ಥಿತರಿದ್ದರು.

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ,ಪ್ರಾಥಮಿಕ,ಪ್ರೌಢಶಾಲೆ,ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ರಜೆ...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...