Friday, February 7, 2025

ವಿವಾದಿತ ಪರಂಗಿಪೇಟೆ ಮೀನಿನ ಮಾರ್ಕೆಟ್ ಸ್ಥಳಕ್ಕೆ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಬೇಟಿ ನೀಡಿ ಪರಿಶೀಲನೆ

ಬಂಟ್ವಾಳ: ವಿವಾದಿತ ಪರಂಗಿಪೇಟೆ ಮೀನಿನ ಮಾರ್ಕೆಟ್ ಸ್ಥಳಕ್ಕೆ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಬೇಟಿ ನೀಡಿ ಪರಿಶೀಲನೆ ನಡೆಸಿದರು.
ರೈಲ್ವೆ ಇಲಾಖೆಯ ವರ ಜಮೀನು ಅತಿಕ್ರಮಿಸಿ ಪರಂಗಿಪೇಟೆ ಪ್ರದೇಶದ ದಲ್ಲಿ ಮೀನಿನ ಮಾರ್ಕೆಟ್, ತರಕಾರಿ, ಹಣ್ಣು ಹಂಪಲು ಅಂಗಡಿ ಗಳನ್ನು ಮಾಡಿದ್ದಾರೆ ಎಂಬುದು ರೈಲ್ವೆ ಇಲಾಖೆಯ ವರ ಆರೋಪವಾಗಿದ್ಧು , ಅಕ್ರಮ ಅಂಗಡಿಗಳನ್ನು ತೆರವುಗೊಳಿಸಬೇಕು ಎಂದು ರೈಲ್ವೆ ಇಲಾಖೆ ಯವರ ಒತ್ತಾಯವಾಗಿತ್ತು.
ಈ ಬಗ್ಗೆ 2016 ರಲ್ಲಿ ಅಂಗಡಿಗಳ ಮಾಲಕರಿಗೆ ನೋಟೀಸ್ ಜಾರಿ ಮಾಡಿದ್ದರು. ಅ ನಂತರ ನಿರಂತರವಾಗಿ ನೋಟೀಸ್ ನೀಡುತ್ತಾ ಬಂದಿರುವ ಇಲಾಖೆ ಕಳೆದ ವಾರ ಅಂತಿಮ ನೋಟೀಸ್ ಜಾರಿ ರೈಲ್ವೆ ಇಲಾಖೆ ಯ ಪೋಲೀಸ್ ಸಹಿತ ಡ್ರೋನ್ ಕ್ಯಾಮರಾ ಅಳವಡಿಸಿ ತೆರವು ಕಾರ್ಯಚರಣೆಗೆ ಮುಂದಾಗಿತ್ತು. ಆದರೆ ಸ್ಥಳೀಯ ಹಾಗೂ ಅಂಗಡಿ ಮಾಲೀಕರ ವಿರೋಧ ದ ಹಿನ್ನೆಲೆಯಲ್ಲಿ ಮಾತುಕತೆಯನ್ನು ನಡೆಸಿದ ಇಲಾಖೆ ಜ.15 ರವರೆಗೆ ಕಾಲಾವಕಾಶ ನೀಡಿತ್ತು.‌ಅದರೊಳಗೆ ಅಂಗಡಿಗಳನ್ನು ತೆರವುಗೊಳಿಸಲು ನೋಟೀಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮೀನು ಮಾರ್ಕೆಟ್ ಹಾಗೂ ಇತರ ಅಂಗಡಿ ಮಾಲಕರಿಗೆ ಅಲ್ಲೇ ಸಮೀಪದಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಲು ಸ್ಥಳ ಗುರುತಿಸಿ ಬಳಿಕ ಗ್ರಾಮ ಪಂಚಾಯತ್ ಇವರಿಗೆ ಬದಲಿ ವ್ಯವಸ್ಥೆ ಶೀಘ್ರವಾಗಿ ಕಲ್ಪಿಸಿಕೊಡಲು ಸೂಚಿಸಿ ದರು.
ಈ ಸಂದರ್ಭದಲ್ಲಿ ಗ್ರಾ.ಪಂ.ಅದ್ಯಕ್ಷ ರಮ್ಲಾನ್ ಪುದು, ಪ್ರಮುಖರಾದ ಫಾರೂಕ್ ಪರಂಗಿಪೇಟೆ,ಹಾಶೀರ್ ಪೇರಿಮಾರ್, ಬಂಟ್ವಾಳ ಸಿ.ಐ. ನಾಗರಾಜ್, ಬಂಟ್ವಾಳ ಗ್ರಾಮಾಂತರ ಎಸ್.ಐ.ಪ್ರಸನ್ನ ಮತ್ತಿತರ ರು ಉಪಸ್ಥಿತರಿದ್ದರು

More from the blog

ಅನರ್ಹ ಮತದಾರರ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಗೆ ಪರಿಗಣಿಸಬಾರದು: ಉಚ್ಚ ನ್ಯಾಯಾಲಯದ ತೀರ್ಪು

ಬಂಟ್ವಾಳ: ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಯಲ್ಲಿ ಪರಿಗಣಿಸಬಾರದು ಎಂದು ಕರ್ನಾಟಕ ಉಚ್ಚ ನ್ಯಾಯಲಯವು ಐತಿಹಾಸಿಕ ತೀರ್ಪನ್ನು ಹೊರಡಿಸಿದೆ. ಮಡಂತ್ಯಾ‌ರ್ ಪ್ರಾಥಮಿಕ...

ಬಂಟ್ವಾಳ : ತಾಲೂಕು ಆಸ್ಪತ್ರೆಗೆ ವೈದ್ಯರನ್ನು ನೀಡಿ – ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ

ಬಂಟ್ವಾಳ: ಸುಸಜ್ಜಿತವಾದ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆಯಾದರೂ ರೋಗಿಗಳಿಗೆ ಚಿಕಿತ್ಸೆ ನೀಡಲು ಸರಿಯಾದ ವಿಭಾಗದಲ್ಲಿ ವೈದ್ಯರುಗಳಿಲ್ಲದೆ, ತಾಲೂಕಿನ ಬಡ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಸಾಮಾಜಿಕ ಕಾರ್ಯಕರ್ತ ಸಮಾದ್ ಕೈಕಂಬ ಅವರು...

ಕಣಿಯೂರು: ನುಡಿನಮನ, ಯಕ್ಷಗಾನ ತಾಳಮದ್ದಳೆ

ವಿಟ್ಲ: ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ಇತ್ತೀಚೆಗೆ ನಿಧನರಾದ ಯಕ್ಷಗಾನ ಕಲಾವಿದ, ಉಪನ್ಯಾಸಕ ಪಕಳಕುಂಜ ಶ್ಯಾಮ್ ಭಟ್, ಕೂಡ್ಲು ಗಣಪತಿ ಭಟ್ ಅವರಿಗೆ ನುಡಿ ನಮನ ಹಾಗೂ ಯಕ್ಷಗಾನ ತಾಳಮದ್ದಳೆ...

ಒಡಿಯೂರಿನಲ್ಲಿ 25ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಒಡಿಯೂರು ರಥೋತ್ಸವ ತುಳುನಾಡ ಜಾತ್ರೆಯ ಅಂಗವಾಗಿ 25 ನೇ ವರ್ಷದ ತುಳು ಸಾಹಿತ್ಯ ಸಮ್ಮೇಳನ ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ನಡೆಯಿತು. ಸಮ್ಮೇಳನ ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ...